AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು

ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.

ನಿಯಂತ್ರಣ ಕಳೆದುಕೊಂಡ ಚಾಲಕ; ಕಾರು, ಬೈಕು, ನಿಂತಿದ್ದ ಟ್ರಕ್, ಜನರಿಗೆ ಡಿಕ್ಕಿ ಹೊಡೆದ ಬಸ್​, 6 ಮಂದಿ ಸಾವು
ಅಪಘಾತ ನಡೆದ ಸ್ಥಳ
TV9 Web
| Edited By: |

Updated on: Jan 31, 2022 | 8:13 AM

Share

ಕಾನ್ಪುರ:  ಎಲೆಕ್ಟ್ರಿಕ್​​  ಬಸ್​​ವೊಂದು ನಿಯಂತ್ರಣ ಕಳೆದುಕೊಂಡು ಮೂರ್ನಾಲ್ಕು ವಾಹನಗಳು, ರಸ್ತೆ ಬದಿಯಲ್ಲಿ ನಿಂತಿದ್ದ ಜನರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಮೃತಪಟ್ಟು, 12ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಕಾನ್ಪುರದ ಟಾಟ್ ಮಿಲ್​​​ನಲ್ಲಿ ನಡೆದಿದೆ. ಬಸ್​ ಡಿಕ್ಕಿಯಾದ ರಭಸಕ್ಕೆ ಮೂರು ಕಾರುಗಳು, ಹಲವು ಬೈಕ್​​ಗಳು ಸಂಪೂರ್ಣ ನಾಶಗೊಂಡಿವೆ. ಅಷ್ಟೇ ಅಲ್ಲ, ಅಲ್ಲಿಯೇ ಇದ್ದ ಟ್ರಾಫಿಕ್ ಪೊಲೀಸ್ ಬೂತ್​, ನಿಂತಿದ್ದ ಟ್ರಕ್​ಗೆ ಕೂಡ ಡಿಕ್ಕಿಯಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇಷ್ಟೆಲ್ಲ ಅವಾಂತರ ಮಾಡಿದ ಬಸ್​ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅವನಿಗಾಗಿ ಹುಡುಕುತ್ತಿದ್ದೇವೆ. ಸದ್ಯ ಗಾಯಗೊಂಡ ಎಲ್ಲರನ್ನೂ ಸಮೀಪದ ಆಸ್ಪತ್ರೆಗೆ ದಾಖಲು ಮಾಡಿದ್ದೇವೆ ಎಂದು ಪೂರ್ವ ಕಾನ್ಪುರದ ಡೆಪ್ಯೂಟಿ ಕಮಿಷನರ್​ ಪ್ರಮೋದ್​ ಕುಮಾರ್  ಹೇಳಿದ್ದಾರೆ.  ಚಾಲಕ ಅತ್ಯಂತ ವೇಗವಾಗಿ ಬಸ್​ ಚಾಲನೆ ಮಾಡುತ್ತಿದ್ದ. ಹೀಗಾಗಿ ನಿಯಂತ್ರಣ ಕಳೆದುಕೊಂಡಿದ್ದಾನೆ ಎಂದು ಹೇಳಿದ್ದಾರೆ.

ಬಸ್​ ದುರಂತದಲ್ಲಿ 6 ಮಂದಿ ಸಾವನ್ನಪ್ಪುತ್ತಿದ್ದಂತೆ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಟ್ವೀಟ್​ ಮಾಡಿ, ಸಂತಾಪ ಸೂಚಿಸಿದ್ದಾರೆ. ಕಾನ್ಪುರದಲ್ಲಿ ರಸ್ತೆ ಅಪಘಾತದ ಸುದ್ದಿ ಕೇಳಿದೆ. ಮೃತರ ಕುಟುಂಬಗಳಿಗೆ ನೋವು ಸಹಿಸುವ ಶಕ್ತಿ ಭಗವಂತ ನೀಡಲಿ. ಗಾಯಗೊಂಡವರು ಬಹುಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಇಂದು ವಿಶ್ವಾಸದ್ರೋಹದ ದಿನ ಆಚರಿಸುವುದಾಗಿ ರೈತ ಮುಖಂಡ ರಾಕೇಶ್ ಟಿಕಾಯತ್​ ಘೋಷಣೆ; ಕೇಂದ್ರದ ವಿರುದ್ಧ ಮತ್ತೆ ಸಿಡಿಮಿಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ