AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Farmers Protest: ‘ಆಂದೋಲನ ನಿಲ್ಲಿಸಿ ಬನ್ನಿ, ಮಾತುಕತೆಗೆ ನಾವು ಸಿದ್ಧರಿದ್ದೇವೆ’-ಪ್ರತಿಭಟನಾ ನಿರತ ರೈತರಿಗೆ ಕರೆ ನೀಡಿದ ಕೃಷಿ ಸಚಿವ

ಪ್ರತಿಭಟನೆ ಶುರುವಾಗಿ ಏಳು ತಿಂಗಳು ಕಳೆದ ಈ ದಿನವನ್ನು ಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ದಿನವನ್ನಾಗಿ ರೈತರು ಆಚರಿಸಿದ್ದಾರೆ. ದೆಹಲಿಯ ಸಿಂಘು, ಟಿಕ್ರಿ, ಘಾಜಿಪುರಗಳಲ್ಲಿ ಬೀಡುಬಿಟ್ಟಿರುವ ವಿವಿಧ ರೈತ ಸಂಘಟನೆಗಳ ಸದಸ್ಯರು, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಹೊರತು ನಾವು ಹಿಂತಿರುಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Farmers Protest: ‘ಆಂದೋಲನ ನಿಲ್ಲಿಸಿ ಬನ್ನಿ, ಮಾತುಕತೆಗೆ ನಾವು ಸಿದ್ಧರಿದ್ದೇವೆ'-ಪ್ರತಿಭಟನಾ ನಿರತ ರೈತರಿಗೆ ಕರೆ ನೀಡಿದ ಕೃಷಿ ಸಚಿವ
ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್
TV9 Web
| Updated By: Lakshmi Hegde|

Updated on:Jun 26, 2021 | 4:25 PM

Share

ದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆಗಳ ವಿರುದ್ಧ ರೈತರು ಪ್ರತಿಭಟನೆ ಪ್ರಾರಂಭಿಸಿ ಇಂದಿಗೆ ಏಳು ತಿಂಗಳ ಪೂರ್ಣಗೊಂಡಿದ್ದು, ಇನ್ನಾದರೂ ಅವರ ಆಂದೋಲನವನ್ನು ಹಿಂಪಡೆಯಬೇಕು. ಕೃಷಿಕಾಯ್ದೆಗಳಲ್ಲಿರುವ ಯಾವುದೇ ನಿಬಂಧನೆಗಳ ಬಗ್ಗೆ ಚರ್ಚಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್​ ತೋಮರ್ ಹೇಳಿದ್ದಾರೆ. ಇಂದು ಪ್ರತಿಭಟನೆ ಶುರು ಮಾಡಿ ಏಳು ತಿಂಗಳು ಕಳೆದ ಹಿನ್ನೆಲೆಯಲ್ಲಿ ಎಲ್ಲ ರಾಜ್ಯಗಳ ರಾಜಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಸಂಯುಕ್ತ ಕಿಸಾನ್​ ಮೋರ್ಚಾ ಹೇಳಿಕೆ ನೀಡಿತ್ತು. ಹಾಗಾಗಿ ಇಂದು ದೆಹಲಿ ಗಡಿಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿದ ಕೇಂದ್ರ ಕೃಷಿ ಸಚಿವ ಸಚಿವ ನರೇಂದ್ರ ಸಿಂಗ್​ ತೋಮರ್, ಆಂದೋಲನವನ್ನು ಹಿಂಪಡೆಯಲು ರೈತ ಸಂಘಟನೆಗಳ ಮುಖಂಡರು ಮುಂದಾಗಬೇಕು. ನೂತನ ಕೃಷಿ ಕಾಯ್ದೆಗಳ ಯಾವುದೇ ನಿಬಂಧನೆಗಳ ಬಗ್ಗೆ ಚರ್ಚಿಸಿ, ಸಮಸ್ಯೆಗಳನ್ನು ಬಗೆಹರಿಸಲು ಕೇಂದ್ರ ಸರ್ಕಾರ ಸಿದ್ಧವಾಗಿದೆ ಎಂದು ಹೇಳಿದ್ದಾರೆ.

ಪ್ರತಿಭಟನೆ ಶುರುವಾಗಿ ಏಳು ತಿಂಗಳು ಕಳೆದ ಈ ದಿನವನ್ನು ಕೃಷಿ ರಕ್ಷಿಸಿ, ಪ್ರಜಾಪ್ರಭುತ್ವ ಉಳಿಸಿ ಎಂಬ ದಿನವನ್ನಾಗಿ ರೈತರು ಆಚರಿಸಿದ್ದಾರೆ. ದೆಹಲಿಯ ಸಿಂಘು, ಟಿಕ್ರಿ, ಘಾಜಿಪುರಗಳಲ್ಲಿ ಬೀಡುಬಿಟ್ಟಿರುವ ವಿವಿಧ ರೈತ ಸಂಘಟನೆಗಳ ಸದಸ್ಯರು, ಕೇಂದ್ರ ಸರ್ಕಾರ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಹೊರತು ನಾವು ಹಿಂತಿರುಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಹಾಗೇ, ಇಂದು ವಿವಿಧ ರಾಜ್ಯಗಳಲ್ಲಿ ಆಯಾ ಪ್ರದೇಶದ ರೈತ ಸಂಘಟನೆಗಳು ರಾಜಭವನದ ಎದುರು ಪ್ರತಿಭಟನೆ ನಡೆಸಿದ್ದು, ನಂತರ ರಾಷ್ಟ್ರಪತಿಗಳಿಗೆ ಜ್ಞಾಪಕ ಪತ್ರ ಸಲ್ಲಿಸುತ್ತೇವೆ ಎಂದು ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.

ಚಂಡೀಗಡ್​-ಮೊಹಾಲಿ ಗಡಿಯಲ್ಲಿ ಬ್ಯಾರಿಕೇಡ್ ಮುರಿದ ರೈತರು ಇಂದು ಚಂಡೀಗಡ್​-ಮೊಹಾಲಿ ಗಡಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿತ್ತು. ಪಂಜಾಬ್​ ರಾಜ್ಯಪಾಲರ ನಿವಾಸ ರಾಜಭವನ ತಲುಪಲು ಪ್ರಯತ್ನಿಸಿದ ರೈತರು ಪೊಲೀಸರ ಬ್ಯಾರಿಕೇಡ್​​ಗಳನ್ನೂ ಮುರಿದರು. ಅವರನ್ನು ನಿಯಂತ್ರಿಸಲು ಪೊಲೀಸರು ನೀರು ಹಾರಿಸಿದ್ದಾರೆ. ಅದರಲ್ಲೊಬ್ಬ ರೈತನಂತೂ ಜಲ ಫಿರಂಗಿ ವಾಹನವನ್ನೇ ಹತ್ತಿ ಕುಳಿತಿದ್ದ. ಪಂಜಾಬ್​ನಲ್ಲಿ ಇವತ್ತಿನ ಪ್ರತಿಭಟನೆಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರೂ ಪಾಲ್ಗೊಂಡಿದ್ದರು. ರೈತರು ರಾಜಭವನಕ್ಕೆ ಕಾಲ್ನಡಿಗೆ ಹೊರಡುವುದಕ್ಕೂ ಮೊದಲು ಮೊಹಾಲಿಯ ಅಂಬ್ ಸಾಹಿಬ್ ಗುರುದ್ವಾರದ ಬಳಿ ಸೇರಿದ್ದರು.

ಇದನ್ನೂ ಓದಿ: 2 ತಿಂಗಳ ಬಳಿಕ ಹೊರಬಿತ್ತು ಸೀಕ್ರೆಟ್​ ಮದುವೆ ವಿಷಯ; ಏಪ್ರಿಲ್​ನಲ್ಲೇ ಹಸೆಮಣೆ ಏರಿದ್ದ ಸೆಲೆಬ್ರಿಟಿ ಜೋಡಿ

Published On - 4:07 pm, Sat, 26 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ