AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ. ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ […]

ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?
ಸಾಧು ಶ್ರೀನಾಥ್​
| Edited By: |

Updated on: Sep 18, 2020 | 6:27 PM

Share

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ.

ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ ವಾಹನ ಸವಾರನೊಬ್ಬ ಕಳ್ಳತನದ ಬಗ್ಗೆ ಟ್ರಕ್ ಚಾಲಕನಿಗೆ ತಿಳಿಸಿದರಿಂದ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಶ್ರೀ ಸಿಟಿಯಲ್ಲಿ ಈ ವಸ್ತುಗಳನ್ನು ಲೋಡ್ ಮಾಡಲಾಗಿತ್ತು. ಅಧಿಕಾರಿಗಳ ಪ್ರಕಾರ, ಕಂಟೇನರ್‌ನಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್​ ಫೋನ್ ಮತ್ತು ನೋಟ್ ‌ಪ್ಯಾಡ್‌ಗಳು ಸೇರಿದಂತೆ ಸುಮಾರು 9 ಕೋಟಿ ರೂ. ಮೌಲ್ಯದ ವಸ್ತುಗಳು ಇದ್ದವು ಎಂಬುದು ತಿಳಿದುಬಂದಿದೆ. ಘಟನೆ ನಡೆದಾಗ ಕಂಟೇನರ್ ಕೋಲ್ಕತ್ತಾಗೆ ಹೋಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

ಇದರ ಬಗ್ಗೆ ಮಾತನಾಡಿದ ಗುಂಟೂರು ನಗರ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಅಮ್ಮಿ ರೆಡ್ಡಿ, ಮಧ್ಯಾಹ್ನ 3 ಗಂಟೆಯ ವೇಳೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ನಮಗೆ ದೂರು ಬಂದಿತು. ನಾವು ಕೂಡಲೇ ತನಿಖೆ ಪ್ರಾರಂಭಿಸಿದೆವು. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸುಮಾರು 80 ಲಕ್ಷ ಮೌಲ್ಯದ ಸೆಲ್ ಫೋನ್ ಮತ್ತು ನೋಟ್‌ಪ್ಯಾಡ್‌ಗಳನ್ನು ಕಳವು ಮಾಡಲಾಗಿದೆ ಎಂಬುದು ವರದಿಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ