AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ: ಏಷ್ಯಾದ ಅತ್ಯಂತ ಹಿರಿಯ ಆನೆ ‘ವತ್ಸಲಾ’ ಸಾವು

ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಅದು ಕೊನೆಯುಸಿರೆಳೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು. ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು.

ನಯನಾ ರಾಜೀವ್
|

Updated on: Jul 09, 2025 | 8:10 AM

Share

ಭೋಪಾಲ್, ಜುಲೈ 09: ಏಷ್ಯಾದ ಅತ್ಯಂತ ಹಿರಿಯ ಆನೆ ವತ್ಸಲಾ ಮಂಗಳವಾರ ಮಧ್ಯಾಹ್ನ ಸಾವನ್ನಪ್ಪಿದೆ. ಮಧ್ಯಪ್ರದೇಶದ ಪನ್ನಾ ಹುಲಿ ಅಭಯಾರಣ್ಯದ ಹಿನೌಟಾ ಶ್ರೇಣಿಯಲ್ಲಿರುವ ಆನೆ ಶಿಬಿರದಲ್ಲಿ ಅದು ಕೊನೆಯುಸಿರೆಳೆದಿದೆ. ಅರಣ್ಯ ಇಲಾಖೆಯ ಅಧಿಕಾರಿಗಳ ಪ್ರಕಾರ, ವತ್ಸಲಾ 100 ವರ್ಷಗಳಿಗಿಂತ ಹೆಚ್ಚು ವಯಸ್ಸಾಗಿದ್ದು, ದೀರ್ಘಕಾಲದವರೆಗೆ ಪನ್ನಾ ಕಾಡಿನಲ್ಲಿಯೇ ವಾಸವಿತ್ತು.

ಇತ್ತೀಚಿನ ದಿನಗಳಲ್ಲಿ, ವತ್ಸಲಾಳ ಮುಂಭಾಗದ ಕಾಲ್ಬೆರಳ ಉಗುರುಗಳು ಗಾಯಗೊಂಡಿದ್ದವು. ಹಿನೌಟಾ ಪ್ರದೇಶದ ಖೈರೈಯಾನ್ ನಾಲಾ ಬಳಿ ಮಲಗಿತ್ತು. ಎಷ್ಟೇ ಪ್ರಯತ್ನ ಮಾಡಿದರೂ ಎದ್ದೇಳಲು ಸಾಧ್ಯವಾಗಿಲ್ಲ. ಮಧ್ಯಾಹ್ನ 1.30 ರ ಸುಮಾರಿಗೆ ಮೃತಪಟ್ಟಿದೆ.

ಕೇರಳದಿಂದ ಮಧ್ಯಪ್ರದೇಶಕ್ಕೆ ತರಲಾಗಿತ್ತು 1971ರಲ್ಲಿ ಕೇರಳದ ನೀಲಂಬೂರು ಕಾಡಿನಿಂದ ವತ್ಸಲಾಳನ್ನು ಮಧ್ಯಪ್ರದೇಶಕ್ಕೆ ಕರೆತರಲಾಗಿತ್ತು. ಮೊದಲು ಅವಳನ್ನು ನರ್ಮದಾಪುರಂನಲ್ಲಿ ಇರಿಸಲಾಯಿತು ಮತ್ತು ನಂತರ ಪನ್ನಾ ಹುಲಿ ಅಭಯಾರಣ್ಯಕ್ಕೆ ಸ್ಥಳಾಂತರಿಸಲಾಯಿತು. ಖೈರೈಯಾನ್ ನಾಲಾದಲ್ಲಿ ಪ್ರತಿದಿನ ಅವಳಿಗೆ ಸ್ನಾನ ಮಾಡಿಸಿ ಗಂಜಿ ಮುಂತಾದ ಮೃದುವಾದ ಆಹಾರವನ್ನು ನೀಡಲಾಗುತ್ತಿತ್ತು. ವಯಸ್ಸಾಗಿದ್ದ ಕಾರಣ ತುಂಬಾ ದೂರ ನಡೆಯಲು ಸಾಧ್ಯವಾಗುತ್ತಿರಲಿಲ್ಲ.

ವತ್ಸಲಾವನ್ನು ಏಷ್ಯಾದ ಅತ್ಯಂತ ಹಿರಿಯ ಆನೆ ಎಂದು ಪರಿಗಣಿಸಲಾಗಿತ್ತು. ಆಕೆಯ ಅಂತ್ಯಕ್ರಿಯೆಯನ್ನು ಪನ್ನಾ ಹುಲಿ ಅಭಯಾರಣ್ಯದ ಅಧಿಕಾರಿಗಳು ಮತ್ತು ಸಿಬ್ಬಂದಿ ನೆರವೇರಿಸಿದರು. ವರ್ಷಗಳ ಕಾಲ, ವತ್ಸಲಾ ಪ್ರವಾಸಿ ಆಕರ್ಷಣೆಯಾಗಿತ್ತು ಮತ್ತು ಅತ್ಯಂತ ಹಿರಿಯಳಾಗಿದ್ದರಿಂದ, ಅವಳು ಅಭಯಾರಣ್ಯದಲ್ಲಿರುವ ಸಂಪೂರ್ಣ ಆನೆಗಳ ಗುಂಪನ್ನು ಮುನ್ನಡೆಸುತ್ತಿದ್ದಳು ಎಂದು ಹೇಳಿಕೆ ತಿಳಿಸಿದೆ.

ಆನೆಗೆ ಹೆಚ್ಚು ವಯಸ್ಸಾಗಿದ್ದರಿಂದ ದೃಷ್ಟಿ ಕಳೆದುಕೊಂಡಿತ್ತು. ಪನ್ನಾ ಜಿಲ್ಲೆಯ ಹುಲಿ ಅಭಯಾರಣ್ಯದಲ್ಲಿ ಪಶುವೈದ್ಯರು ಮತ್ತು ವನ್ಯಜೀವಿ ತಜ್ಞರು ವತ್ಸಲಾಳ ಆರೋಗ್ಯವನ್ನು ನಿಯಮಿತವಾಗಿ ಪರಿಶೀಲಿಸುತ್ತಿದ್ದರು. ಸರಿಯಾದ ಆರೈಕೆಯಿಂದಾಗಿ, ಅಭಯಾರಣ್ಯದ ವಿರಳ ಮತ್ತು ಒಣ ಅರಣ್ಯ ಪ್ರದೇಶದಲ್ಲಿ ವತ್ಸಲಾ ದೀರ್ಘಕಾಲ ಬದುಕಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ