AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್

ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯು ಗಲಭೆ ಪೀಡಿತ ಇರಾನ್​ನಲ್ಲಿರುವ ವಿದ್ಯಾರ್ಥಿಗಳನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಿದೆ. ಆದರೆ, ಅನೇಕ ವಿದ್ಯಾರ್ಥಿಗಳು ಟೆಹ್ರಾನ್ ಬಿಟ್ಟುಹೋಗಲು ನಿರಾಕರಿಸಿ ಅಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಉಳಿದ ವಿದ್ಯಾರ್ಥಿಗಳನ್ನು ಟೆಹ್ರಾನ್​ನಿಂದ ಹೊರಗೆ ಸುರಕ್ಷಿತವಾದ ಜಾಗದಲ್ಲಿ ಇರಿಸಲಾಗಿದೆ. ಸದ್ಯಕ್ಕೆ ಇರಾನ್​​ನಿಂದ ಭಾರತೀಯರನ್ನು ವಾಪಾಸ್ ಭಾರತಕ್ಕೆ ವಿಮಾನದಲ್ಲಿ ಕರೆಸಿಕೊಳ್ಳುವುದು ಅಸಾಧ್ಯವಾಗಿರುವುದರಿಂದ ಅವರನ್ನು ಅಲ್ಲಿಯೇ ಇರಿಸಿಕೊಳ್ಳಲಾಗಿದೆ.

ಇಸ್ರೇಲ್-ಯುಎಸ್ ದಾಳಿಯಿಂದಾಗಿ ಇರಾನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳು ಸುರಕ್ಷಿತ ಸ್ಥಳಕ್ಕೆ ಶಿಫ್ಟ್
Iran Israel Conflict
ಸುಷ್ಮಾ ಚಕ್ರೆ
|

Updated on: Mar 03, 2026 | 7:00 PM

Share

ಟೆಹ್ರಾನ್, ಮಾರ್ಚ್ 3: ಇರಾನ್‌ನ ರಾಜಧಾನಿ ಟೆಹ್ರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್‌ನ (Israel Attack) ದಾಳಿ ನಡೆಯುತ್ತಿರುವುದರಿಂದ ಹಲವಾರು ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಇರಾನ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ. ಕೆಲವು ವಿದ್ಯಾರ್ಥಿಗಳು ಸ್ವಯಂಪ್ರೇರಣೆಯಿಂದ ಟೆಹ್ರಾನ್‌ನಲ್ಲಿಯೇ ಉಳಿಯಲು ನಿರ್ಧರಿಸಿದ್ದಾರೆ. ಅಂಥವರನ್ನು ಹೊರತುಪಡಿಸಿ ಉಳಿದವರನ್ನು ಶಿಫ್ಟ್ ಮಾಡಲಾಗಿದೆ. ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅವರಿಗೆ ತುರ್ತು ಸಂಪರ್ಕ ಸಂಖ್ಯೆಗಳನ್ನು ಸಹ ನೀಡಲಾಗಿದೆ.

ಟೆಹ್ರಾನ್ ನಗರದಲ್ಲಿ ದಾಳಿಯ ಅಪಾಯ ಹೆಚ್ಚಾದ ಕಾರಣದಿಂದ ಭಾರತದ ರಾಯಭಾರ ಕಚೇರಿಯು ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಟೆಹ್ರಾನ್‌ನ ಹೊರಗೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಿದೆ. ರಾಯಭಾರ ಕಚೇರಿಯು ಅವರಿಗೆ ಸಾರಿಗೆ, ಆಹಾರ ಮತ್ತು ವಸತಿ ವ್ಯವಸ್ಥೆಗಳನ್ನು ಮಾಡಿದೆ. ರಾಯಭಾರ ಕಚೇರಿಯ ಸಹಾಯವನ್ನು ನಿರಾಕರಿಸಿದ ಕೆಲವೇ ವಿದ್ಯಾರ್ಥಿಗಳು ಮಾತ್ರ ಟೆಹ್ರಾನ್‌ನಲ್ಲಿ ಉಳಿದಿದ್ದಾರೆ ಎಂದು ಕಾನ್ಸುಲೇಟ್ ತಿಳಿಸಿದೆ.

ಇದನ್ನೂ ಓದಿ: ಇರಾನ್​ ಮೇಲೆ ಇಸ್ರೇಲ್-ಯುಎಸ್​ ದಾಳಿ; ಸಾವಿನ ಸಂಖ್ಯೆ 787ಕ್ಕೆ ಏರಿಕೆ

“ಇನ್ನೂ ಇರಾನ್‌ನಲ್ಲಿಯೇ ಉಳಿದಿರುವ ಇತರ ಭಾರತೀಯ ವಿದ್ಯಾರ್ಥಿಗಳು ಮತ್ತು ಭಾರತೀಯ ಪ್ರಜೆಗಳಿಗೆ ಈ ಹಿಂದೆ ನೀಡಲಾದ ಸಲಹೆಯು ಬದಲಾಗದೆ ಉಳಿದಿದೆ. ನೀವು ಇರುವ ಸ್ಥಳದಲ್ಲಿಯೇ ಇರಿ, ಸಾಧ್ಯವಾದಷ್ಟು ಮನೆ ಅಥವಾ ರೂಂನ ಒಳಗಿರಿ. ಕಿಟಕಿಗಳಿಂದ ದೂರವಿರಿ. ಎಲ್ಲಾ ಸಮಯದಲ್ಲೂ ಸರಿಯಾದ ಎಚ್ಚರಿಕೆ ವಹಿಸಿ. ಪ್ರತಿಭಟನೆಗಳ ಪ್ರದೇಶಗಳ ಬಳಿ ಓಡಾಡಬೇಡಿ. ಇರಾನ್‌ನಲ್ಲಿರುವ ಭಾರತದ ರಾಯಭಾರ ಕಚೇರಿಯೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿರಿ” ಎಂದು ಭಾರತ ಸೂಚಿಸಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಸಾರ್ವಜನಿಕವಾಗಿ ಪತ್ನಿಯನ್ನ ಗಂಡ ಹತ್ಯೆ ಮಾಡಿದ್ಯಾಕೆ? ಅಂತಹ ದ್ವೇಷ ಏನಿತ್ತು
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಬಾಗಲಕೋಟೆ ಬೈ ಎಲೆಕ್ಷನ್ ಕಾಂಗ್ರೆಸ್ ಟಿಕೆಟ್ ಸೀಕ್ರೆಟ್ ಬಿಚ್ಚಿಟ್ಟ ಸಿಎಂ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಕಾಂಗ್ರೆಸ್‌ಗೆ ತಟ್ಟಿದ ಬಂಡಾಯದ ಬಿಸಿ: ದಾವಣಗೆರೆ ಅಖಾಡಕ್ಕಿಳಿದ ಪೈಲ್ವಾನ್!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!
ಎಸ್‌ಪಿ ಅಸ್ಲಾಂ ಸಾವಿನ ದೃಶ್ಯದ ಹಿಂದೆ ಅಡಗಿದೆ 2014ರ ಭೀಕರ ನೈಜ ಘಟನೆ!