AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಇನ್ನು ಅರವಿಂದ ಕೇಜ್ರಿವಾಲ್​ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿತ್ತು.

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ
ದೆಹಲಿ ಸಿಎಂ ಕೇಜ್ರಿವಾಲ್
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Mar 21, 2024 | 10:00 PM

Share

ನವದೆಹಲಿ, ಮಾರ್ಚ್​ 21: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಇನ್ನು ಅರವಿಂದ ಕೇಜ್ರಿವಾಲ್​ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿತ್ತು. ED ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ EDಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್‌ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.

ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇದರಿಂದಾಗಿ ಅವರಿಗೆ ಅನಪೇಕ್ಷಿತ ಲಾಭಗಳು ಉಂಟಾಗಿವೆ. ಅವರು ಎಎಪಿಗೆ ಕಿಕ್‌ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಡಿ ತಂಡ

ಹಲವು ಸಲ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳು ಭೇಟಿ ನೀಡಿ ದೆಹಲಿಯ ನಿವಾಸದಲ್ಲಿ ಶೋಧ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಜ್ರಿವಾಲ್‌ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಎಎನ್​ಐ ಟ್ವೀಟ್​ 

ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ಮಾಡಿದ್ದು, ಕೇಜ್ರಿವಾಲ್ ಸೇರಿದಂತೆ ಸಂಬಂಧಿಕರ​ ಮೊಬೈಲ್ ವಶಕ್ಕೆ ಪಡೆದುಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಹೇಳಿಕೆಯನ್ನು ಇಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಇಡಿ ಸರ್ಚ್ ವಾರಂಟ್ ನಡುವೆ ಸುಪ್ರೀಂಕೋರ್ಟ್‌ನಲ್ಲಿ ತುರ್ತು ವಿಚಾರಣೆ ಕೋರಿದ ಅರವಿಂದ್ ಕೇಜ್ರಿವಾಲ್

ಇತ್ತ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ನಡೆಯುತ್ತಿರುವ ವೇಳೆ ನಿವಾಸದ ಬಳಿ ಬೆಂಬಲಿಗರು ಜಮಾಯಿಸಿದ್ದರು. ಇಡಿ ಅಧಿಕಾರಿಗಳ ವಿರುದ್ಧ ಬೆಂಬಲಿಗರಿಂದ ಪ್ರತಿಭಟನೆ ಮಾಡಿದ್ದರು. ಮುನ್ನೆಚ್ಚರಿಕೆಯಿಂದ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಅರವಿಂದ ಕೇಜ್ರಿವಾಲ್​ ನಿವಾಸದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Thu, 21 March 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ