AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
Follow us
TV9 Web
| Updated By: Lakshmi Hegde

Updated on: Jun 13, 2021 | 2:57 PM

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ಡಾ.ರಾಜ್ ಕುಟುಂಬದ ಜೊತೆ ನಾವು ಸದಾ ಇರುತ್ತೇವೆ: ಡಿಕೆ ಶಿವಕುಮಾರ್
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ