AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
TV9 Web
| Edited By: |

Updated on: Jun 13, 2021 | 2:57 PM

Share

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!