AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ.

Viral Video: ಮದುವೆ ಮನೆಗೆ ಆನೆ ಕರೆತಂದು ಸುಸ್ತಾದ ಮಂದಿ; ವಾಹನ, ಪೆಂಡಾಲ್​​ಗಳನ್ನೆಲ್ಲ ಪುಡಿಪುಡಿ ಮಾಡಿದ ಗಜ
ಮದುವೆ ಮನೆಯಲ್ಲಿ ಆನೆಯ ದಾಂಧಲೆ
TV9 Web
| Edited By: |

Updated on: Jun 13, 2021 | 2:57 PM

Share

ಪ್ರಯಾಗ್​ರಾಜ್​: ಮದುವೆ ಸಮಾರಂಭಕ್ಕೆ ಮೆರವಣಿಗೆಗಾಗಿ ಕರೆದುಕೊಂಡು ಬಂದಿದ್ದ ಆನೆ, ಪಟಾಕಿ ಶಬ್ದ ಕೇಳಿ, ಇಡೀ ಮದುವೆ ಮನೆಯಲ್ಲಿ ದಾಂಧಲೆ ನಡೆಸಿದ ಘಟನೆ ಉತ್ತರಪ್ರದೇಶದ ಪ್ರಯಾಗ್​ರಾಜ್​​ನಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಈ ಭಯಾನಕ ಘಟನೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿದೆ. ಪ್ರಯಾಗ್​ರಾಜ್​​ನ ಅಲಾಂಪುರ ಗ್ರಾಮದಲ್ಲಿ ಮದುವೆ ನಡೆದಿತ್ತು. ವಿವಾಹದಲ್ಲಿ ವಿಶೇಷವಾಗಿರಲಿ ಎಂದು ಆನೆಯನ್ನೂ ಕರೆದುಕೊಂಡುಬರಲಾಗಿತ್ತು. ಆದರೆ ವರ ಹಾಗೂ ಅವನ ಕಡೆಯ ಅತಿಥಿಗಳನ್ನು ಸ್ವಾಗತಿಸಲು ಪಟಾಕಿ ಹೊಡೆಯುತ್ತಿದ್ದಂತೆ ಆನೆ ಕೆರಳಿದೆ. ಹೆದರಿ ಓಡಿದ ಆನೆ ಅಲ್ಲೆಲ್ಲ ದಾಂಧಲೆ ನಡೆಸಿದೆ. ಕಾರು, ಬೈಕ್​​ಗಳನ್ನು ಪುಡಿಪುಡಿ ಮಾಡಿದ್ದಲ್ಲದೆ, ಮದುವೆ ಮನೆಗೆ ಹಾಕಲಾಗಿದ್ದ ಪೆಂಡಾಲ್​​​ ಕೂಡ ಧ್ವಂಸಗೊಳಿಸಿದೆ.

ಘಟನೆಯಿಂದಾಗಿ ವರ ಮತ್ತು ಅತಿಥಿಗಳೂ ಸಹ ಕಂಗಾಲಾಗಿದ್ದಾರೆ. ಮದುವೆ ಮನೆಯಿಂದ ಎಲ್ಲರೂ ಚೆಲ್ಲಾಪಿಲ್ಲಿಯಾಗಿ ಓಡಿದ್ದಾರೆ. ನಂತರ ಅದರ ಮಾವುತನೇ ಬಂದು ಆನೆಯನ್ನು ಸಹಜಸ್ಥಿತಿಗೆ ತಂದಿದ್ದಾನೆ. ಈ ಬಗ್ಗೆ ಸ್ಥಳೀಯ ಅರಣ್ಯ ರೇಂಜರ್​ ಮತ್ತು ಪೊಲೀಸರಿಗೂ ನಂತರ ಮಾಹಿತಿ ನೀಡಲಾಗಿದೆ. ಆನೆ ಮಾವುತನನ್ನು ಕೊಂದಿದೆ ಎಂಬ ಸುಳ್ಳುಸುದ್ದಿಯೂ ವಿಡಿಯೋದೊಟ್ಟಿಗೆ ಹರಿದಾಡುತ್ತಿದೆ. ಆದರೆ ಅದು ಸುಳ್ಳು ಸುದ್ದಿ. ಮಾವುತ ಸತ್ತಿಲ್ಲ ಎಂದು ಸರೈ ಠಾಣೆಯ ಅಧಿಕಾರಿ ರಾಕೇಶ್​ ಚೌರಾಸಿಯಾ ತಿಳಿಸಿದ್ದಾರೆ.

ಇದನ್ನೂ ಓದಿ:ರಾಜಕೀಯಕ್ಕೆ ಬರಲ್ಲ ಎನ್ನುವ ಸೋನು ಸೂದ್​ಗೆ ಈ ರಾಜಕಾರಣಿ ಕಂಡರೆ ಹೆಚ್ಚು ಅಭಿಮಾನ; ಯಾರದು?

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್