AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ

ಗಾಯಕ  ಸಿಧು ಮೂಸೆವಾಲ ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ
TV9 Web
| Edited By: |

Updated on:Jul 20, 2022 | 4:57 PM

Share

ಪಂಜಾಬ್​​ನಲ್ಲಿ ಪೊಲೀಸರು (Punjab Police) ಮತ್ತು ಗಾಯಕ  ಸಿಧು ಮೂಸೆವಾಲ (Sidhu Moose Wala) ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರ ಗ್ಯಾಂಗ್​​ಸ್ಟರ್ ನಿಗ್ರಹ ಪಡೆ ಅಮೃತಸರದ ಚೀಚಾ ಭಕ್ನಾಗ್ರಾಮದಲ್ಲಿ ಎನ್​​ಕೌಂಟರ್ ನಡೆಸಿದೆ. ಪ್ರಸ್ತುತ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಜನರು ಹೊರಗೆ ಬರದಂತೆ ಆದೇಶಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಗ್ಯಾಂಗ್​​ಸ್ಟರ್​​ಗಳು ಹತ್ಯೆಯಾಗಿದ್ದು ಐದು ಪೊಲೀಸರಿಗೆ ಗಾಯಗಳಾಗಿವೆ. ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್​​ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು ಗ್ಯಾಂಗ್​​ಸ್ಟರ್​​ಗಳಾದ ಜಗರೂಪ್ ಸಿಂಗ್ ರೂಪಾ ಮತ್ತು ಮನಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಗಾಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಮೂಸೆವಾಲ ಅವರಿಗೆ ಎಕೆ-47ನಿಂದ ಮೊದಲು ಶೂಟ್ ಮಾಡಿದ್ದು ಮನ್ನು ಕುಸ್ಸಾ ಎಂದು ಹೇಳಲಾಗುತ್ತಿದೆ ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ. ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು. ಈ ಪ್ರಕರಣದಲ್ಲಿ ಮೂವರು ಶೂಟರ್​​ಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದರಲ್ಲಿ ಇಬ್ಬರು ಶೂಟೌಟ್ ನಡೆಸಿದ್ದು ದೀಪಕ್ ಮುಂಡಿ ಎಂಬಾತನನ್ನು ಇನ್ನೂ ಪತ್ತೆ ಹಚ್ಚಲು ಆಗಲಿಲ್ಲ.

Published On - 2:07 pm, Wed, 20 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ