AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು- ಉಗ್ರರ ನಡುವೆ ಎನ್​ಕೌಂಟರ್ ಆರಂಭ

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಉಗ್ರ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಎನ್‌ಕೌಂಟರ್ ಆರಂಭವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಗುಪ್ತಚರ ಇಲಾಖೆಯಿಂದ ನಿಖರ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ಕಾರ್ಯಾಚರಣೆಯನ್ನು ಮತ್ತಷ್ಟು ಬಲಪಡಿಸಲು ಹೆಚ್ಚುವರಿ ಭದ್ರತಾ ಸಿಬ್ಬಂದಿಯನ್ನು ಸ್ಥಳಕ್ಕೆ ರವಾನಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನಲ್ಲಿ ಭದ್ರತಾ ಪಡೆಗಳು- ಉಗ್ರರ ನಡುವೆ ಎನ್​ಕೌಂಟರ್ ಆರಂಭ
Jammu Kashmir EncounterImage Credit source: TV9
ಸುಷ್ಮಾ ಚಕ್ರೆ
|

Updated on: Jul 04, 2026 | 11:09 PM

Share

ಶ್ರೀನಗರ, ಜುಲೈ 4: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಂದು ಉಗ್ರ ನಿಗ್ರಹ ಕಾರ್ಯಾಚರಣೆಯ ವೇಳೆ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಭೀಕರ ಗುಂಡಿನ ಚಕಮಕಿ ಎನ್‌ಕೌಂಟರ್ (Encounter) ಆರಂಭವಾಗಿದೆ. ಈ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಸಿಬ್ಬಂದಿ ಬೃಹತ್ ಜಂಟಿ ಶೋಧ ಕಾರ್ಯಾಚರಣೆ ಆರಂಭಿಸಿದ್ದರು. ಈ ವೇಳೆ ಅಡಗಿದ್ದ ಉಗ್ರರು ಜಂಟಿ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಚಕಮಕಿ ಆರಂಭವಾಯಿತು. ಸದ್ಯ ಭದ್ರತಾ ಪಡೆಗಳು ಚಾನಪೋರಾ, ಸೈದಪೋರಾ, ಸೈದಪೋರಾ ಬಾಲಾ, ಅಮ್ಶಿಪೋರಾ ಮತ್ತು ಸುತ್ತಮುತ್ತಲಿನ ಹಲವು ಪ್ರದೇಶಗಳನ್ನು ಸಂಪೂರ್ಣವಾಗಿ ಸುತ್ತುವರೆದಿದ್ದು, ತೀವ್ರ ಶೋಧ ನಡೆಸುತ್ತಿದ್ದಾರೆ.

ಶೋಪಿಯಾನ್ ಜಿಲ್ಲೆಯಲ್ಲಿ ಸಂಶಯಾಸ್ಪದ ಓಡಾಟದ ಬಗ್ಗೆ ಸಿಕ್ಕ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ಇಂದು ಮುಂಜಾನೆ ಈ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿತ್ತು. ಕಾರ್ಯಾಚರಣೆ ಮುಂದುವರಿದಂತೆ ಉಗ್ರರು ಭದ್ರತಾ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದು, ಇದು ಎನ್‌ಕೌಂಟರ್‌ಗೆ ಕಾರಣವಾಗಿದೆ. ಪ್ರಸ್ತುತ ಈ ಪ್ರದೇಶಕ್ಕೆ ಹೆಚ್ಚಿನ ಭದ್ರತಾ ಪಡೆಗಳನ್ನು ರವಾನಿಸಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ. ಅಲ್ಲಿ ಎಷ್ಟು ಜನ ಉಗ್ರರು ಸಿಲುಕಿಕೊಂಡಿದ್ದಾರೆ ಅಥವಾ ಸಾವು-ನೋವುಗಳ ಬಗ್ಗೆ ಅಧಿಕಾರಿಗಳು ಇನ್ನು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಇದನ್ನೂ ಓದಿ: ಬಿಹಾರದಲ್ಲಿ ಫೇಸ್‌ಬುಕ್ ಲೈವ್‌ನಲ್ಲಿ ಶರಣಾಗುವುದಾಗಿ ಹೇಳಿದ್ದ ರೌಡಿ ಎನ್‌ಕೌಂಟರ್‌ಗೆ ಬಲಿ!

ಅಮರನಾಥ ಯಾತ್ರೆಗೆ ಬಿಗಿ ಭದ್ರತೆ:

ಒಂದೆಡೆ ಎನ್‌ಕೌಂಟರ್ ನಡೆಯುತ್ತಿದ್ದರೆ, ಮತ್ತೊಂದೆಡೆ ಅಮರನಾಥ ಯಾತ್ರೆಯ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವಾರ್ಷಿಕ ಅಮರನಾಥ ಯಾತ್ರೆಯಲ್ಲಿ ಭಾಗವಹಿಸಲು 4,812 ಯಾತ್ರಾರ್ಥಿಗಳ ಮೂರನೇ ತಂಡವು ಇಂದು ಮುಂಜಾನೆ ಜಮ್ಮುವಿನ ಭಗವತಿ ನಗರ ಬೇಸ್ ಕ್ಯಾಂಪ್‌ನಿಂದ ಹೊರಟಿದೆ. 966 ಮಹಿಳೆಯರು, 244 ಸಾಧುಗಳು ಮತ್ತು 157 ಸಾಧ್ವಿಗಳನ್ನು ಒಳಗೊಂಡ ಈ ತಂಡ ಬಿಗಿ ಭದ್ರತೆಯ ನಡುವೆ 126 ವಾಹನಗಳ 2 ಬೆಂಗಾವಲು ಪಡೆಗಳಲ್ಲಿ ಪ್ರಯಾಣ ಬೆಳೆಸಿದೆ. ಒಟ್ಟು ಯಾತ್ರಾರ್ಥಿಗಳಲ್ಲಿ 542 ಮಹಿಳೆಯರು ಮತ್ತು 6 ಮಕ್ಕಳು ಸೇರಿದಂತೆ 2,771 ಜನರು ಪಹಲ್ಗಾಮ್ ಬೇಸ್ ಕ್ಯಾಂಪ್‌ನತ್ತ ತೆರಳಿದ್ದರೆ, ಉಳಿದ ಯಾತ್ರಾರ್ಥಿಗಳು ಬಾಲ್ಟಾಲ್ ಮಾರ್ಗವನ್ನು ಆಯ್ದುಕೊಂಡಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us