AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
TV9 Web
| Edited By: |

Updated on: Jun 13, 2021 | 2:57 PM

Share

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ನಗಾರಿ ಬಾರಿಸಿ ಐತಿಹಾಸಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಬಾಯ್​ಫ್ರೆಂಡ್ ಜೊತೆ ಜಗಳವಾಡಿ 4ನೇ ಮಹಡಿಯಿಂದ ಹಾರಿದ ಯುವತಿ!
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಜೋಸೈಮನ್ ನಿಧನ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ ಹೇಳಿದ್ದೇನು?
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಸಿಎಂ ಪೂಜೆ ಸಲ್ಲಿಸುವ ವೇಳೆ ಬಿತ್ತು ಬೆಂಕಿ, ತಪ್ಪಿದ ದೊಡ್ಡ ಅನಾಹುತ
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಜೋ ಸೈಮನ್ ನಿಧನ ಹೇಗಾಯ್ತು: ಫಿಲಂ ಚೇಂಬರ್​​ನಲ್ಲಿ ಆಗಿದ್ದೇನು?
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಆಫೀಸರ್ಸ್ ಮನೆಯಲ್ಲಿ ಕಂತೆ ಕಂತೆ ಹಣ ನೋಡಿ ಶಾಕ್
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ಬನ್ನೇರುಘಟ್ಟ ಉದ್ಯಾನವನದಲ್ಲಿ ಸಿಬ್ಬಂದಿ ಮೇಲೆ ಚಿರತೆ ದಾಳಿ; ಗಂಭೀರ ಗಾಯ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು