AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ ಪ್ರಕರಣ; ರಿಯಲ್​ ಎಸ್ಟೇಟ್​ ಉದ್ಯಮಿ ಲಲಿತ್​ ಗೋಯಲ್​​ರನ್ನು ಬಂಧಿಸಿದ ಇ.ಡಿ.

Lalit Goyal: ಗೋಯಲ್​ ವಿರುದ್ಧ ಇ.ಡಿ.ತನಿಖೆ ಶುರು ಮಾಡಿ, ದೇಶ ಬಿಟ್ಟು ಹೋಗದಂತೆ ಲುಕೌಟ್​ ನೋಟಿಸ್ ಕೂಡ ಜಾರಿ ಮಾಡಿತ್ತು. ಆದರೂ ಕಳೆದ ಗುರುವಾರ ಹೊರಟಿದ್ದ ಲಲಿತ್ ಗೋಯಲ್​​ರನ್ನು ದೆಹಲಿ ಇಂದಿರಾ ಗಾಂಧಿ ಏರ್​ಪೋರ್ಟ್​​ನಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದರು.

ಅಕ್ರಮ ಹಣ ವರ್ಗಾವಣೆ ಪ್ರಕರಣ; ರಿಯಲ್​ ಎಸ್ಟೇಟ್​ ಉದ್ಯಮಿ ಲಲಿತ್​ ಗೋಯಲ್​​ರನ್ನು ಬಂಧಿಸಿದ ಇ.ಡಿ.
ಇ.ಡಿ.
TV9 Web
| Edited By: |

Updated on:Nov 17, 2021 | 10:01 AM

Share

ರಿಯಲ್​ ಎಸ್ಟೇಟ್​​ ಉದ್ಯಮಿ, ಐಆರ್​ಇಒ ಸಮೂಹದ ವ್ಯವಸ್ಥಾಪಕ ನಿರ್ದೇಶಕ ಲಲಿತ್​ ಗೋಯಲ್ (Lalit Goyal)​​ರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ನಿರಂತರವಾಗಿ ಅವರನ್ನು ವಿಚಾರಣೆಗೆ ಒಳಪಡಿಸಿದ್ದ ಇ.ಡಿ.ಹೆಚ್ಚಿನ ತನಿಖೆಗಾಗಿ ಈಗ ಬಂಧಿಸಿದೆ ಎಂದು ಹೇಳಲಾಗಿದೆ.  ಇದು ಸುಮಾರು 2600 ಕೋಟಿ ರೂಪಾಯಿ ವಂಚನೆ ಪ್ರಕರಣ ಎಂದು ಇ.ಡಿ.ಮೂಲಗಳಿಂತ ತಿಳಿದುಬಂದಿದೆ. ಲಲಿತ್​ ಗೋಯಲ್​​ರನ್ನು ಚಂಡಿಗಢ್​​ನಲ್ಲಿ ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯವೊಂದಕ್ಕೆ ಹಾಜರುಪಡಿಸಲಾಗುವುದು. ಬಳಿಕ ಇ.ಡಿ.ವಶಕ್ಕೆ ನೀಡುವಂತೆ ಕೇಳಲಾಗುವುದು ಎಂದು ಅಧಿಕಾರಿಯೊಬ್ಬರು ಹೇಳಿದ್ದಾಗಿ ರಾಷ್ಟ್ರೀಯ ಮಾದ್ಯಮಗಳು ವರದಿ ಮಾಡಿವೆ. 

ಗೋಯಲ್​ ವಿರುದ್ಧ ಇ.ಡಿ.ತನಿಖೆ ಶುರು ಮಾಡಿ, ದೇಶ ಬಿಟ್ಟು ಹೋಗದಂತೆ ಲುಕೌಟ್​ ನೋಟಿಸ್ ಕೂಡ ಜಾರಿ ಮಾಡಿತ್ತು. ಆದರೂ ಕಳೆದ ಗುರುವಾರ ಹೊರಟಿದ್ದ ಲಲಿತ್ ಗೋಯಲ್​​ರನ್ನು ದೆಹಲಿ ಇಂದಿರಾ ಗಾಂಧಿ ಏರ್​ಪೋರ್ಟ್​​ನಲ್ಲಿ ವಲಸೆ ಅಧಿಕಾರಿಗಳು ತಡೆದಿದ್ದರು. ಅಂದು ಇ.ಡಿ. ಈ ಬಗ್ಗೆ ಪ್ರಕಟಣೆ ಹೊರಡಿಸಿತ್ತು. ರಿಯಲ್​ ಎಸ್ಟೇಟ್​ ಕಂಪನಿ ಐಆರ್​ಇಒ ಪ್ರಮೋಟರ್​ ಲಲಿತ್​ ಗೋಯಲ್​​​ರನ್ನು ದೆಹಲಿ ಏರ್​ಪೋರ್ಟ್​​ನಲ್ಲಿ ವಲಸೆ ಅಧಿಕಾರಿಗಳು ತಡೆದು ನಮ್ಮ ವಶಕ್ಕೆ ನೀಡಿದ್ದಾರೆ. ಅವರನ್ನು ವಿಚಾರಣೆಗೆ ಒಳಪಡಿಸಲಾಗಿದ್ದು, ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗಿದೆ. ಅವರು ಹೂಡಿಕೆದಾರರ ಹಣವನ್ನು ದುರ್ಬಳಕೆ ಮಾಡಿದ್ದಾರೆ ಮತ್ತು ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂಬ ಆರೋಪವಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಇ.ಡಿ.ಹೇಳಿತ್ತು. ಇನ್ನು ಲಲಿತ್​ ಗೋಯಲ್​​ಗೆ ಸೇರಿದ ಹಲವು ಕಚೇರಿ, ಮನೆಗಳ ಮೇಲೆ ಕೂಡ ಇ.ಡಿ.ದಾಳಿ ನಡೆಸಿದೆ. ಅವರು ವಿಚಾರಣೆ ವೇಳೆ ಸರಿಯಾಗಿ ಸ್ಪಂದಿಸದ ಕಾರಣ ಬಂಧಿಸಲಾಗಿದೆ ಎಂದೂ ಹೇಳಲಾಗಿದೆ.

ಇದನ್ನೂ ಓದಿ: ಬೊಂಬೆ ಹೇಳುತೈತೆ ಹಾಡಿನ ಮುಖಾಂತರ ಪುನೀತ್​ಗೆ ನಮನ ಸಲ್ಲಿಸಿದ 50ಕ್ಕೂ ಹೆಚ್ಚು ಪುಟಾಣಿಗಳು; ವಿಡಿಯೋ ನೋಡಿ

Published On - 9:54 am, Wed, 17 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!