AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
TV9 Web
| Updated By: Lakshmi Hegde|

Updated on: Jun 13, 2021 | 2:57 PM

Share

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ