AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ನೇತೃತ್ವದಲ್ಲಿ ಭಾರತೀಯ ಭಾಷೆಗಳ ಅಭಿವೃದ್ಧಿ, ಸಂರಕ್ಷಣೆಗೆ ಆದ್ಯತೆ; ಕೇಂದ್ರ ಸಚಿವ ಕಿಶನ್ ರೆಡ್ಡಿ

ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ, ಭಾರತದ ಶ್ರೀಮಂತ ಭಾಷಾ ಪರಂಪರೆಯ ಸಂರಕ್ಷಣೆ, ಪ್ರಚಾರ ಮತ್ತು ಅಭಿವೃದ್ಧಿಗೆ ಭಾರತ ಸರ್ಕಾರವು ಬದ್ಧವಾಗಿದೆ. ಭಾಷೆ ಕೇವಲ ಅಭಿವ್ಯಕ್ತಿ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿಯ ಆತ್ಮ ಎಂಬ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಹೇಳಿಕೆಯನ್ನು ಕೇಂದ್ರ ಸಚಿವ ಜಿ.ಕಿಶನ್ ರೆಡ್ಡಿ ಪುನರುಚ್ಚರಿಸಿದ್ದಾರೆ. ಇಂದು ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ಪ್ರಾದೇಶಿಕ ಭಾಷೆಗಳನ್ನು ಬಲಪಡಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದರು.

ಮೋದಿ ನೇತೃತ್ವದಲ್ಲಿ ಭಾರತೀಯ ಭಾಷೆಗಳ ಅಭಿವೃದ್ಧಿ, ಸಂರಕ್ಷಣೆಗೆ ಆದ್ಯತೆ; ಕೇಂದ್ರ ಸಚಿವ ಕಿಶನ್ ರೆಡ್ಡಿ
Kishan Reddy (3)
ಸುಷ್ಮಾ ಚಕ್ರೆ
|

Updated on: Dec 18, 2024 | 4:03 PM

Share

ನವದೆಹಲಿ: ಭಾರತ ದೇಶದ ಶ್ರೀಮಂತ ಭಾಷಿಕ ಪರಂಪರೆಯನ್ನು ಉಳಿಸಿ, ಬೆಳೆಸಲು ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬದ್ಧವಾಗಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಇಂದು ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದಾರೆ. ಅವರು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಸರ್ಕಾರದ ದೃಷ್ಟಿಯನ್ನು ಪ್ರಸ್ತುತಪಡಿಸಿದರು. ಸಾಂಸ್ಕೃತಿಕ ಬೆಳವಣಿಗೆ ಮತ್ತು ರಾಷ್ಟ್ರೀಯ ಏಕತೆಯಲ್ಲಿ ಭಾಷೆಗಳು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಕಿಶನ್ ರೆಡ್ಡಿ ಹೇಳಿದರು.

ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಮಾತನಾಡಿ, ಭಾರತೀಯ ಭಾಷೆಗಳ ವೈವಿಧ್ಯತೆ ಅನನ್ಯವಾಗಿದೆ, ಇದು ವಿಶ್ವದಲ್ಲೇ ವಿಶಿಷ್ಟ ಮಾದರಿಯಾಗಿದೆ. ಭಾರತದಲ್ಲಿನ ಭಾಷೆಗಳು ಕೇವಲ ಸಂವಹನದ ಸಾಧನವಲ್ಲ. ಅದು ಜ್ಞಾನ, ಸಂಸ್ಕೃತಿ ಮತ್ತು ಸಂಪ್ರದಾಯಗಳ ಅಮೂಲ್ಯ ಭಂಡಾರವಾಗಿದೆ. 1835ರಲ್ಲಿ ಮೆಕಾಲೆಯ ನೀತಿಗಳು ಭಾರತೀಯ ಭಾಷೆಗಳನ್ನು ಹತ್ತಿಕ್ಕಿತು, ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಸೀಮಿತಗೊಳಿಸಿತು ಎಂದು ಅವರು ಹೇಳಿದರು. ಆದರೆ, ಮೋದಿ ಸರ್ಕಾರ ಪ್ರಾದೇಶಿಕ ಭಾಷೆಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು ತೋರಿಸಿದೆ ಎಂದರು.

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಭಾಷೆಗಳ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲಾಗುತ್ತಿದೆ ಎಂದು ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದರು. 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಶ್ಮೀರಿ, ಡೋಗ್ರಿ, ಉರ್ದು, ಹಿಂದಿ ಮತ್ತು ಇಂಗ್ಲಿಷ್ ಅನ್ನು ಅಧಿಕೃತ ಭಾಷೆಗಳಾಗಿ ಗುರುತಿಸಲಾಗಿದೆ. ಈ ನಿರ್ಧಾರವು ಸ್ಥಳೀಯ ಸಮುದಾಯಗಳ ಭಾವನೆ ಮತ್ತು ಸಬಲೀಕರಣಕ್ಕೆ ಬಹಳ ಮುಖ್ಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ: ಮೋದಿ ಬದಲು ದೇವರ ನಾಮ ಹೇಳಿದ್ದರೆ ನೂರು ಜನ್ಮದಲ್ಲಿ ಸ್ವರ್ಗ ಸಿಗ್ತಿತ್ತು: ಅಂಬೇಡ್ಕರ್ ಕುರಿತ ಶಾ ಹೇಳಿಕೆಗೆ ಸಿಎಂ ತಿರುಗೇಟು

ಜಿ. ಕಿಶನ್ ರೆಡ್ಡಿ ಅವರ ಪ್ರಕಾರ, ಇಂದು ಭಾರತದ ಪ್ರಾಚೀನ ಸಾಂಸ್ಕೃತಿಕ ಪರಂಪರೆಯನ್ನು ಸಂರಕ್ಷಿಸುವ ಶಾಸ್ತ್ರೀಯ ಭಾಷೆಗಳಿಗೆ ವಿಶೇಷ ಗಮನ ನೀಡಲಾಗಿದೆ. ಪ್ರಾಚೀನ ಭಾಷೆಗಳಿಗೆ ಶಾಸ್ತ್ರೀಯ ಭಾಷಾ ಸ್ಥಾನಮಾನ ನೀಡಲು ಸರ್ಕಾರ ನಿರಂತರವಾಗಿ ಶ್ರಮಿಸಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು ಅಕ್ಟೋಬರ್ 2024ರಲ್ಲಿ ಮರಾಠಿ, ಪಾಲಿ, ಪ್ರಾಕೃತ, ಅಸ್ಸಾಮಿ ಮತ್ತು ಬೆಂಗಾಲಿಗಳನ್ನು ಶಾಸ್ತ್ರೀಯ ಭಾಷೆಗಳಾಗಿ ಹೆಸರಿಸಲು ಅನುಮೋದಿಸಿತು. ಅದರ ಒಟ್ಟು ಸಂಖ್ಯೆ 11ಕ್ಕೆ ಏರಿದೆ ಎಂದು ಮಾಹಿತಿ ನೀಡಿದ್ದಾರೆ.

11 ಶಾಸ್ತ್ರೀಯ ಭಾಷೆಗಳಿಗೆ ಮಾನ್ಯತೆ:

11 ಶಾಸ್ತ್ರೀಯ ಭಾಷೆಗಳಿಗೆ ಮಾನ್ಯತೆ ನೀಡಿರುವ ವಿಶ್ವದ ಏಕೈಕ ರಾಷ್ಟ್ರ ಭಾರತವಾಗಿದೆ. 2020ರಲ್ಲಿ ಸಂಸ್ಕೃತಕ್ಕಾಗಿ ಮೂರು ಕೇಂದ್ರೀಯ ವಿಶ್ವವಿದ್ಯಾಲಯಗಳ ಸ್ಥಾಪನೆ, ಸಂಶೋಧನೆ ಮತ್ತು ಭಾಷಾಂತರಕ್ಕಾಗಿ ಶಾಸ್ತ್ರೀಯ ತಮಿಳಿನ ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಸ್ಥಾಪನೆ ಮತ್ತು ಮೈಸೂರಿನ ಭಾರತೀಯ ಭಾಷೆಗಳ ಕೇಂದ್ರ ಸಂಸ್ಥೆ ಅಡಿಯಲ್ಲಿ ಕನ್ನಡ, ತೆಲುಗು, ಮಲಯಾಳಂ ಮತ್ತು ಒಡಿಯಾಗಳಿಗೆ ವಿಶೇಷ ಅಧ್ಯಯನ ಕೇಂದ್ರಗಳನ್ನು ರಚಿಸುವ ನಿಟ್ಟಿನಲ್ಲಿಯೂ ಪ್ರಗತಿ ಸಾಧಿಸುತ್ತಿವೆ ಎಂದಿದ್ದಾರೆ.

ಇದನ್ನೂ ಓದಿ: ನೆಹರೂ ಕಾಲದಿಂದಲೂ ಕಾಂಗ್ರೆಸ್​ಗೆ​ ಸಂವಿಧಾನ ಬದಲಿಸುವ ಚಟ; ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ತೀವ್ರ ವಾಗ್ದಾಳಿ

ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಭಾಷೆಗಳನ್ನು ಸೇರಿಸಿರುವುದು ಈ ದಿಸೆಯಲ್ಲಿ ಮಹತ್ವದ ಹೆಜ್ಜೆಯಾಗಿದೆ ಎಂದು ಜಿ.ಕಿಶನ್ ರೆಡ್ಡಿ ಹೇಳಿದ್ದಾರೆ. ಆರಂಭದಲ್ಲಿ 8ನೇ ಶೆಡ್ಯೂಲ್‌ನಲ್ಲಿ 14 ಭಾಷೆಗಳು ಇದ್ದವು, ಅದು ಈಗ 22ಕ್ಕೆ ಏರಿದೆ. ಈ ಹಂತವು ಭಾರತದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ. ಸಿಂಧಿಯನ್ನು 1967ರಲ್ಲಿ 8ನೇ ಶೆಡ್ಯೂಲ್‌ಗೆ ಸೇರಿಸಲಾಯಿತು. ನಾನು ಹಿಂದಿ ಮಾತನಾಡುತ್ತೇನೆ, ಆದರೆ ಸಿಂಧಿ ನನ್ನ ಚಿಕ್ಕಮ್ಮ ಎಂದು ಅಟಲ್ ಬಿಹಾರಿ ವಾಜಪೇಯಿ ಹೇಳಿದ್ದರು ಎಂದು ಕಿಶನ್ ರೆಡ್ಡಿ ನೆನಪಿಸಿಕೊಂಡಿದ್ದಾರೆ.

ಅದೇ ರೀತಿ 1992ರಲ್ಲಿ ಕೊಂಕಣಿ, ಮಣಿಪುರಿ ಮತ್ತು ನೇಪಾಳಿ ಭಾಷೆಗಳನ್ನು ಸಂವಿಧಾನದ ಎಂಟನೇ ಶೆಡ್ಯೂಲ್‌ಗೆ ಸೇರಿಸಲಾಯಿತು. ನಂತರ 2003ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರವು ಭಾರತದ ಪ್ರಾದೇಶಿಕ ಭಾಷೆಗಳ ಬೆಳವಣಿಗೆಗೆ ಉತ್ತೇಜನ ನೀಡಿತು. ಆಗಿನ ಉಪಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರು ಪರಿಚಯಿಸಿದ ತಿದ್ದುಪಡಿಯ ಮೂಲಕ ಬೋಡೋ, ಡೋಗ್ರಿ, ಮೈಥಿಲಿ ಮತ್ತು ಸಂತಾಲಿ ಭಾಷೆಗಳನ್ನು ಅದರಲ್ಲಿ ಸೇರಿಸಲಾಯಿತು. ಸಂತಾಲಿಯ ಸೇರ್ಪಡೆಯು ಬುಡಕಟ್ಟು ಸಂಸ್ಕೃತಿ ಮತ್ತು ಮೌಲ್ಯಗಳ ಬಗ್ಗೆ ಸರ್ಕಾರದ ಬದ್ಧತೆ ಮತ್ತು ಗೌರವವನ್ನು ಪ್ರತಿಬಿಂಬಿಸುತ್ತದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ