AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಮೊಬೈಲ್​ಗೆ ಎಮರ್ಜೆನ್ಸಿ ಅಲರ್ಟ್ ಬಂದಿದ್ದರೆ ಗಾಬರಿ ಬೇಡ; ಇದು ಸೆಲ್ ಬ್ರಾಡ್​ಕ್ಯಾಸ್ಟ್ ಅಲರ್ಟ್ ಸಿಸ್ಟಂನ ಪರೀಕ್ಷಾರ್ಥ ಪ್ರಯೋಗ

Emergency Alert Message: ನೈಸರ್ಗಿಕ ವಿಕೋಪ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ಅಲರ್ಟ್ ಹೊರಡಿಸಲು ದೂರಸಂಪರ್ಕ ಇಲಾಖೆ ಮೂಲಕ ಎಲ್ಲರ ಮೊಬೈಲ್​ಗಳಿಗೆ ಈ ತುರ್ತು ಸಂದೇಶಗಳನ್ನು ಕಳುಹಿಸುವ ಒಂದು ವ್ಯವಸ್ಥೆಯನ್ನು ಸರ್ಕಾರ ರೂಪಿಸುತ್ತಿದೆ. ಅದರ ಪ್ರಯೋಗಾರ್ಥ ಸ್ಯಾಂಪಲ್ ಮೆಸೇಜ್​ಗಳನ್ನು ಕಳುಹಿಸಲಾಗುತ್ತದೆ. ಕಳೆದ ಸೆಪ್ಟೆಂಬರ್ 15ರಂದೂ ಇಂಥದ್ದೇ ಒಂದು ಪ್ರಯೋಗ ನಡೆದಿತ್ತು. ಇದೀಗ ಅಕ್ಟೋಬರ್ 12ರಂದು ಮತ್ತೊಮ್ಮೆ ಟೆಸ್ಟ್ ಮೆಸೇಜ್ ಬರಲಿದೆ.

ನಿಮ್ಮ ಮೊಬೈಲ್​ಗೆ ಎಮರ್ಜೆನ್ಸಿ ಅಲರ್ಟ್ ಬಂದಿದ್ದರೆ ಗಾಬರಿ ಬೇಡ; ಇದು ಸೆಲ್ ಬ್ರಾಡ್​ಕ್ಯಾಸ್ಟ್ ಅಲರ್ಟ್ ಸಿಸ್ಟಂನ ಪರೀಕ್ಷಾರ್ಥ ಪ್ರಯೋಗ
ಮೊಬೈಲ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 11, 2023 | 3:54 PM

Share

ನಿಮ್ಮ ಮೊಬೈಲ್​ಗೆ ನಾಳೆ, ಅಕ್ಟೋಬರ್ 12ರಂದು ಎಮರ್ಜೆನ್ಸಿ ಅಲರ್ಟ್ ಮೆಸೇಜ್ ಬರಬಹುದು. ಇಂದೇ ಕೆಲವರಿಗೆ ಬಂದಿದ್ದಿರಲೂಬಹುದು. ‘ಎಮರ್ಜೆನ್ಸಿ ಅಲರ್ಟ್: ಎಕ್ಸ್​ಟ್ರೀಮ್’ (emergency alert: extreme) ಎಂದು ಹೆಡಿಂಗ್​ನಲ್ಲಿ ಇರುವ ಮೆಸೇಜ್ ನೋಡಿ ಗಾಬರಿ ಆಗದಿರಿ. ಇದು ಸರ್ಕಾರದಿಂದಲೇ ಕಳುಹಿಸುವ ಸ್ಯಾಂಪಲ್ ಮೆಸೇಜ್. ನೈಸರ್ಗಿಕ ವಿಕೋಪ ಇತ್ಯಾದಿ ತುರ್ತು ಸಂದರ್ಭಗಳಲ್ಲಿ ಜನಸಾಮಾನ್ಯರಿಗೆ ಅಲರ್ಟ್ ಹೊರಡಿಸಲು ದೂರಸಂಪರ್ಕ ಇಲಾಖೆ ಮೂಲಕ ಎಲ್ಲರ ಮೊಬೈಲ್​ಗಳಿಗೆ ಈ ತುರ್ತು ಸಂದೇಶಗಳನ್ನು ಕಳುಹಿಸುವ ಒಂದು ವ್ಯವಸ್ಥೆಯನ್ನು ಸರ್ಕಾರ ರೂಪಿಸುತ್ತಿದೆ. ಅದರ ಪ್ರಯೋಗಾರ್ಥ ಸ್ಯಾಂಪಲ್ ಮೆಸೇಜ್​ಗಳನ್ನು (sample message) ಕಳುಹಿಸಲಾಗುತ್ತದೆ. ಕಳೆದ ಸೆಪ್ಟೆಂಬರ್ 15ರಂದೂ ಇಂಥದ್ದೇ ಒಂದು ಪ್ರಯೋಗ ನಡೆದಿತ್ತು. ಇದೀಗ ಅಕ್ಟೋಬರ್ 12ರಂದು ಮತ್ತೊಮ್ಮೆ ಟೆಸ್ಟ್ ಮೆಸೇಜ್ ಬರಲಿದೆ.

ಸ್ಯಾಂಪಲ್ ಮೆಸೇಜ್ ಹೇಗಿರುತ್ತದೆ?

ಎಮರ್ಜೆನ್ಸಿ ಅಲರ್ಟ್: ಎಕ್ಸ್​ಟ್ರೀಮ್

‘ಭಾರತ ಸರ್ಕಾರದ ದೂರಸಂಪರ್ಕ ಇಲಾಖೆಯಿಂದ ಸೆಲ್ ಬ್ರಾಡ್​ಕ್ಯಾಸ್ಟಿಂಗ್ ಸಿಸ್ಟಂ ಮೂಲಕ ಕಳುಹಿಸಲಾದ ಸ್ಯಾಂಪಲ್ ಟೆಸ್ಟಿಂಗ್ ಮೆಸೇಜ್ ಇದು. ಈ ಸಂದೇಶಕ್ಕೆ ಸ್ಪಂದಿಸದೆ ನಿರ್ಲಕ್ಷಿಸಿ. ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರ ಜಾರಿಗೆ ತರಲಾಗುತ್ತಿರುವ ಭಾರತದಾದ್ಯಂತದ ಎಮರ್ಜೆನ್ಸಿ ಅಲರ್ಟ್ ಸಿಸ್ಟಂ ಅನ್ನು ಪರೀಕ್ಷಿಸಲು ಈ ಸಂದೇಶ ಕಳುಹಿಸಲಾಗಿದೆ. ತುರ್ತು ಸಂದರ್ಭದಲ್ಲಿ ಸಕಾಲಕ್ಕೆ ಅಲರ್ಟ್ ನೀಡಲು ಮತ್ತು ಸಾರ್ವಜನಿಕ ಸುರಕ್ಷತೆ ಹೆಚ್ಚಿಸುವ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗಿದೆ.’

ಇದನ್ನೂ ಓದಿ: ಸಮೃದ್ಧ ಭಾರತ ನಿರ್ಮಾಣದತ್ತ ನಮ್ಮ ಪ್ರಯಾಣದ ವೇಗ ಇನ್ನಷ್ಟು ಹೆಚ್ಚುತ್ತದೆ: ಐಎಂಎಫ್ ವರದಿಗೆ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ

ಹಿಂದಿ ಮತ್ತು ಇಂಗ್ಲೀಷ್​ನಲ್ಲಿರುವ ಈ ಮೆಸೇಜ್​ನ ಕನ್ನಡ ರೂಪ ಇದು. ಇದರ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ಬಂದಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣೆ ಪ್ರಾಧಿಕಾರದೊಂದಿಗೆ ಸಹಭಾಗಿತ್ವದಲ್ಲಿ ದೂರಸಂಪರ್ಕ ಇಲಾಖೆಯು ಸೆಲ್ ಬ್ರಾಡ್​ಕ್ಯಾಸ್ಟಿಂಗ್ ಸಿಸ್ಟಂನ ಟ್ರಯಲ್ ಟೆಸ್ಟಿಂಗ್ ಅನ್ನು ಅಕ್ಟೋಬರ್ 12ರಂದು ನಡೆಸುತ್ತಿದೆ. ಧ್ವನಿ ಮತ್ತು ವೈಬ್ರೇಶನ್​ವೊಂದಿಗೆ ನಿಮ್ಮ ಮೊಬೈಲ್​ಗೆ ಟೆಸ್ಟ್ ಅಲರ್ಟ್ ಮೆಸೇಜ್​ಗಳು ಬರಬಹುದು. ಈ ಅಲರ್ಟ್​​ಗಳು ಪರೀಕ್ಷಾ ಪ್ರಕ್ರಿಯೆಯ ಭಾಗವಾಗಿ ಇರಲಿವೆಯೇ ಹೊರತು ನಿಜವಾದ ತುರ್ತು ಸ್ಥಿತಿ ಎಂದು ಭಾವಿಸಬಾರದು ಎಂದು ವಿವರಣೆ ನೀಡಲಾಗಿದೆ.

ಹಲವು ಮಂದಿಗೆ ಈಗಾಗಲೇ ಈ ರೀತಿಯ ಅಲರ್ಟ್ ಮೆಸೇಜ್​ಗಳು ಬಂದಿವೆ. ಕೆಲವರು ತುರ್ತು ಸ್ಥಿತಿ ಏನಿರಬಹುದು ಎಂದು ಗಾಬರಿಪಟ್ಟು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವುದುಂಟು.

ಇದನ್ನೂ ಓದಿ: Cyber Fraud ಮೂಲಕ ಭಾರಿ ಹಣ ಕಳೆದುಕೊಂಡ ಡಿಎಂಕೆ ಸಂಸದ, ಮಾಜಿ ಕೇಂದ್ರ ಮಂತ್ರಿ ದಯಾನಿಧಿ ಮಾರನ್ #DigitalIndia ಸೇಫ್​ ಅಲ್ಲ ಅಂದರು!

ಏನಿದು ಸೆಲ್ ಬ್ರಾಡ್​ಕ್ಯಾಸ್ಟ್ ಅಲರ್ಟ್ ಸಿಸ್ಟಂ?

ಭೂಕಂಪ, ಭೂಕುಸಿತ, ಪ್ರವಾಹ, ಸುನಾಮಿ, ಚಂಡಮಾರುತ ಇತ್ಯಾದಿ ವಿಪತ್ತುಗಳು ಎದುರಾದಾಗ ಅಥವಾ ಎದುರಾಗುವ ಸಂಭವನೀಯತೆ ಇದ್ದಾಗ ನಿರ್ದಿಷ್ಟ ಪ್ರದೇಶಗಳಲ್ಲಿರುವ ಎಲ್ಲಾ ಜನರ ಮೊಬೈಲ್​ಗಳಿಗೆ ಅಲರ್ಟ್ ಮೆಸೇಜ್​ಗಳನ್ನು ಕಳುಹಿಸುವುದು ಈ ಅತ್ಯಾಧುನಿಕ ಸಿಸ್ಟಂನ ಉದ್ದೇಶ. ವಿಪತ್ತು ಬಂದಿರುವ ಪ್ರದೇಶಕ್ಕೆ ಪ್ರವಾಸಿಗರು ಹೋಗಿದ್ದರೆ ಅವರ ಮೊಬೈಲ್​ಗೂ ಅಲರ್ಟ್ ಮೆಸೇಜ್ ಬರುತ್ತದೆ.

ಹೀಗಾಗಿ, ಒಂದೊಂದು ಪ್ರದೇಶಕ್ಕೆ ಸೀಮಿತವಾಗಿ ಬೇರೆ ಬೇರೆ ಸಂದರ್ಭಗಳಲ್ಲಿ ಪರೀಕ್ಷಾರ್ಥವಾಗಿ ಅಲರ್ಟ್ ಮೆಸೇಜ್​​ಗಳು ಬರಬಹುದು. ಅಧಿಕೃತವಾಗಿ ಈ ಸಿಸ್ಟಂ ಜಾರಿಗೆ ಬರುವವರೆಗೂ ಜನರು ಈ ಮೆಸೇಜ್​ಗಳನ್ನು ನಿರ್ಲಕ್ಷಿಸಬಹುದು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶ್ರಾವಣ ಮಾಸದಂದು ಶನಿವಾರ ಆಚರಣೆಯ ಹಿಂದಿನ ಮಹತ್ವ ತಿಳಿಯಿರಿ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶನಿ ಭಗವಾನ್, ಹನುಮಂತನ ಆರಾಧನೆಗೆ ಅತ್ಯಂತ ಶುಭಕರ ದಿನ
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಶ್ರೇಯಾ ಘೋಷಾಲ್ ಹಾಡಬೇಕಿದ್ದ ಸಾಂಗ್ ಈಗ ಲಹರಿ ಮಹೇಶ್ ಪಾಲಾಯ್ತು
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
ಪ್ರಧಾನಿಯಾಗಿ ಇಂದಿರಾ ಗಾಂಧಿಯ ದಾಖಲೆ ಮುರಿದ ಮೋದಿಗೆ ಮುಯಿಝು ಅಭಿನಂದನೆ
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
‘ಕೊತ್ತಲವಾಡಿ’ ಸಿನಿಮಾದಲ್ಲಿದೆ ಯಶ್ ಬಳಸಿದ ವಿಶೇಷ ಬೈಕ್
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕೃಷ್ಣರಾಜ ಒಡೆಯರ್-ಸಿದ್ದರಾಮಯ್ಯ ಇಬ್ಬರೂ ಸಾಮಾಜಿಕ ಹರಿಕಾರರು: ಸಚಿವ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಕರ್ನಾಟಕವೇ ದೇಶದಲ್ಲಿ ಪ್ರಥಮ ಬಾರಿಗೆ ಜಾತಿಗಣತಿ ಮಾಡಿಸಿದ್ದು: ಸಿದ್ದರಾಮಯ್ಯ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಜಪಾನಿಗೆ ಬನ್ನೇರುಘಟ್ಟ ಸಾಕಾನೆಗಳ ಏರ್​ ಲಿಫ್ಟ್​ ಯಶಸ್ವಿ
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಸುರ್ಜೇವಾಲಾ ಮಾಡಿದ್ದು ಸರಿಯಲ್ಲ ಅಂತ ರಾಜಣ್ಣನೇ ಹೇಳಿದ್ದಾರೆ: ರವಿಕುಮಾರ್
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ
ಮಾಲ್ಡೀವ್ಸ್‌ನಲ್ಲಿ ಪ್ರಧಾನಿ ಮೋದಿಗೆ ಗೌರವದ ಸ್ವಾಗತ, ಭಾರತೀಯರಿಂದ ನೃತ್ಯ