ಅಕ್ರಮ ಹಣ ವರ್ಗಾವಣೆ ಆರೋಪ: ಅಶೋಕ ವಿಶ್ವವಿದ್ಯಾನಿಲಯ ಸಂಸ್ಥಾಪಕರು ಸೇರಿ ಮೂವರನ್ನು ಬಂಧಿಸಿದ ಇಡಿ

ಪ್ರಣವ್ ಗುಪ್ತಾ ಮತ್ತು ವಿನೀತ್ ಗುಪ್ತಾ ಪ್ರಚಾರ ಮಾಡಿದ ಪ್ಯಾರಾಬೋಲಿಕ್ ಡ್ರಗ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇಡಿ 17 ಸ್ಥಳಗಳನ್ನು ಶೋಧಿಸಿದ ನಂತರ ಈ ಬಂಧನಗಳು ನಡೆದಿವೆ.  ₹ 1,600 ಕೋಟಿ ಮೊತ್ತದ ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪ್ಯಾರಾಬೋಲಿಕ್ ಡ್ರಗ್ಸ್ ವಿರುದ್ಧ ಆರೋಪ ಹೊರಿಸಿತ್ತು.ಸಿಬಿಐನ ಪ್ರಥಮ ಮಾಹಿತಿ ವರದಿ ಆಧರಿಸಿ ಇಡಿ ತನಿಖೆ ಆರಂಭಿಸಿದೆ.

ಅಕ್ರಮ ಹಣ ವರ್ಗಾವಣೆ ಆರೋಪ: ಅಶೋಕ ವಿಶ್ವವಿದ್ಯಾನಿಲಯ ಸಂಸ್ಥಾಪಕರು ಸೇರಿ ಮೂವರನ್ನು ಬಂಧಿಸಿದ ಇಡಿ
ಇಡಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Oct 28, 2023 | 8:58 PM

ದೆಹಲಿ ಅಕ್ಟೋಬರ್ 28: ಅಕ್ರಮ ಹಣ ವರ್ಗಾವಣೆ (Money laundering) ಆರೋಪದ ಮೇಲೆ ಜಾರಿ ನಿರ್ದೇಶನಾಲಯ (ED) ಬಂಧಿಸಿರುವ ಮೂವರಲ್ಲಿ ಖಾಸಗಿ ಸಂಸ್ಥೆ ಅಶೋಕ ವಿಶ್ವವಿದ್ಯಾಲಯದ (Ashoka University) ಇಬ್ಬರು ಸಹ ಸಂಸ್ಥಾಪಕರು ಸೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.ಇಬ್ಬರು ಅಶೋಕ ವಿಶ್ವವಿದ್ಯಾನಿಲಯದ ಸಹ-ಸಂಸ್ಥಾಪಕರಾದ ಪ್ರಣವ್ ಗುಪ್ತಾ ಮತ್ತು ವಿನೀತ್ ಗುಪ್ತಾ, ಚಾರ್ಟರ್ಡ್ ಅಕೌಂಟೆಂಟ್ ಎಸ್‌ಕೆ ಬನ್ಸಾಲ್ ಅವರನ್ನು ಮನಿ ಲಾಂಡರಿಂಗ್ ತಡೆ ಕಾಯ್ದೆ ಅಥವಾ ಪಿಎಂಎಲ್‌ಎ ಅಡಿಯಲ್ಲಿ ಕೇಂದ್ರೀಯ ಸಂಸ್ಥೆ ಬಂಧಿಸಿದೆ.

ಪ್ರಣವ್ ಗುಪ್ತಾ ಮತ್ತು ವಿನೀತ್ ಗುಪ್ತಾ ಪ್ರಚಾರ ಮಾಡಿದ ಪ್ಯಾರಾಬೋಲಿಕ್ ಡ್ರಗ್ಸ್ ಲಿಮಿಟೆಡ್‌ಗೆ ಸಂಬಂಧಿಸಿದ ಬ್ಯಾಂಕ್ ವಂಚನೆ ಪ್ರಕರಣದಲ್ಲಿ ಇಡಿ 17 ಸ್ಥಳಗಳನ್ನು ಶೋಧಿಸಿದ ನಂತರ ಈ ಬಂಧನಗಳು ನಡೆದಿವೆ.  ₹ 1,600 ಕೋಟಿ ಮೊತ್ತದ ಬ್ಯಾಂಕ್ ವಂಚನೆಗೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪ್ಯಾರಾಬೋಲಿಕ್ ಡ್ರಗ್ಸ್ ವಿರುದ್ಧ ಆರೋಪ ಹೊರಿಸಿತ್ತು.ಸಿಬಿಐನ ಪ್ರಥಮ ಮಾಹಿತಿ ವರದಿ ಆಧರಿಸಿ ಇಡಿ ತನಿಖೆ ಆರಂಭಿಸಿದೆ.

ಹರ್ಯಾಣ ಮೂಲದ ಅಶೋಕ ವಿಶ್ವವಿದ್ಯಾಲಯದ ಸಹ-ಸ್ಥಾಪಕರಾದ ಗುಪ್ತ, 2021 ರಲ್ಲಿ ತಮ್ಮ ಮತ್ತು ಅವರ ಕಂಪನಿಯ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದ ನಂತರ 2022 ರಲ್ಲಿ ಸಂಸ್ಥೆಯಲ್ಲಿನ ತಮ್ಮ ಹುದ್ದೆಗಳಿಂದ ಕೆಳಗಿಳಿದಿದ್ದರು.

ಇದನ್ನೂ ಓದಿ: ರಾಷ್ಟ್ರೀಯ ಭದ್ರತೆಯಲ್ಲಿ ರಾಜಿ ಮಾಡಿಕೊಂಡಿದಕ್ಕೆ ಮಹುವಾ ಮೊಯಿತ್ರಾ ವಿರುದ್ಧ ಅನುರಾಗ್ ಠಾಕೂರ್ ವಾಗ್ದಾಳಿ

ಮೂವರನ್ನು ಚಂಡೀಗಢದ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆಯಿದೆ, ಅಲ್ಲಿ ಇಡಿ ಅವರ ಕಸ್ಟಡಿಗೆ ಕೋರಲಿದೆ.

ಪ್ರವರ್ತಕರು ಮತ್ತು ಫಾರ್ಮಾ ಕಂಪನಿಯು ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟಕ್ಕೆ ₹ 1,626 ವಂಚಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ