AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
TV9 Web
| Edited By: |

Updated on: Jun 13, 2021 | 2:57 PM

Share

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!