AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
Follow us
TV9 Web
| Updated By: Lakshmi Hegde

Updated on: Jun 13, 2021 | 2:57 PM

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಸೊಸೆ ರಾಧಿಕಾ ನನಗೆ ಗುಡ್ ಎನ್ನಬೇಕು: ಸಿನಿಮಾ ಕನಸು ಹೇಳಿಕೊಂಡ ಯಶ್ ತಾಯಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಮ್ಮ ಬ್ಯಾನರ್ 2ನೇ ಸಿನಿಮಾ ಶರಣ್ ಜತೆ: ಸಿಹಿ ಸುದ್ದಿ ನೀಡಿದ ಯಶ್ ತಾಯಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ಶಿವರಾಜ್ ಕುಮಾರ್​ಗಾಗಿ ಸಿನಿಮಾ ನಿರ್ಮಿಸುವಾಸೆ ವ್ಯಕ್ತಪಡಿಸಿದ ಯಶ್ ತಾಯಿ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ