AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಜೆಯಲ್ಲಿರುವ ಉದ್ಯೋಗಿಗಳಿಗೆ ಕರೆ ಮಾಡಿದರೆ ₹1 ಲಕ್ಷ ದಂಡ; ಡ್ರೀಮ್ 11 ಕಂಪನಿಯ ನೌಕರರಿಗೆ ಹೀಗಿದೆ ರಜಾ ಸವಲತ್ತು

ವರ್ಷಕ್ಕೊಮ್ಮೆ ಒಂದು ವಾರದವರೆಗೆ ರಜೆ ಇರುತ್ತದೆ ಎಂದು ಶೇತ್ ಹೇಳಿದ್ದಾರೆ. ಈ ರಜಾಕಾಲದಲ್ಲಿ ನಿಮಗೆ ಸ್ಲಾಕ್, ಇಮೇಲ್‌ಗಳು ಮತ್ತು ಕರೆಗಳು ಇರುವುದಿಲ್ಲ. ಏಕೆಂದರೆ ಆ ಒಂದು ವಾರದ ಅಡೆತಡೆಯಿಲ್ಲದ ಸಮಯವನ್ನು ಹೊಂದಲು ಇದು ನಿಮಗೆ ಹೆಚ್ಚು ಸಹಾಯ ಮಾಡುತ್ತದೆ.

ರಜೆಯಲ್ಲಿರುವ ಉದ್ಯೋಗಿಗಳಿಗೆ ಕರೆ ಮಾಡಿದರೆ ₹1 ಲಕ್ಷ ದಂಡ; ಡ್ರೀಮ್ 11 ಕಂಪನಿಯ ನೌಕರರಿಗೆ ಹೀಗಿದೆ ರಜಾ ಸವಲತ್ತು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jan 12, 2023 | 1:45 PM

Share

ಪ್ರಪಂಚದಾದ್ಯಂತದ ಹೆಚ್ಚಿನ ಕೆಲಸಗಾರರಿಗೆ, ರಜಾದಿನಗಳು ಕಟ್ಟುನಿಟ್ಟಾಗಿ ವಿಶ್ರಾಂತಿ ಪಡೆಯುವ ಸಮಯವಾಗಿದೆ. ರಜಾಕಾಲದ ಮಜಾ ಅನುಭವಿಸಲು ಬೀಚ್‌ನಲ್ಲಿ ವಿಶ್ರಾಂತಿ ಪಡೆಯುವಾಗ ಅಥವಾ ಬೆಟ್ಟಗಳಲ್ಲಿ ಅಲೆದಾಡುವಾಗ ಸಹೋದ್ಯೋಗಿಗಳಿಂದ ಯಾವುದೇ ಕರೆ ಬಂದರೆ ಅದು ಕಿರಿಕಿರಿಯೇ. ಅಂತಹ ಕರೆಗಳು ಮತ್ತು ತುರ್ತು ಕೆಲಸ-ಸಂಬಂಧಿತ ವಿನಂತಿಗಳು ಈ ರಜಾ ಸಮಯದಲ್ಲಿ ಬಂದು ಬಿಟ್ಟರೆ ಇದು ರಜೆಯ ಮೂಡ್​​​ನ್ನೇ ಹಾಳು ಮಾಡಿ ಬಿಡುತ್ತದೆ. ಇದೀಗ ಭಾರತೀಯ ಕಂಪನಿಯೊಂದು ಈ ಕಿರಿಕಿರಿಗೆ ಪರಿಹಾರವೊಂದನ್ನು ಕಂಡುಕೊಂಡಿದೆ. ಫ್ಯಾಂಟಸಿ ಸ್ಪೋರ್ಟ್ಸ್ ಪ್ಲಾಟ್‌ಫಾರ್ಮ್ ಅನ್ನು ನಡೆಸುತ್ತಿರುವ ಮುಂಬೈ ಮೂಲದ ಡ್ರೀಮ್ 11(Dream11) ನಲ್ಲಿನ ಉದ್ಯೋಗಿಗಳು ರಜಾಕಾಲದಲ್ಲಿ ಸಹೋದ್ಯೋಗಿಯನ್ನು ಸಂಪರ್ಕಿಸಿದರೆ 1 ಲಕ್ಷ ರೂಪಾಯಿ ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಸಹ-ಸಂಸ್ಥಾಪಕ ಭವಿತ್ ಶೇತ್ (Bhavit Sheth) ಸಿಎನ್‌ಬಿಸಿಗೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ. 2008 ರಲ್ಲಿ ಸ್ಥಾಪನೆಯಾದ ಕಂಪನಿಯು ಕಾರ್ಮಿಕರಿಗೆ ವಾರ್ಷಿಕವಾಗಿ ಕನಿಷ್ಠ ಒಂದು ವಾರ ರಜೆ ತೆಗೆದುಕೊಳ್ಳುವುದನ್ನು ಕಡ್ಡಾಯಗೊಳಿಸುತ್ತದೆ.

ವರ್ಷಕ್ಕೊಮ್ಮೆ ಒಂದು ವಾರದವರೆಗೆ ರಜೆ ಇರುತ್ತದೆ ಎಂದು ಶೇತ್ ಹೇಳಿದ್ದಾರೆ. ಈ ರಜಾಕಾಲದಲ್ಲಿ ನಿಮಗೆ ಸ್ಲಾಕ್, ಇಮೇಲ್‌ಗಳು ಮತ್ತು ಕರೆಗಳು ಇರುವುದಿಲ್ಲ. ಏಕೆಂದರೆ ಆ ಒಂದು ವಾರದ ಅಡೆತಡೆಯಿಲ್ಲದ ಸಮಯವನ್ನು ಹೊಂದಲು ಇದು ನಿಮಗೆ ಹೆಚ್ಚು ಸಹಾಯ ಮಾಡುತ್ತದೆ. ನಾವು ಯಾರ ಮೇಲೆ ಅವಲಂಬಿತರಾಗಿದ್ದೇವೆ ಎಂಬುದನ್ನು ತಿಳಿದುಕೊಳ್ಳಲು ಇದು ಸಹಕಾರಿ ಎಂದಿದ್ದಾರೆ ಶೇತ್. ಇಲ್ಲಿಯವರೆಗೆ ಈ ವ್ಯವಸ್ಥೆಯು ಪರಿಣಾಮಕಾರಿಯಾಗಿದೆ ಎಂದು ಶೇತ್ ಹೇಳಿದ್ದಾರೆ.

ಈ ಅಡೆತಡೆಯಿಲ್ಲದ ಸಮಯವು ಡ್ರೀಮ್‌ಸ್ಟರ್‌ಗಳಿಗೆ (ಡ್ರೀಮ್ 11 ರ ಉದ್ಯೋಗಿಗಳು) ವಿಶ್ರಾಂತಿ ಪಡೆಯಲು, ರೀಚಾರ್ಜ್ ಮಾಡಲು ಮತ್ತು ತಮ್ಮ ಅತ್ಯುತ್ತಮವಾದದ್ದನ್ನು ನೀಡಲು ಸಿದ್ಧರಾಗಿ ಕೆಲಸಕ್ಕೆ ಮರಳಲು ಅನುವು ಮಾಡಿಕೊಡುತ್ತದೆ ಎಂದು Dream11 ನಂಬುತ್ತದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ.

ಉತ್ತಮ ಗುಣಮಟ್ಟದ ರಜಾಕಾಲ ಆನಂದಿಸಲು ಕಾರ್ಮಿಕರಿಗೆ ಅವಕಾಶ ನೀಡಲು ದಂಡವು ಗಮನ ಸೆಳೆಯುವ ಮಾರ್ಗವಾಗಿದೆ. ಪ್ರತಿಭೆಯನ್ನು ಉಳಿಸಿಕೊಳ್ಳುವ ಪ್ರಯತ್ನದಲ್ಲಿ, ಗೋಲ್ಡ್‌ಮನ್ ಸ್ಯಾಚ್ಸ್ ಗ್ರೂಪ್ ಇಂಕ್ ಸೇರಿದಂತೆ ಅನೇಕ ಇತರ ವ್ಯವಹಾರಗಳು ಸಿಬ್ಬಂದಿಗೆ ಅನಿಯಮಿತ ರಜೆಗಳನ್ನು ತೆಗೆದುಕೊಳ್ಳಲು ಅವಕಾಶ ನೀಡುತ್ತಿವೆ. ಆದರೆ ಕಳೆದ ವರ್ಷ ಯುಕೆ ನೇಮಕಾತಿ ಸಂಸ್ಥೆಯು ನೌಕರರು ನಿಜವಾಗಿಯೂ ಎಷ್ಟು ದಿನಗಳನ್ನು ತೆಗೆದುಕೊಳ್ಳಬೇಕೆಂದು ಪ್ರಶ್ನಿಸಿದ ನಂತರ ಆ ನೀತಿಯನ್ನು ರದ್ದುಗೊಳಿಸುವುದಾಗಿ ಹೇಳಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ