AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ

ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಇನ್ನು ಅರವಿಂದ ಕೇಜ್ರಿವಾಲ್​ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿತ್ತು.

ಇಡಿ ಅಧಿಕಾರಿಗಳಿಂದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಬಂಧನ
ದೆಹಲಿ ಸಿಎಂ ಕೇಜ್ರಿವಾಲ್
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Mar 21, 2024 | 10:00 PM

ನವದೆಹಲಿ, ಮಾರ್ಚ್​ 21: ಅಬಕಾರಿ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರನ್ನು ಜಾರಿ ನಿರ್ದೇಶನಾಲಯ (ED) ಗುರುವಾರ ಬಂಧಿಸಿದೆ. ಕೇಜ್ರಿವಾಲ್‌ರನ್ನು ನಾಳೆ ಕೋರ್ಟ್‌ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ. ಇನ್ನು ಅರವಿಂದ ಕೇಜ್ರಿವಾಲ್​ರನ್ನು ಬಂಧನದಿಂದ ರಕ್ಷಣೆ ನೀಡಲು ದೆಹಲಿ ಹೈಕೋರ್ಟ್‌ ನಿರಾಕರಿಸಿತ್ತು. ED ಸಮನ್ಸ್ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಬಲವಂತದ ಕ್ರಮ ತೆಗೆದುಕೊಳ್ಳದಂತೆ EDಗೆ ನಿರ್ದೇಶನ ನೀಡುವಂತೆ ಅರ್ಜಿ ಸಲ್ಲಿಸಿದ್ದ. ಆದರೆ ಅರ್ಜಿ ವಜಾ ಹಿನ್ನೆಲೆ ಕೇಜ್ರಿವಾಲ್‌ ನಿವಾಸಕ್ಕೆ ಇಡಿ ಅಧಿಕಾರಿಗಳು ಭೇಟಿ ನೀಡಿದ್ದರು.

ಪ್ರಕರಣದಲ್ಲಿ ಎಎಪಿ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸಂಜಯ್ ಸಿಂಗ್ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಡಿ ಸಲ್ಲಿಸಿರುವ ಚಾರ್ಜ್ ಶೀಟ್‌ಗಳಲ್ಲಿ ಕೇಜ್ರಿವಾಲ್ ಹೆಸರನ್ನು ಹಲವು ಬಾರಿ ಉಲ್ಲೇಖಿಸಲಾಗಿದೆ. ಅಬಕಾರಿ ನೀತಿಯನ್ನು ರೂಪಿಸಲು ಆರೋಪಿಗಳು ಕೇಜ್ರಿವಾಲ್ ಅವರೊಂದಿಗೆ ಸಂಪರ್ಕದಲ್ಲಿದ್ದರು. ಇದರಿಂದಾಗಿ ಅವರಿಗೆ ಅನಪೇಕ್ಷಿತ ಲಾಭಗಳು ಉಂಟಾಗಿವೆ. ಅವರು ಎಎಪಿಗೆ ಕಿಕ್‌ಬ್ಯಾಕ್ ಪಾವತಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: Arvind Kejriwal: ಅರವಿಂದ್ ಕೇಜ್ರಿವಾಲ್ ನಿವಾಸದಲ್ಲಿ ಇಡಿ ತಂಡ

ಹಲವು ಸಲ ನೋಟಿಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗಿರಲಿಲ್ಲ. ಹೀಗಾಗಿ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿ ವಜಾ ಬೆನ್ನಲ್ಲೇ ಇಡಿ ಅಧಿಕಾರಿಗಳು ಭೇಟಿ ನೀಡಿ ದೆಹಲಿಯ ನಿವಾಸದಲ್ಲಿ ಶೋಧ ಮಾಡಿದ್ದಾರೆ. ಮುನ್ನೆಚ್ಚರಿಕೆಯಿಂದ ಕೇಜ್ರಿವಾಲ್‌ ಮನೆಯ ಬಳಿ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿತ್ತು.

ಎಎನ್​ಐ ಟ್ವೀಟ್​ 

ಇಡಿ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ಮಾಡಿದ್ದು, ಕೇಜ್ರಿವಾಲ್ ಸೇರಿದಂತೆ ಸಂಬಂಧಿಕರ​ ಮೊಬೈಲ್ ವಶಕ್ಕೆ ಪಡೆದುಕೊಂಡಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಜ್ರಿವಾಲ್ ಹೇಳಿಕೆಯನ್ನು ಇಡಿ ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಇಡಿ ಸರ್ಚ್ ವಾರಂಟ್ ನಡುವೆ ಸುಪ್ರೀಂಕೋರ್ಟ್‌ನಲ್ಲಿ ತುರ್ತು ವಿಚಾರಣೆ ಕೋರಿದ ಅರವಿಂದ್ ಕೇಜ್ರಿವಾಲ್

ಇತ್ತ ಅಧಿಕಾರಿಗಳಿಂದ ಕೇಜ್ರಿವಾಲ್ ವಿಚಾರಣೆ ನಡೆಯುತ್ತಿರುವ ವೇಳೆ ನಿವಾಸದ ಬಳಿ ಬೆಂಬಲಿಗರು ಜಮಾಯಿಸಿದ್ದರು. ಇಡಿ ಅಧಿಕಾರಿಗಳ ವಿರುದ್ಧ ಬೆಂಬಲಿಗರಿಂದ ಪ್ರತಿಭಟನೆ ಮಾಡಿದ್ದರು. ಮುನ್ನೆಚ್ಚರಿಕೆಯಿಂದ ಕ್ಷಿಪ್ರ ಕಾರ್ಯಾಚರಣೆ ಪಡೆ ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ಅರವಿಂದ ಕೇಜ್ರಿವಾಲ್​ ನಿವಾಸದ ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಲಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:35 pm, Thu, 21 March 24

ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
ಯುದ್ಧಸನ್ನದ್ಧ ಭಾರತೀಯ ಸೇನೆಯಿಂದ ಪ್ರತ್ಯುತ್ತರ, ಪ್ರತಿದಾಳಿ
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
‘ನಟಿ ಗ್ಲಾಮರಸ್ ಆಗಿದ್ರೆ ಮಾತ್ರ ನನ್ನ ಕಣ್ಣು ಬೀಳುತ್ತೆ’; ರವಿಚಂದ್ರನ್
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಅಪಘಾತದಲ್ಲಿ ಕಾರಿನ ಮುಂಭಾಗ, ಅಂಗಡಿ ಮುಂದೆ ನಿಂತಿದ್ದ ಸ್ಕೂಟರ್ ಜಖಂ
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಸುಹಾಸ್ ಶೆಟ್ಟಿ ಕೊಲೆ ಖಂಡಿಸಿ ಚಿಕ್ಕಮಗಳೂರು ಬಂದ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಫೈನ್ ಬಿದ್ದರೂ ನಿಲ್ಲದ ದಿಗ್ವೇಶ್ ನೋಟ್​ಬುಕ್ ಸೆಲೆಬ್ರೇಷನ್
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ
ಮಹಾರಾಷ್ಟ್ರ: ರಾಯಗಢದಲ್ಲಿ ಬಸ್ ಪಲ್ಟಿಯಾಗಿ 35 ಪ್ರಯಾಣಿಕರಿಗೆ ಗಾಯ