AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Elephant Attack: ತಮಿಳುನಾಡಿನಲ್ಲಿ ಕಾಡಾನೆ ‘ಅರಿಕೊಂಬನ್’ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು

ಕಾಡಾನೆ ಅರಿಕೊಂಬನ್ ದಾಳಿಯಿಂದ ಗಾಯಗೊಂಡಿದ್ದ ಕಂಬಂ ಮೂಲದ ಪಾಲರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.

Elephant Attack: ತಮಿಳುನಾಡಿನಲ್ಲಿ ಕಾಡಾನೆ 'ಅರಿಕೊಂಬನ್’ ದಾಳಿಯಿಂದ ಗಾಯಗೊಂಡಿದ್ದ ವ್ಯಕ್ತಿ ಸಾವು
ಆನೆ ದಾಳಿImage Credit source: IndiaToday
ನಯನಾ ರಾಜೀವ್
|

Updated on:May 30, 2023 | 11:31 AM

Share

ಕಾಡಾನೆ ಅರಿಕೊಂಬನ್ ದಾಳಿಯಿಂದ ಗಾಯಗೊಂಡಿದ್ದ ಕಂಬಂ ಮೂಲದ ಪಾಲರಾಜ್ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಶನಿವಾರ ಕುಂಬಂ ಪ್ರವೇಶಿಸಿದ ಅರಿಕೊಂಬ ಆನೆ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿತ್ತು, ಆಕ್ರಮಣಕಾರಿ ಆನೆಯು ಆಟೋರಿಕ್ಷಾಗೆ ಹಾನಿ ಮಾಡುತ್ತಿರುವುದು ಕ್ಯಾಮರಾದಲ್ಲಿ ಸೆರೆಯಾಗಿದೆ.

ಭೀಕರ ದಾಳಿ ಸಂಭವಿಸಿದಾಗ ಪಾಲ​ರಾಜ್ ಅವರು ವಾಹನದೊಳಗೆ ಇದ್ದರು ಹೀಗಾಗಿ ತಲೆಗೆ ತೀವ್ರ ಗಾಯವಾಗಿ ರಕ್ತಸ್ರಾವವಾಗಿತ್ತು. ಮರಣೋತ್ತರ ಪರೀಕ್ಷೆಯ ನಂತರ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುವುದು. ಆನೆಯನ್ನು ಶಾಂತಗೊಳಿಸಿ ಮೇಘಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ತಮಿಳುನಾಡು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿದ್ದರೂ, ಆನೆ ದಟ್ಟ ಅರಣ್ಯಕ್ಕೆ ವಾಪಸಾದ ಕಾರಣ ಆನೆ ಸಿಗಲಿಲ್ಲ.

ಇಡುಕ್ಕಿ ಜಿಲ್ಲೆಯ ಚಿನ್ನಕನಾಲ್ ಪ್ರದೇಶದಲ್ಲಿ ಆನೆ 11 ಜನರನ್ನು ಕೊಂದು 300 ಮನೆಗಳು ಮತ್ತು ಅಂಗಡಿಗಳನ್ನು ನಾಶಪಡಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮತ್ತಷ್ಟು ಓದಿ: ತಮಿಳುನಾಡು ಗಡಿಯಲ್ಲಿ ಆನೆ ಹಾವಳಿ: ಸಿಕ್ಕ ಸಿಕ್ಕವರ ಮೇಲೆ ದಾಳಿ, ಇಬ್ಬರು ಸಾವು, ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಚಿನ್ನಕನಾಲ್‌ನಿಂದ ಪೆರಿಯಾರ್ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸುಮಾರು 100 ಕಿಲೋಮೀಟರ್‌ಗಳವರೆಗೆ ಸಾಗುವ ಮೊದಲು ಆನೆಯನ್ನು ಶಾಂತಗೊಳಿಸಲಾಯಿತು ಮತ್ತು ರೇಡಿಯೊ ಕಾಲರ್ ಹಾಕಲಾಗಿತ್ತು. ಆದಾಗ್ಯೂ, ಇದು ತಮಿಳುನಾಡು ಅರಣ್ಯ ವ್ಯಾಪ್ತಿಯೊಳಗೆ ಚಲಿಸುತ್ತಲೇ ಇತ್ತು. ತಮಿಳುನಾಡು ಮತ್ತು ಕೇರಳ ಅರಣ್ಯಾಧಿಕಾರಿಗಳು ಆನೆಯ ಚಲನವಲನದ ಮೇಲೆ ನಿಗಾ ಇಟ್ಟಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:30 am, Tue, 30 May 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ