Pulwama Encounter: ಪುಲ್ವಾಮಾದಲ್ಲಿ ಎನ್ಕೌಂಟರ್, ಮೂವರು ಉಗ್ರರ ಸೆರೆ
ಭದ್ರತಾ ಪಡೆ ಹಾಗೂ ಉಗ್ರರ ನಡುವೆ ಪುಲ್ವಾಮಾದಲ್ಲಿ ಗುಂಡಿನ ಚಕಮಕಿ ನಡೆದಿದೆ. ಮೂವರು ಉಗ್ರರನ್ನು ಸೆರೆ ಹಿಡಿಯಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ, ಸಂಘಟಿತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರನ್ನು ಬಂಧಿಸಿವೆ. ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

ಪುಲ್ವಾಮಾ, ಮೇ 15: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ(Pulwama)ದಲ್ಲಿ ಗುರುವಾರ ಬೆಳಗ್ಗೆ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ಮಾಹಿತಿ ನೀಡಿದ್ದಾರೆ. ದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿರುವ ತ್ರಾಲ್ನ ನಾದಿರ್ ಗ್ರಾಮದಲ್ಲಿ ಭದ್ರತಾ ಪಡೆಗಳು ಸುತ್ತುವರೆದು ಶೋಧ ಕಾರ್ಯಾಚರಣೆ ಪ್ರಾರಂಭಿಸಿವೆ.
ಆರಂಭಿಕ ವರದಿಗಳ ಪ್ರಕಾರ, ಈ ಪ್ರದೇಶದಲ್ಲಿ 2-3 ಉಗ್ರರು ಸಿಕ್ಕಿಬಿದ್ದಿದ್ದಾರೆ, ಸಂಘಟಿತ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ನಡೆಯುತ್ತಿದ್ದು, ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರೆದು ಭಯೋತ್ಪಾದಕರನ್ನು ಬಂಧಿಸಿವೆ. ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಅವಂತಿಪೋರಾದ ನಾಡರ್, ಟ್ರಾಲ್ ಪ್ರದೇಶದಲ್ಲಿ ಎನ್ಕೌಂಟರ್ ಆರಂಭವಾಗಿದೆ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆಯಲ್ಲಿವೆ. ಹೆಚ್ಚಿನ ವಿವರಗಳು ನಂತರ ಬರಲಿವೆ ಎಂದು ಕಾಶ್ಮೀರ ವಲಯ ಪೊಲೀಸರು ಎಕ್ಸ್ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಭಾರತ ಹಾಗೂ ಪಾಕಿಸ್ತಾನದ ನಡುವೆ ಅಘೋಷಿತ ಯುದ್ಧಕ್ಕೆ ವಿರಾಮ ಬಿದ್ದಿದ್ದರೂ ದೇಶದಲ್ಲಿ ಉಗ್ರರನ್ನು ಸದೆಬಡಿಯುವ ಕಾರ್ಯವನ್ನು ಸೇನೆ ಹಾಗೂ ಪೊಲೀಸರು ಮಾಡುತ್ತಿದ್ದಾರೆ.
ಮತ್ತಷ್ಟು ಓದಿ: Operation Keller: ಭಾರತೀಯ ಸೇನೆಯ ಹೊಸ ಕಾರ್ಯಾಚರಣೆ ‘ಆಪರೇಷನ್ ಕೆಲ್ಲರ್’ ಏನಿದು?
ಏಪ್ರಿಲ್ 22ರಂದು ಉಗ್ರರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಅಮಾಯಕರನ್ನು ಹತ್ಯೆ ಮಾಡಿದ್ದರು, ಅದಕ್ಕೆ ಪ್ರತಿಯಾಗಿ ಭಾರತವು ಪಾಕಿಸ್ತಾನದ ಮೇಲೆ ದಾಳಿ ನಡೆಸಿ 9 ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು.
#Encounter has started at Nader, Tral area of #Awantipora. Police and security forces are on the job. Further details shall follow.@JmuKmrPolice
— Kashmir Zone Police (@KashmirPolice) May 15, 2025
ಶೋಪಿಯಾನ್ನಲ್ಲಿ ಮೂವರು ಲಷ್ಕರ್-ಎ-ತೊಯ್ಬಾ ಭಯೋತ್ಪಾದಕರ ಹತ್ಯೆ ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಸೇನೆಯ ಪ್ರಕಾರ, ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಶೋಕಲ್ ಕೆಲ್ಲರ್ ಸಾಮಾನ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ, ಭಾರತೀಯ ಸೇನೆಯು ಆಪರೇಷನ್ ಕೆಲ್ಲರ್ ಅನ್ನು ಪ್ರಾರಂಭಿಸಿತ್ತು. ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್ಕೌಂಟರ್ ಆಗಿ ಬದಲಾಯಿತು, ಮತ್ತು ಅವರು ಪ್ರತಿದಾಳಿ ನಡೆಸಿದರು.
ಆಪರೇಷನ್ ಕೆಲ್ಲರ್ ಆಪರೇಷನ್ ಸಿಂಧೂರ್ ಯಶಸ್ಸಿನಿಂದಾಗಿ ಭಾರತೀಯ ಸೇನೆಯ ನೈತಿಕ ಸ್ಥೈರ್ಯ ಹೆಚ್ಚಾಗಿದೆ. ಸೇನೆಯು ಈಗ ಭಯೋತ್ಪಾದನೆ ವಿರುದ್ಧ ಹೊಸ ಕಾರ್ಯಾಚರಣೆಯನ್ನು ಆರಂಭಿಸಿದೆ ಅದಕ್ಕೆ ‘ಆಪರೇಷನ್ ಕೆಲ್ಲರ್’(Operation Keller) ಎಂದು ಹೆಸರಿಡಲಾಗಿದೆ. ಮಂಗಳವಾರ ಭಾರತೀಯ ಸೇನೆಯು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಕೆಲ್ಲರ್ ದಡ್ಡ ಅರಣ್ಯ ಪ್ರದೇಶದಲ್ಲಿ ಲಷ್ಕರ್-ಎ-ತೊಯ್ಬಾದ ಮೂವರು ಉಗ್ರರನ್ನು ಸದೆಬಡಿದಿದೆ. ಹೀಗಾಗಿ ಈ ಪ್ರದೇಶದ ಹೆಸರನ್ನೇ ನಾಮಕರಣ ಮಾಡಲಾಗಿದೆ.
ಈ ಹಿಂದೆ ಶೋಕಲ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ರಾಷ್ಟ್ರೀಯ ರೈಫಲ್ಸ್ ಘಟಕವು ನಿಖರವಾದ ಗುಪ್ತಚರ ಮಾಹಿತಿಯನ್ನು ನೀಡಿತ್ತು. ಅದರ ನಂತರ ಸೇನೆಯು ಈ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಸಾಮಾಜಿಕ ಮಾಧ್ಯಮದಲ್ಲಿ ಸೇನೆಯು ಕಾರ್ಯಾಚರಣೆ ಬಗ್ಗೆ ಅಧಿಕೃತ ಹೇಳಿಕೆಯನ್ನು ನೀಡಿದೆ. ಪೋಸ್ಟ್ನಲ್ಲಿ ಆಪರೇಷನ್ ಕೆಲ್ಲರ್ ಮೇ 13 2025ರಂದು ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯನ್ನು ಆಧರಿಸಿ, ಭಾರತೀಯ ಸೇನೆಯು ಶೋಪಿಯಾನ್ನ ಶೋಕಲ್ ಕೆಲ್ಲರ್ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಬರೆಯಲಾಗಿದೆ.
ಕಾರ್ಯಾಚರಣೆಯ ಸಮಯದಲ್ಲಿ ಭಯೋತ್ಪಾದಕರು ಭಾರೀ ಗುಂಡು ಹಾರಿಸಿದರು, ಅದಕ್ಕೆ ಸೂಕ್ತ ಪ್ರತ್ಯುತ್ತರ ನೀಡಲಾಯಿತು ಎಂದು ಸೇನೆ ತಿಳಿಸಿದೆ. ಕಾರ್ಯಾಚರಣೆಯಲ್ಲಿ ಮೂವರು ಕಟ್ಟಾ ಭಯೋತ್ಪಾದಕರು ಸಾವನ್ನಪ್ಪಿದರು. ಮತ್ತು ಈ ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ