AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ

ನಾವು 2023ರ ವೇಳೆಗೆ ಪ್ರಮುಖ ಹೆದ್ದಾರಿಗಳಲ್ಲಿ 600 ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಚಾರ್ಜಿಂಗ್ ಸ್ಟೇಷನ್‌ಗಳು ಸೌರ ಅಥವಾ ಪವನ ವಿದ್ಯುತ್‌ನಂತಹ ನವೀಕರಿಸಬಹುದಾದ ಮೂಲಗಳಿಂದ ಚಾಲಿತವಾಗಲಿದೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.

2 ವರ್ಷಗಳಲ್ಲಿ ಪೆಟ್ರೋಲ್ ವಾಹನ- ಎಲೆಕ್ಟ್ರಿಕ್ ಕಾರುಗಳ ಬೆಲೆ ಒಂದೇ ಆಗಲಿದೆ; ಸಚಿವ ನಿತಿನ್ ಗಡ್ಕರಿ
ನಿತಿನ್​ ಗಡ್ಕರಿ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Nov 25, 2021 | 1:54 PM

ನವದೆಹಲಿ: ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದಂತೆ ಜನರೆಲ್ಲರೂ ಎಲೆಕ್ಟ್ರಿಕ್ ಕಾರು, ಬೈಕಿನತ್ತ ಒಲವು ತೋರಿಸುತ್ತಿದ್ದಾರೆ. ಆದರೆ, ಎಲೆಕ್ಟ್ರಿಕ್ ವಾಹನಗಳ ಬೆಲೆ ಬಹಳ ದುಬಾರಿ ಇರುವುದರಿಂದ ಹಾಗೂ ಎಲೆಕ್ಟ್ರಿಕ್ ಚಾರ್ಜಿಂಗ್ ಸ್ಟೇಷನ್​ಗಳು ಹೆಚ್ಚಾಗಿ ಇಲ್ಲದ ಕಾರಣ ಗ್ರಾಹಕರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಕೊಂಚ ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ಕಾರುಗಳನ್ನು ಬಳಸಲು ವಾಹನ ಮಾಲೀಕರನ್ನು ಪ್ರೋತ್ಸಾಹಿಸುತ್ತಿದ್ದರೂ ಭಾರತದಲ್ಲಿ ವಿದ್ಯುತ್ ಚಾಲಿತ ವಾಹನಗಳ ಮಾರುಕಟ್ಟೆ ಬೇರೆ ದೇಶಗಳಿಗೆ ಹೋಲಿಸಿದರೆ ಹೆಚ್ಚೇನೂ ಅಭಿವೃದ್ಧಿಯಾಗಿಲ್ಲ. ಇದಕ್ಕೆ ಮುಖ್ಯ ಕಾರಣವೆಂದರೆ ಎಲೆಕ್ಟ್ರಿಕ್ ವಾಹನಗಳ ಹೆಚ್ಚಿನ ಬೆಲೆ. ಇದೀಗ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಸದ್ಯದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ವಾಹನಗಳ ಬೆಲೆ ಹಾಗೂ ಎಲೆಕ್ಟ್ರಿಕ್ ವಾಹನಗಳ ಬೆಲೆ ಎರಡೂ ಸಮಾನವಾಗಲಿದೆ. ಭಾರತದಲ್ಲಿ ಸದ್ಯದಲ್ಲೇ ಎಲೆಕ್ಟ್ರಿಕ್ ವಾಹನಗಳ ಕ್ರಾಂತಿಯಾಗಲಿದೆ ಎಂದಿದ್ದಾರೆ.

ಇಂಡಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಎಫ್​ವೈ 21 ಎಜಿಎಂನ ವಾರ್ಷಿಕ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದ ನಿತಿನ್ ಗಡ್ಕರಿ, ಎರಡು ವರ್ಷಗಳಲ್ಲಿ EVಗಳ (ಎಲೆಕ್ಟ್ರಿಕ್ ವಾಹನಗಳ) ಬೆಲೆಯು ಪೆಟ್ರೋಲ್ ವಾಹನಗಳಿಗೆ ಸಮಾನವಾಗಲಿದೆ ಎಂದು ಹೇಳಿದ್ದಾರೆ. ದೇಶದಲ್ಲಿ EV ಚಾರ್ಜಿಂಗ್ ಸೌಲಭ್ಯಗಳನ್ನು ವಿಸ್ತರಿಸಲು ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದ್ದಾರೆ.

ನಾವು 2023ರ ವೇಳೆಗೆ ಪ್ರಮುಖ ಹೆದ್ದಾರಿಗಳಲ್ಲಿ 600 ಇವಿ ಚಾರ್ಜಿಂಗ್ ಪಾಯಿಂಟ್‌ಗಳನ್ನು ಸ್ಥಾಪಿಸುತ್ತಿದ್ದೇವೆ. ಚಾರ್ಜಿಂಗ್ ಸ್ಟೇಷನ್‌ಗಳು ಸೌರ ಅಥವಾ ಪವನ ವಿದ್ಯುತ್‌ನಂತಹ ನವೀಕರಿಸಬಹುದಾದ ಮೂಲಗಳಿಂದ ಚಾಲಿತವಾಗಲಿದೆ ಎಂದು ಅವರು ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಕಡಿಮೆ ಇರುವ ಕಾರಣ ಅವುಗಳ ಬೆಲೆ ಹೆಚ್ಚಿದೆ ಎಂದು ಗಡ್ಕರಿ ಹೇಳಿದ್ದಾರೆ. ಭಾರತವು EV ಕ್ರಾಂತಿಯನ್ನು ನಿರೀಕ್ಷಿಸುತ್ತಿದೆ. 250 ಸ್ಟಾರ್ಟಪ್ ವ್ಯವಹಾರಗಳು ವೆಚ್ಚ-ಪರಿಣಾಮಕಾರಿ EV ತಂತ್ರಜ್ಞಾನ ರಚನೆಯಲ್ಲಿ ತೊಡಗಿವೆ. ಇದಲ್ಲದೆ, ಪ್ರಮುಖ ವಾಹನ ತಯಾರಕರು EV ಉತ್ಪಾದನೆಯ ವೆಚ್ಚವನ್ನು ಕಡಿತಗೊಳಿಸುವ ಪ್ರಯತ್ನದಲ್ಲಿದ್ದಾರೆ. ಇವಿಗಳ ಮೇಲೆ ಜಿಎಸ್‌ಟಿ ಕೇವಲ 5% ಮತ್ತು ಲಿಥಿಯಂ-ಐಯಾನ್ ಬ್ಯಾಟರಿಗಳ ಬೆಲೆಯೂ ಕುಸಿಯುತ್ತಿದೆ. ಪ್ರತಿ ಕಿಲೋಮೀಟರ್‌ಗೆ ಪೆಟ್ರೋಲ್ ಚಾಲಿತ ಕಾರಿನ ಬೆಲೆ ಪ್ರತಿ ಕಿಮೀಗೆ 10 ರೂ, ಡೀಸೆಲ್ ಪ್ರತಿ ಕಿ.ಮೀಗೆ 7 ರೂ. ಬೇಕಾದರೆ ಎಲೆಕ್ಟ್ರಿಕ್ ವಾಹನಗಳಿಗೆ ಪ್ರತಿ ಕಿ.ಮೀಗೆ 1 ರೂ. ಮಾತ್ರ ಖರ್ಚಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

ವರ್ಚುವಲ್ ಈವೆಂಟ್ ಅನ್ನು ಉದ್ದೇಶಿಸಿ ಮಾತನಾಡಿದ ಸಚಿವ ನಿತಿನ್ ಗಡ್ಕರಿ, ಸಾಂಪ್ರದಾಯಿಕ ಇಂಧನಗಳಾದ ಗ್ಯಾಸೋಲಿನ್ ಮತ್ತು ಡೀಸೆಲ್ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಲು ಪರ್ಯಾಯ ಇಂಧನಗಳಾದ ಎಥೆನಾಲ್ ಮತ್ತು ಸಂಕುಚಿತ ನೈಸರ್ಗಿಕ ಅನಿಲ (ಸಿಎನ್‌ಜಿ) ಬಳಕೆಗೆ ಒತ್ತು ನೀಡಿದ್ದಾರೆ. ಅದೇ ಸಮಯದಲ್ಲಿ, ಆಂತರಿಕ ದಹನಕಾರಿ ಎಂಜಿನ್ ಹೊಂದಿರುವ ಹೊಸ ವಾಹನಗಳ ನೋಂದಣಿ ವೆಚ್ಚದಲ್ಲಿ ಎಲೆಕ್ಟ್ರಿಕ್ ವಾಹನಗಳ ಪರಿಚಯವು ಬರುವುದಿಲ್ಲ ಎಂದು ಅವರು ಪುನರುಚ್ಚರಿಸಿದರು. ನಾವು ಎಲೆಕ್ಟ್ರಿಕ್ ವಾಹನಗಳು ಮತ್ತು ಪರ್ಯಾಯ ಇಂಧನಗಳ ಬಳಕೆಯನ್ನು ಪ್ರೋತ್ಸಾಹಿಸುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Nitin Gadkari: ಬೇರೆ ಪ್ರಯಾಣಿಕರೊಂದಿಗೆ ಕ್ಯೂನಲ್ಲಿ ನಿಂತು ವಿಮಾನ ಹತ್ತಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ವಿಡಿಯೋ ವೈರಲ್

ನಿತಿನ್ ಗಡ್ಕರಿ ತಮ್ಮ ಯೂಟ್ಯೂಬ್ ಚಾನಲ್​ನಿಂದ 4 ಲಕ್ಷ ರೂ. ಹೇಗೆ ಸಂಪಾದಿಸುತ್ತಾರೆ? ಏನಿದೆ ಅದರಲ್ಲಿ?

11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Devotional: ಶನಿ ಅಥವಾ ಸಾಡೇಸಾತಿಯಿಂದ ಪಾರಾಗಲು ಏನು ಮಾಡಬೇಕು?
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
Daily Horoscope: ಇಂದಿನ ದ್ವಾದಶ ರಾಶಿಗಳ ಫಲಾಫಲವನ್ನು ತಿಳಿಯಿರಿ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ
ಹೆಂಡತಿ, ಮಕ್ಕಳು ಇರುವ ಮನು ಹಿಂದೆ ಯಾಕೆ ಹೋದೆ? ಉತ್ತರಿಸಿದ ಸಂತ್ರಸ್ತ ಮಹಿಳೆ