AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಹೊಂದಿದ ಭಾರತ ನಮ್ಮ ಗುರಿ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ; ರಾಜ್ಯಸಭೆಯಲ್ಲಿ ಪ್ರಲ್ಹಾದ್ ಜೋಶಿ ಘೋಷಣೆ

ಕಳೆದ 10 ವರ್ಷಗಳಲ್ಲಿ ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವು ಶೇ. 165ರಷ್ಟು ಬೆಳವಣಿಗೆಯನ್ನು ದಾಖಲಿಸಿದೆ ಎಂದು ಕೇಂದ್ರ ಇಂಧನ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ನೂತನ ಮತ್ತು ನವೀಕರಿಸಬಹುದಾದ ಇಂಧನ ಇಲಾಖೆಯ ಕಾರ್ಯವೈಖರಿ ಕುರಿತು ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ಪ್ರತಿಪಕ್ಷಗಳ ಸಂಸದರು ಕೇಳಿದ ಪ್ರಶ್ನೆಗಳಿಗೆ ಇಂಧನ ಸಚಿವ ಪ್ರಲ್ಹಾದ್ ಜೋಶಿ ಉತ್ತರಿಸಿದರು.

ಅಭಿವೃದ್ಧಿ ಹೊಂದಿದ ಭಾರತ ನಮ್ಮ ಗುರಿ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ; ರಾಜ್ಯಸಭೆಯಲ್ಲಿ ಪ್ರಲ್ಹಾದ್ ಜೋಶಿ ಘೋಷಣೆ
ಪ್ರಲ್ಹಾದ್ ಜೋಶಿ
ಸುಷ್ಮಾ ಚಕ್ರೆ
|

Updated on: Aug 06, 2024 | 8:35 PM

Share

ನವದೆಹಲಿ: ಕೇಂದ್ರ ನೂತನ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರು ಇಂದು ರಾಜ್ಯಸಭೆಯಲ್ಲಿ ಇಂಧನ ಸಚಿವಾಲಯದ ಕಾರ್ಯವನ್ನು ಎತ್ತಿ ತೋರಿಸಿದ್ದಾರೆ. ಅಭಿವೃದ್ಧಿ ಹೊಂದಿದ ಭಾರತ ನಮ್ಮ ಧ್ಯೇಯ, ಇಂಧನ ಅಭಿವೃದ್ಧಿ ನಮ್ಮ ಧ್ಯೇಯ ಎಂದು ಘೋಷಿಸಿದ್ದಾರೆ. ನವೀಕರಿಸಬಹುದಾದ ಇಂಧನವು ಕೇವಲ ಒಂದು ಆಯ್ಕೆಯಲ್ಲ, ಅದು ರಾಷ್ಟ್ರದ ಸ್ಥಿರತೆಗೆ ಅವಶ್ಯಕವಾಗಿದೆ. ಇದು ದೇಶದ ಪ್ರಗತಿ ಮತ್ತು ಅಭಿವೃದ್ಧಿಗೆ ಕಾರಣವಾಗುತ್ತದೆ. ವಿಶ್ವದ ದೊಡ್ಡ ಆರ್ಥಿಕತೆ ಹೊಂದಿರುವ ಎಲ್ಲಾ ದೇಶಗಳಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರವು ವಿಶೇಷ ಪ್ರಾಮುಖ್ಯತೆಯನ್ನು ಹೊಂದಿದೆ. ಹೀಗಾಗಿ, ಇದಕ್ಕೆ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಇಂದು ಭಾರತವು ಆರ್‌ಇ ಅಳವಡಿಕೆಯಲ್ಲಿ ಜಾಗತಿಕವಾಗಿ ನಾಲ್ಕನೇ ಸ್ಥಾನವನ್ನು ಸಾಧಿಸಿದೆ ಎಂಬುದು ಹೆಮ್ಮೆಯ ಸಂಗತಿಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ನಾವು ಪವನ ಶಕ್ತಿ ಸಾಮರ್ಥ್ಯದಲ್ಲಿ ನಾಲ್ಕನೇ ಮತ್ತು ಸೋಲಾರ್ ಪಿವಿ ಸಾಮರ್ಥ್ಯದಲ್ಲಿ ಐದನೇ ಸ್ಥಾನದಲ್ಲಿದ್ದೇವೆ. ಕಳೆದ 10 ವರ್ಷಗಳಲ್ಲಿ ಭಾರತವು ಆರ್‌ಇ ಯೋಜನೆಗಳಲ್ಲಿನ ಹೂಡಿಕೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಕಂಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2029ರಲ್ಲೂ ಎನ್​ಡಿಎ ಮತ್ತೆ ಅಧಿಕಾರಿಕ್ಕೆ ಬರುತ್ತೆ, ಮೋದಿಯೇ ಪ್ರಧಾನಿ: ಅಮಿತ್​ ಶಾ

COP26ನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಘೋಷಣೆಯಂತೆ ಹೊಸ ಮತ್ತು ನವೀಕರಿಸಬಹುದಾದ ಇಂಧನವು 500 GW ಸ್ಥಾಪಿತ ಶಕ್ತಿಯನ್ನು ಸಾಧಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂಧನ ಭದ್ರತೆಯು ಈ ಸರ್ಕಾರದ 9 ಪ್ರಮುಖ ಆದ್ಯತೆಯ ಕ್ಷೇತ್ರಗಳಲ್ಲಿ ಒಂದಾಗಿದೆ. ಇದಕ್ಕಾಗಿ, ನವೀಕರಿಸಬಹುದಾದ ಇಂಧನ ಸಚಿವಾಲಯದ ಬಜೆಟ್ ಹಂಚಿಕೆಯನ್ನು ಬಹುತೇಕ ದ್ವಿಗುಣಗೊಳಿಸಲಾಗಿದೆ. ಕಳೆದ ವರ್ಷ 10,000 ಕೋಟಿ ರೂ.ಗೆ ಹೋಲಿಸಿದರೆ ಈ ವರ್ಷ 20,000 ಕೋಟಿ ರೂ. ಆಗಿದೆ ಎಂದಿದ್ದಾರೆ.

ನವೀಕರಿಸಬಹುದಾದ ಇಂಧನವು ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತದೆ. ಬಜೆಟ್ ಅನ್ನು ಹೆಚ್ಚಿಸುವುದರಿಂದ ನವೀಕರಿಸಬಹುದಾದ ಇಂಧನದಲ್ಲಿ ಉದ್ಯೋಗಾವಕಾಶಗಳು ಸೃಷ್ಟಿಯಾಗುತ್ತವೆ ಎಂದು ಕೇಂದ್ರದ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರು ಹೇಳಿದ್ದಾರೆ. ಇದು ಇಂಧನ ಸುರಕ್ಷತೆಯ ಪ್ರಜ್ಞೆಯನ್ನು ಸೃಷ್ಟಿಸುತ್ತದೆ ಮತ್ತು ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುತ್ತದೆ. ಇದು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುತ್ತದೆ, ಇದು ಪರಿಸರದ ಹಿತಾಸಕ್ತಿಯೂ ಆಗಿದೆ. ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಭಾರತವನ್ನು ಆರ್‌ಇಯಲ್ಲಿ ಜಾಗತಿಕ ನಾಯಕನನ್ನಾಗಿ ಮಾಡಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ: Bangladesh Crisis: ಬಾಂಗ್ಲಾದೇಶದ ಹಿಂಸಾಚಾರದ ಬಗ್ಗೆ ಪ್ರಧಾನಿ ನಿವಾಸದಲ್ಲಿ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ

ಕಳೆದ ದಶಕದ ಅವಧಿಯಲ್ಲಿ ಅಂದರೆ 2014ರಿಂದ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಆರ್‌ಇ ಅಳವಡಿಸಲಾಗಿದೆ ಎಂದು ಪ್ರಲ್ಹಾದ್ ಜೋಶಿ ಹೇಳಿದರು. ಇದರ ಸಾಮರ್ಥ್ಯವು 165% ಹೆಚ್ಚಾಗಿದೆ. ಇದು 2014ರಲ್ಲಿ 76.38 GWನಿಂದ 203.1 GWಗೆ ಹೆಚ್ಚಾಗಿದೆ. ದೇಶದಲ್ಲಿ ಮೊದಲ ಬಾರಿಗೆ, ನಾವು ಪಳೆಯುಳಿಕೆಯೇತರ ಇಂಧನದಿಂದ 200 GW ಸಾಮರ್ಥ್ಯವನ್ನು ದಾಟಿದ್ದೇವೆ. ಅದೇ ಸಮಯದಲ್ಲಿ ಕಳೆದ 10 ವರ್ಷಗಳಲ್ಲಿ ಸ್ಥಾಪಿಸಲಾದ ಸೌರ ವಿದ್ಯುತ್ ಸಾಮರ್ಥ್ಯವು 2.82 GWರಷ್ಟು ಹೆಚ್ಚಾಗಿದೆ.

ಮೇಲ್ಛಾವಣಿಯ ಸೌರಶಕ್ತಿಯನ್ನು ದೊಡ್ಡ ಪ್ರಮಾಣದಲ್ಲಿ ಅಳವಡಿಸಿಕೊಳ್ಳಲು ಅನುಕೂಲವಾಗುವಂತೆ ಕೇಂದ್ರ ಸಚಿವ ಸಂಪುಟವು 29ರಂದು ‘ಪಿಎಂ ಸೂರ್ಯ ಘರ್: ಉಚಿತ ವಿದ್ಯುತ್ ಯೋಜನೆ’ಗೆ ಒಟ್ಟು 75,021 ಕೋಟಿ ರೂ. ಈ ಮೂಲಕ ಒಂದು ಕೋಟಿ ಕುಟುಂಬಗಳಿಗೆ ಸೂರಿಗೆ ಸೋಲಾರ್ ವಿದ್ಯುತ್ ಅಳವಡಿಸಲು ನಿರ್ಧರಿಸಲಾಗಿದೆ. ಈ ಯೋಜನೆಯ ಮೂಲಕ, ಕುಟುಂಬಗಳು ವಿದ್ಯುತ್ ಬಿಲ್‌ಗಳನ್ನು ಉಳಿಸಲು ಮತ್ತು ಹೆಚ್ಚುವರಿ ಆದಾಯವನ್ನು ಗಳಿಸಲು ಸಾಧ್ಯವಾಗುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ