AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ

ಗಾಯಕ  ಸಿಧು ಮೂಸೆವಾಲ ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳು ಮತ್ತು ಪಂಜಾಬ್ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ.

Amritsar Encounter ಪಂಜಾಬ್ ಪೊಲೀಸರಿಂದ ಸಿಧು ಮೂಸೆವಾಲ ಹತ್ಯೆ ಪ್ರಕರಣದ ಶಂಕಿತ 4 ಗ್ಯಾಂಗ್​​ಸ್ಟರ್​​ಗಳ ಹತ್ಯೆ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Jul 20, 2022 | 4:57 PM

Share

ಪಂಜಾಬ್​​ನಲ್ಲಿ ಪೊಲೀಸರು (Punjab Police) ಮತ್ತು ಗಾಯಕ  ಸಿಧು ಮೂಸೆವಾಲ (Sidhu Moose Wala) ಪ್ರಕರಣದ ಶಂಕಿತ ಗ್ಯಾಂಗ್​​ಸ್ಟರ್​​ಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು ಜನರು ಮನೆಯಿಂದ ಹೊರಗೆ ಬರಬಾರದು ಎಂದು ಪೊಲೀಸರು ಆದೇಶಿಸಿದ್ದಾರೆ. ಪಂಜಾಬ್ ಪೊಲೀಸರ ಗ್ಯಾಂಗ್​​ಸ್ಟರ್ ನಿಗ್ರಹ ಪಡೆ ಅಮೃತಸರದ ಚೀಚಾ ಭಕ್ನಾಗ್ರಾಮದಲ್ಲಿ ಎನ್​​ಕೌಂಟರ್ ನಡೆಸಿದೆ. ಪ್ರಸ್ತುತ ಪ್ರದೇಶವನ್ನು ಪೊಲೀಸರು ಸುತ್ತುವರಿದಿದ್ದು, ಜನರು ಹೊರಗೆ ಬರದಂತೆ ಆದೇಶಿಸಿದ್ದಾರೆ. ಈ ಗುಂಡಿನ ಚಕಮಕಿಯಲ್ಲಿ ನಾಲ್ವರು ಗ್ಯಾಂಗ್​​ಸ್ಟರ್​​ಗಳು ಹತ್ಯೆಯಾಗಿದ್ದು ಐದು ಪೊಲೀಸರಿಗೆ ಗಾಯಗಳಾಗಿವೆ. ಶುಹುದೀಪ್ ಸಿಂಗ್ ಸಿಧು ಅಲಿಯಾಸ್ ಸಿಧು ಮೂಸೆವಾಲರನ್ನು ಮೇ 29ರಂದು ಪಂಜಾಬ್​​ನ ಮಾನ್ಸಾ ಜಿಲ್ಲೆಯಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಪೊಲೀಸರು ಹಲವರನ್ನು ಬಂಧಿಸಿದ್ದು ಗ್ಯಾಂಗ್​​ಸ್ಟರ್​​ಗಳಾದ ಜಗರೂಪ್ ಸಿಂಗ್ ರೂಪಾ ಮತ್ತು ಮನಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸ್ಗಾಗಾಗಿ ಪೊಲೀಸರು ಹುಡುಕಾಡುತ್ತಿದ್ದರು.

ಮೂಸೆವಾಲ ಅವರಿಗೆ ಎಕೆ-47ನಿಂದ ಮೊದಲು ಶೂಟ್ ಮಾಡಿದ್ದು ಮನ್ನು ಕುಸ್ಸಾ ಎಂದು ಹೇಳಲಾಗುತ್ತಿದೆ ಪಂಜಾಬ್, ದೆಹಲಿ ಮತ್ತು ಮುಂಬೈ ಪೊಲೀಸರು ಮೂಸೆವಾಲ ಪ್ರಕರಣದಲ್ಲಿ ಹಲವಾರು ಮಂದಿಯನ್ನು ಬಂಧಿಸಿದ್ದಾರೆ. ಕೆನಡಾ ಮೂಲದ ಗೋಲ್ಡಿ ಬ್ರಾರ್ ಮತ್ತು ಜೈಲಿನಲ್ಲಿರುವ ಗ್ಯಾಂಗ್​​ಸ್ಟರ್ ಲಾರೆನ್ಸ್ ಬಿಷ್ಣೋಯಿ ಹತ್ಯೆಯ ಹೊಣೆ ಹೊತ್ತುಕೊಂಡಿದ್ದರು. ಈ ಪ್ರಕರಣದಲ್ಲಿ ಮೂವರು ಶೂಟರ್​​ಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದರು. ಇದರಲ್ಲಿ ಇಬ್ಬರು ಶೂಟೌಟ್ ನಡೆಸಿದ್ದು ದೀಪಕ್ ಮುಂಡಿ ಎಂಬಾತನನ್ನು ಇನ್ನೂ ಪತ್ತೆ ಹಚ್ಚಲು ಆಗಲಿಲ್ಲ.

Published On - 2:07 pm, Wed, 20 July 22

ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಬಿಗ್​​ಬಾಸ್ 12: ರಕ್ಷಿತಾ ಶೆಟ್ಟಿಗೆ ಯೋಗ್ಯತೆ ಇಲ್ಲ, ರಿಯಾಕ್ಷನ್ ಹೇಗಿತ್ತು?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ರಿಸೈನ್: ಡಿಕೆಶಿ ರಾಜೀನಾಮೆ ಸವಾಲ್ ಹಾಕಿದ್ಯಾರಿಗೆ?
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ