AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಸೀಸ ಕಾರಣ: ಏಮ್ಸ್ ವರದಿ ಬಹಿರಂಗ

ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ ಸೀಸ ಲೋಹ (ಲೆಡ್) ಕಾರಣ ಎಂದು ಏಮ್ಸ್ ವರದಿ ಹೇಳಿದೆ.

ಏಲೂರಿನಲ್ಲಿ ನಿಗೂಢ ಕಾಯಿಲೆಗೆ ಸೀಸ ಕಾರಣ: ಏಮ್ಸ್ ವರದಿ ಬಹಿರಂಗ
ಅಸ್ವಸ್ಥರಾದ ಮಹಿಳೆ (ಪಿಟಿಐ ಚಿತ್ರ)
Ghanashyam D M | ಡಿ.ಎಂ.ಘನಶ್ಯಾಮ
|

Updated on: Dec 08, 2020 | 1:29 PM

Share

ಹೈದರಾಬಾದ್: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಏಲೂರು ಪಟ್ಟಣದಲ್ಲಿ ಕಾಣಿಸಿಕೊಂಡ ನಿಗೂಢ ಕಾಯಿಲೆಗೆ ಸೀಸ ಲೋಹ (ಲೆಡ್) ಕಾರಣ ಎಂದು ಬಿಜೆಪಿ ಸಂಸದ ಜಿವಿಎಲ್ ನರಸಿಂಹ ರಾವ್ ಹೇಳಿದ್ದಾರೆ. ರೋಗಿಗಳ ರಕ್ತದ ಮಾದರಿಯಲ್ಲಿ ಸೀಸ ಮತ್ತು ನಿಕಲ್ ಪತ್ತೆಯಾಗಿದೆ ಎಂದು ದೆಹಲಿಯ ಏಮ್ಸ್ ಆಸ್ಪತ್ರೆಯ ವರದಿ ಹೇಳಿದೆ. ಮಂಗಲಗಿರಿ ಏಮ್ಸ್ ಮೂಲಕ ರಾಜ್ಯ ಸರ್ಕಾರಕ್ಕೆ ಈ ಮಾಹಿತಿ ಸಿಕ್ಕಿದೆ ಎಂದಿದ್ದಾರೆ ರಾವ್.

ಏಲೂರು ಪ್ರದೇಶದ ಸ್ಥಳೀಯರು ಕುಡಿಯುವ ನೀರು ಮತ್ತು ಹಾಲಿನ ಮಾದರಿಯನ್ನು ಕಳುಹಿಸಿಕೊಡುವಂತೆ ದೆಹಲಿ ಏಮ್ಸ್ ತಜ್ಞರು ರಾಜ್ಯ ಸರ್ಕಾರಕ್ಕೆ ಹೇಳಿದ್ದಾರೆ. ಸೀಸ ಲೋಹ ದೇಹವನ್ನು ಹೊಕ್ಕರೆ ಅದು ನ್ಯುರೊ ಟಾಕ್ಸಿಕ್ ಲಕ್ಷಣವನ್ನುಂಟು ಮಾಡುತ್ತದೆ. ಬ್ಯಾಟರಿಗಳಲ್ಲಿ ಬಳಕೆಯಾಗುವ ಈ ಲೋಹವು ಕುಡಿಯುವ ನೀರು ಮತ್ತು ಹಾಲಿನ ಮೂಲಕ ಮನುಷ್ಯರ ದೇಹ ಪ್ರವೇಶಿಸುತ್ತದೆ ಎಂದು ಏಮ್ಸ್ ಹೇಳಿದೆ.

ಈ ಲೋಹಗಳು ಹೇಗೆ ಮನುಷ್ಯರ ದೇಹ ಪ್ರವೇಶಿಸಿದವು ಎಂಬುದು ಇನ್ನಷ್ಟೇ ತಿಳಿಯಬೇಕಿದೆ ಎಂದು ಸಾರ್ವಜನಿಕ ಆರೋಗ್ಯ ಇಲಾಖೆ ಹೇಳಿದೆ. ಲೋಹಗಳನ್ನು ಪತ್ತೆಹಚ್ಚಲು ದೆಹಲಿ ಏಮ್ಸ್​ನಲ್ಲಿ ಮಾತ್ರ ಆಧುನಿಕ ವ್ಯವಸ್ಥೆ ಇದೆ.

ಬಿಗಡಾಯಿಸುತ್ತಿದೆ ಏಲೂರು ಪರಿಸ್ಥಿತಿ: ಆಸ್ಪತ್ರೆಗೆ ಆಂಧ್ರ ಸಿಎಂ ವೈ.ಎಸ್​.ಜಗನ್​ ಮೋಹನ್​ ರೆಡ್ಡಿ ಭೇಟಿ

ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ನಿಗೂಢ ಕಾಯಿಲೆ; 227 ಮಂದಿ ಅಸ್ವಸ್ಥ

ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ