AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ.

Viral Video: ಗಾಂಭೀರ್ಯದಿಂದ ಹಳಿಗಳ ಮೇಲೆ ಓಡಿದ ‘ಗಜಾನನ ಎಕ್ಸ್​​ಪ್ರೆಸ್​’; ಪ್ರಯಾಣಿಕರನ್ನು ಎಚ್ಚರಿಸಿದ ಐಪಿಎಸ್​ ಅಧಿಕಾರಿ
ಹಳಿಗಳ ಮೇಲೆ ನಡೆಯುತ್ತಿರುವ ಆನೆ
Lakshmi Hegde
|

Updated on:Mar 30, 2021 | 5:32 PM

Share

ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುವ ಪ್ರಾಣಿಗಳ ವಿಡಿಯೋಗಳಲ್ಲಿ ಅತಿಹೆಚ್ಚಾಗಿ ವೈರಲ್ ಆಗುವುದು ಒಂದು ಕೋತಿಗಳದ್ದು, ಇನ್ನೊಂದು ಆನೆಗಳದ್ದು. ಹಾಗೇ ಈಗ ಹರಿದ್ವಾರ ರೈಲ್ವೆಸ್ಟೇಶನ್​ಗೆ ಬಂದ ಒಂಟಿ ಸಲಗದ ವಿಡಿಯೋವೊಂದು ಸಿಕ್ಕಾಪಟೆ ವೈರಲ್ ಆಗಿದೆ. ಈ ಸಲಗ ರೈಲ್ವೆ ಹಳಿಯ ಮೇಲೆ ಗಾಂಭೀರ್ಯದಿಂದ ಹೋಗುತ್ತಿರುವ ವಿಡಿಯೋವನ್ನು ಐಪಿಎಸ್​ ಅಧಿಕಾರಿ ದೀಪಾಂಶು ಕಾಬ್ರಾ ಪೋಸ್ಟ್​ ಮಾಡಿಕೊಂಡಿದ್ದು, ಹಲವರು ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿದ ಅನೇಕರು, ನಮಗೆ ನಗು ತಡೆಯಲು ಆಗುತ್ತಿಲ್ಲ ಎನ್ನುತ್ತಿದ್ದಾರೆ.

ಇದು ಹರಿದ್ವಾರ ರೈಲ್ವೆ ಸ್ಟೇಶನ್​ ಆಗಿದ್ದು, ಒಂದು ಹಳಿಯ ಮೇಲೆ ರೈಲು ನಿಂತುಕೊಂಡಿದೆ. ಅದರ ಪಕ್ಕದ ಮೇಲೆ ಆನೆ ಹೋಗುತ್ತಿದೆ. ವಿಡಿಯೋ ಶೇರ್ ಮಾಡಿಕೊಂಡ ಐಪಿಎಸ್​ ಅಧಿಕಾರಿ, ಗಜಾನನ ಎಕ್ಸ್​​ಪ್ರೆಸ್​ ಕೆಲವೇ ಕ್ಷಣಗಳಲ್ಲಿ ಫ್ಲ್ಯಾಟ್​ಫಾರಂ ನಂಬರ್​ 6ನ್ನು ಹಾದುಹೋಗಲಿದ್ದು, ಪ್ರಯಾಣಿಕರು ತಮ್ಮ ಮೊಬೈಲ್, ಕ್ಯಾಮರಾವನ್ನು ಅಲರ್ಟ್​ ಆಗಿಟ್ಟುಕೊಳ್ಳಿ. ಯಾವುದಕ್ಕೂ ಸುರಕ್ಷಿತ ಅಂತರ ಕಾಯ್ದುಕೊಳ್ಳಿ ಎಂದು ಫನ್ನಿಯಾಗಿ ಕ್ಯಾಪ್ಷನ್​ ಬರೆದಿದ್ದಾರೆ.

ಈ ವಿಡಿಯೋ ಮಾರ್ಚ್​ 27ರಂದು ಪೋಸ್ಟ್ ಆಗಿದ್ದು, ಇಲ್ಲಿಯವರೆಗೆ 23 ಸಾವಿರಕ್ಕೂ ಹೆಚ್ಚು ವೀವ್ಸ್ ಪಡೆದಿದೆ. ಎರಡು ನೂರಕ್ಕೂ ಅಧಿಕ ಬಾರಿ ರೀಟ್ವೀಟ್​ ಆಗಿದೆ. ಹಾಗೇ, ಟ್ವಿಟರ್​ ಬಳಕೆದಾರರು ಕಾಮೆಂಟ್ ಮಾಡಿ ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಡಿ ಪ್ರಕರಣದ ಯುವತಿಗೆ ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಸಾಧ್ಯತೆ; ನನಗೆ ಸುಸ್ತಾಗ್ತಿದೆ ಎಂದ ಯುವತಿ

ಒಂದೇ ಬೆಡ್​​ನಲ್ಲಿ ಇಬ್ಬರು ಕೊರೊನಾ ರೋಗಿಗಳು; ಕೊವಿಡ್​ ಸೋಂಕಿನ ವಿಪರೀತ ಪ್ರಸರಣದಿಂದ ಈ ಆಸ್ಪತ್ರೆಯಲ್ಲಿ ಸಾಲುತ್ತಿಲ್ಲ ವ್ಯವಸ್ಥೆ

Published On - 5:31 pm, Tue, 30 March 21

Follow Us
Lakshmi Hegde
Lakshmi Hegde
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ