ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ. ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ […]

ಚಲಿಸುತ್ತಿದ್ದ ಟ್ರಕ್​ನ ಸಿನಿಮಾ ಸ್ಟೈಲ್​ನಲ್ಲಿ ದರೋಡೆ ಮಾಡಿದ ಖದೀಮರು, ಏನೇನು ಹೊತ್ತೊಯ್ದರು?
ಸಾಧು ಶ್ರೀನಾಥ್​ Edited By:

Updated on: Sep 18, 2020 | 6:27 PM

ಹೈದರಾಬಾದ್​: ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯನ್ನು ಹಾದುಹೋಗುವ ಚೆನ್ನೈ-ಕೋಲ್ಕತಾ ಹೆದ್ದಾರಿಯಲ್ಲಿ ಚಲಿಸುವ ಕಂಟೇನರ್ ಟ್ರಕ್‌ನಿಂದ 82 ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್​ ಟ್ಯಾಬ್ಲೆಟ್‌ಗಳನ್ನು ಕಳ್ಳರು ದೋಚಿದ್ದಾರೆ.

ಬೇರೆ ವಾಹನದಲ್ಲಿ ಬಂದ ದುಷ್ಕರ್ಮಿಗಳು ಚಾಲಕನ ಅರಿವಿಲ್ಲದೆ, ಚಲಿಸುತ್ತಿದ್ದ ಕಂಟೇನರ್ ಟ್ರಕ್​ಗೆ ಹತ್ತಿ ಅದರ ಬಾಗಿಲು ತೆರೆದಿದ್ದಾರೆ.  ನಂತರ ಟ್ರಕ್​ನ ಬಾಗಿಲು ತೆರೆದ ಖದೀಮರು 82 ಲಕ್ಷ ಮೌಲ್ಯದ ಮೊಬೈಲ್ ಫೋನ್ ಮತ್ತು ಮೊಬೈಲ್ ಟ್ಯಾಬ್ಲೆಟ್‌ಗಳನ್ನು ದೋಚಿ ಪರಾರಿಯಾಗಿದ್ದಾರೆ. ಈ ವೇಳೆ,​ ಟ್ರಕ್​ನ ಹಿಂದೆ ಬರುತ್ತಿದ್ದ ವಾಹನ ಸವಾರನೊಬ್ಬ ಕಳ್ಳತನದ ಬಗ್ಗೆ ಟ್ರಕ್ ಚಾಲಕನಿಗೆ ತಿಳಿಸಿದರಿಂದ ಕಳ್ಳರು ಅಲ್ಲಿಂದ ಕಾಲ್ಕಿತ್ತಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿರುವ ಶ್ರೀ ಸಿಟಿಯಲ್ಲಿ ಈ ವಸ್ತುಗಳನ್ನು ಲೋಡ್ ಮಾಡಲಾಗಿತ್ತು. ಅಧಿಕಾರಿಗಳ ಪ್ರಕಾರ, ಕಂಟೇನರ್‌ನಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್​ ಫೋನ್ ಮತ್ತು ನೋಟ್ ‌ಪ್ಯಾಡ್‌ಗಳು ಸೇರಿದಂತೆ ಸುಮಾರು 9 ಕೋಟಿ ರೂ. ಮೌಲ್ಯದ ವಸ್ತುಗಳು ಇದ್ದವು ಎಂಬುದು ತಿಳಿದುಬಂದಿದೆ. ಘಟನೆ ನಡೆದಾಗ ಕಂಟೇನರ್ ಕೋಲ್ಕತ್ತಾಗೆ ಹೋಗುತ್ತಿತ್ತು ಎಂಬ ಮಾಹಿತಿ ಸಿಕ್ಕಿದೆ.

ಇದರ ಬಗ್ಗೆ ಮಾತನಾಡಿದ ಗುಂಟೂರು ನಗರ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಅಮ್ಮಿ ರೆಡ್ಡಿ, ಮಧ್ಯಾಹ್ನ 3 ಗಂಟೆಯ ವೇಳೆಯಲ್ಲಿ ಕಳ್ಳತನಕ್ಕೆ ಸಂಬಂಧಿಸಿದಂತೆ ನಮಗೆ ದೂರು ಬಂದಿತು. ನಾವು ಕೂಡಲೇ ತನಿಖೆ ಪ್ರಾರಂಭಿಸಿದೆವು. ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಸುಮಾರು 80 ಲಕ್ಷ ಮೌಲ್ಯದ ಸೆಲ್ ಫೋನ್ ಮತ್ತು ನೋಟ್‌ಪ್ಯಾಡ್‌ಗಳನ್ನು ಕಳವು ಮಾಡಲಾಗಿದೆ ಎಂಬುದು ವರದಿಯಾಗಿದೆ ಎಂಬ ಮಾಹಿತಿ ನೀಡಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us