AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ

ಗಾಯಕ  ಸಿಧು ಮೂಸೆವಾಲ ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 20, 2022 | 4:57 PM

Share

ಪಂಜಾಬ್​​ನಲ್ಲಿ ಪೊಲೀಸರು (Punjab Police) ಮತ್ತು ಗಾಯಕ  ಸಿಧು ಮೂಸೆವಾಲ (Sidhu Moose Wala) ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರ ಗ್ಯಾಂಗ್​​ಸ್ಟರ್ ನಿಗ್ರಹ ಪಡೆ ಅಮೃತಸರದ ಚೀಚಾ ಭಕ್ನಾಗ್ರಾಮದಲ್ಲಿ ಎನ್​​ಕೌಂಟರ್ ನಡೆಸಿದೆ. ಪ್ರಸ್ತುತ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಜನರು ಹೊರಗೆ ಬರದಂತೆ ಆದೇಶಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಗ್ಯಾಂಗ್​​ಸ್ಟರ್​​ಗಳು ಹತ್ಯೆಯಾಗಿದ್ದು ಐದು ಪೊಲೀಸರಿಗೆ ಗಾಯಗಳಾಗಿವೆ. ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್​​ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು ಗ್ಯಾಂಗ್​​ಸ್ಟರ್​​ಗಳಾದ ಜಗರೂಪ್ ಸಿಂಗ್ ರೂಪಾ ಮತ್ತು ಮನಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಗಾಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಮೂಸೆವಾಲ ಅವರಿಗೆ ಎಕೆ-47ನಿಂದ ಮೊದಲು ಶೂಟ್ ಮಾಡಿದ್ದು ಮನ್ನು ಕುಸ್ಸಾ ಎಂದು ಹೇಳಲಾಗುತ್ತಿದೆ ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ. ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು. ಈ ಪ್ರಕರಣದಲ್ಲಿ ಮೂವರು ಶೂಟರ್​​ಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದರಲ್ಲಿ ಇಬ್ಬರು ಶೂಟೌಟ್ ನಡೆಸಿದ್ದು ದೀಪಕ್ ಮುಂಡಿ ಎಂಬಾತನನ್ನು ಇನ್ನೂ ಪತ್ತೆ ಹಚ್ಚಲು ಆಗಲಿಲ್ಲ.

Published On - 2:07 pm, Wed, 20 July 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ