AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಸೀಸ ಕಾರಣ: ಏಮ್ಸ್ ವರದಿ ಬಹಿರಂಗ

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ ಸೀಸ ಲೋಹ (ಲೆಡ್) ಕಾರಣ ಎಂದು ಏಮ್ಸ್ ವರದಿ ಹೇಳಿದೆ.

ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಸೀಸ ಕಾರಣ: ಏಮ್ಸ್ ವರದಿ ಬಹಿರಂಗ
ಅಸ್ವಸ್ಥರಾದ ಮಹಿಳೆ (ಪಿಟಿಐ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 08, 2020 | 1:29 PM

Share

ಹೈದರಾಬಾದ್: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ ಸೀಸ ಲೋಹ (ಲೆಡ್) ಕಾರಣ ಎಂದು ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಹೇಳಿದ್ದಾರೆ. ರೋಗಿಗಳ ರಕ್ತದ ಮಾದರಿಯಲ್ಲಿ ಸೀಸ ಮತ್ತು ನಿಕಲ್ ಪತ್ತೆಯಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವರದಿ ಹೇಳಿದೆ. ಮಂಗಲಗಿರಿ ಏಮ್ಸ್ ಮೂಲಕ ರಾಜ್ಯ ಸರ್ಕಾರಕ್ಕೆ ಈ ಮಾಹಿತಿ ಸಿಕ್ಕಿದೆ ಎಂದಿದ್ದಾರೆ ರಾವ್.

ಏಲೂರು ಪ್ರದೇಶದ ಸ್ಥಳೀಯರು ಕುಡಿಯುವ ನೀರು ಮತ್ತು ಹಾಲಿನ ಮಾದರಿಯನ್ನು ಕಳುಹಿಸಿಕೊಡುವಂತೆ ದೆಹಲಿ ಏಮ್ಸ್ ತಜ್ಞರು ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ. ಸೀಸ ಲೋಹ ದೇಹವನ್ನು ಹೊಕ್ಕರೆ ಅದು ನ್ಯುರೊ ಟಾಕ್ಸಿಕ್ ಲಕ್ಷಣವನ್ನುಂಟು ಮಾಡುತ್ತದೆ. ಬ್ಯಾಟರಿಗಳಲ್ಲಿ ಬಳಕೆಯಾಗುವ ಈ ಲೋಹವು ಕುಡಿಯುವ ನೀರು ಮತ್ತು ಹಾಲಿನ ಮೂಲಕ ಮನುಷ್ಯರ ದೇಹ ಪ್ರವೇಶಿಸುತ್ತದೆ ಎಂದು ಏಮ್ಸ್ ಹೇಳಿದೆ.

ಈ ಲೋಹಗಳು ಹೇಗೆ ಮನುಷ್ಯರ ದೇಹ ಪ್ರವೇಶಿಸಿದವು ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ಹೇಳಿದೆ. ಲೋಹಗಳನ್ನು ಪತ್ತೆಹಚ್ಚಲು ದೆಹಲಿ ಏಮ್ಸ್​ನಲ್ಲಿ ಮಾತ್ರ ಆಧುನಿಕ ವ್ಯವಸ್ಥೆ ಇದೆ.

ಬಿಗಡಾಯಿಸುತ್ತಿದೆ ಏಲೂರು ಪರಿಸ್ಥಿತಿ: ಆಸ್ಪತ್ರೆಗೆ ಆಂಧ್ರ ಸಿಎಂ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಭೇಟಿ

ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆ; 227 ಮಂದಿ ಅಸ್ವಸ್ಥ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ