AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಗಣಿಗಾರಿಕೆ ಪ್ರಕರಣ: ರಾಂಚಿಯ ಉದ್ಯಮಿ ಪ್ರೇಮ್ ಪ್ರಕಾಶ್​​​ನ್ನು ಬಂಧಿಸಿದ ಇಡಿ

ರಾಂಚಿ ಮೂಲದ ಉದ್ಯಮಿ ಪ್ರೇಮ್ ಪ್ರಕಾಶ್ ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ ಎರಡು ಎಕೆ-47 ರೈಫಲ್‌ಗಳು ಮತ್ತು 60 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದೆ.

ಅಕ್ರಮ ಗಣಿಗಾರಿಕೆ ಪ್ರಕರಣ: ರಾಂಚಿಯ ಉದ್ಯಮಿ ಪ್ರೇಮ್ ಪ್ರಕಾಶ್​​​ನ್ನು ಬಂಧಿಸಿದ ಇಡಿ
ಇಡಿ ದಾಳಿ
TV9 Web
| Updated By: ರಶ್ಮಿ ಕಲ್ಲಕಟ್ಟ|

Updated on:Aug 25, 2022 | 9:53 AM

Share

ರಾಂಚಿ (ಜಾರ್ಖಂಡ್):  ಜಾರ್ಖಂಡ್‌ನಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಪ್ರೇಮ್ ಪ್ರಕಾಶ್​​​ನ್ನು  ಬಂಧಿಸಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಗುರುವಾರ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯ (PMLA) ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕಾಶ್ ಅವರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದ್ದು, ರಾಂಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ರಾಂಚಿ ಮೂಲದ ಉದ್ಯಮಿ ಪ್ರೇಮ್ ಪ್ರಕಾಶ್ (Prem Prakash) ನಿವಾಸದ ಮೇಲೆ ದಾಳಿ ನಡೆಸಿದ್ದ ಜಾರಿ ನಿರ್ದೇಶನಾಲಯ (Enforcement Directorate) , ಎರಡು ಎಕೆ-47 ರೈಫಲ್‌ಗಳು ಮತ್ತು 60 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದೆ. ಪ್ರೇಮ್ ಪ್ರಕಾಶ್ ಅವರ ಮನೆಯಿಂದಲೂ ಇಡಿ ದಾಖಲೆಗಳನ್ನು ವಶಪಡಿಸಿಕೊಂಡಿದೆ. ಇಬ್ಬರು ಭದ್ರತಾ ಸಿಬ್ಬಂದಿಗೆ ಶಸ್ತ್ರಾಸ್ತ್ರಗಳನ್ನು ನೀಡಲಾಗಿತ್ತು. ಅವರು ಪ್ರೇಮ್ ಅವರ ನಿವಾಸದಲ್ಲಿ ಅವುಗಳನ್ನು ಇಟ್ಟುಕೊಂಡು ತಮ್ಮ ಮನೆಗಳಿಗೆ ತೆರಳಿದರು ಎಂದು ರಾಂಚಿ ಪೊಲೀಸರು ಹೇಳಿದ್ದಾರೆ. ಈ ರೀತಿ ನಿರ್ಲಕ್ಷ್ಯ ತೋರಿದ್ದಕ್ಕಾಗಿ ಇಬ್ಬರನ್ನೂ ಅಮಾನತು ಮಾಡಲಾಗಿದೆ. ವಸುಂಧರಾ ಅಪಾರ್ಟ್‌ಮೆಂಟ್‌ನಲ್ಲಿರುವ ಪ್ರಕಾಶ್ ಅವರ ಫ್ಲಾಟ್, ಹರ್ಮು ಚೌಕ್ ಬಳಿಯ ಅವರ ನಿವಾಸ ‘ಶೈಲೋದಯ’ ಮತ್ತು ಹರ್ಮುನಲ್ಲಿರುವ ಅವರ ಕಚೇರಿ ಸೇರಿದಂತೆ ರಾಂಚಿಯ 11 ಸ್ಥಳಗಳಲ್ಲಿ ದಾಳಿ ನಡೆಸಲಾಗಿದೆ. ಬಿಹಾರ, ಚೆನ್ನೈ ಮತ್ತು ಎನ್‌ಸಿಆರ್‌ನಲ್ಲಿರುವ ಪ್ರಕಾಶ್ ಅವರ ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಾಗಿದೆ.

ಜಾರ್ಖಂಡ್ ಆಡಳಿತ, ಉದ್ಯಮಿಗಳು ಮತ್ತು ರಾಜಕಾರಣಿಗಳ ನಡುವೆ ಅಕ್ರಮ ಗಣಿಗಾರಿಕೆ, ಅಕ್ರಮ ಹಣ ವರ್ಗಾವಣೆ ಮತ್ತು ಶಂಕಿತ ಕ್ರಿಮಿನಲ್ ಸಂಬಂಧಕ್ಕೆ ಸಂಬಂಧಿಸಿದಂತೆ ಜಾರ್ಖಂಡ್, ಬಿಹಾರ, ತಮಿಳುನಾಡು ಮತ್ತು ದೆಹಲಿ ಎನ್‌ಸಿಆರ್ ಸೇರಿದಂತೆ 17 ಸ್ಥಳಗಳಲ್ಲಿ ಬುಧವಾರ ಇಡಿ ದಾಳಿ ನಡೆಸಿತ್ತು.

Published On - 9:35 am, Thu, 25 August 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?