AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರಷ್ಟಾಚಾರ ಆರೋಪ; ಇಡಿ ಅಧಿಕಾರಿಗಳಿಂದ ಬಂಗಾಳದ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ

ಇಡಿ ದಾಳಿಯ ವೇಳೆ ನಡೆದ ವಿಚಾರಣೆಯಲ್ಲಿ ಜ್ಯೋತಿಪ್ರಿಯ ಮಲ್ಲಿಕ್ ಅವರ ಹೇಳಿಕೆ ಅಸಂಬದ್ಧವಾಗಿತ್ತು. ಇಡಿ ಅಧಿಕಾರಿಗಳು ಕೇಳಿದ ಆದಾಯ ಮತ್ತು ವೆಚ್ಚದ ಲೆಕ್ಕಾಚಾರ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ. ಹೀಗಾಗಿ, ಅವರನ್ನು ಬಂಧಿಸಲಾಗಿದೆ.

ಭ್ರಷ್ಟಾಚಾರ ಆರೋಪ; ಇಡಿ ಅಧಿಕಾರಿಗಳಿಂದ ಬಂಗಾಳದ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ
ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಬಂಧನ
ಸುಷ್ಮಾ ಚಕ್ರೆ
|

Updated on: Oct 27, 2023 | 12:31 PM

Share

ಕೊಲ್ಕತ್ತಾ: ಪಡಿತರ ವಿತರಣೆ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ ಮಾಜಿ ಆಹಾರ ಸಚಿವ ಹಾಗೂ ಹಾಲಿ ಅರಣ್ಯ ಸಚಿವ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯವು ಕೊಲ್ಕತ್ತಾದ ಅವರ ಮನೆಯಲ್ಲಿ 20 ಗಂಟೆಗಳ ಕಾಲ ಸುದೀರ್ಘ ದಾಳಿ ನಡೆಸಿದ ಬಳಿಕ ಜ್ಯೋತಿಪ್ರಿಯ ಮಲ್ಲಿಕ್ ಅವರನ್ನು ಬಂಧಿಸಿದೆ. ಇಂದು ಮಲ್ಲಿಕ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಆದರೆ ಅದಕ್ಕೂ ಮುನ್ನ ಇಂದು ಬೆಳಗ್ಗೆ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಮಾಜಿ ಆಹಾರ ಸಚಿವ ಜ್ಯೋತಿಪ್ರಿಯ ಅವರನ್ನು ವೈದ್ಯಕೀಯ ಚಿಕಿತ್ಸೆಗಾಗಿ ಬೆಳಗ್ಗೆ 8.30ರ ಸುಮಾರಿಗೆ ಸಿಜಿಒ ಸಂಕೀರ್ಣದಿಂದ ಜೋಕಾ ಇಎಸ್‌ಐ ಆಸ್ಪತ್ರೆಗೆ ಕರೆದೊಯ್ಯಲಾಯಿತು. ವೈದ್ಯಕೀಯ ಪರೀಕ್ಷೆಯ ನಂತರ ಅವರನ್ನು ಬ್ಯಾಂಕ್‌ಶಾಲ್ ನ್ಯಾಯಾಲಯಕ್ಕೆ ಕರೆದೊಯ್ಯಲಾಗುವುದು. ಇಡಿ ಅಧಿಕಾರಿಗಳು ವಿಚಾರಣೆಗಾಗಿ ಸಚಿವರ ಕಸ್ಟಡಿಗೆ ಕೋರಬಹುದು ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಭ್ರಷ್ಟಾಚಾರ ಆರೋಪ: ಪಶ್ಚಿಮ ಬಂಗಾಳ ಸಚಿವ ಜ್ಯೋತಿಪ್ರಿಯಾ ಮಲ್ಲಿಕ್ ನಿವಾಸದ ಮೇಲೆ ಇಡಿ ದಾಳಿ

ಇಡಿ ಮೂಲಗಳ ಪ್ರಕಾರ, ಇಡಿ ದಾಳಿಯ ವೇಳೆ ನಡೆದ ವಿಚಾರಣೆಯಲ್ಲಿ ಜ್ಯೋತಿಪ್ರಿಯ ಮಲ್ಲಿಕ್ ಅವರ ಹೇಳಿಕೆ ಅಸಂಬದ್ಧವಾಗಿತ್ತು. ಇಡಿ ಅಧಿಕಾರಿಗಳು ಕೇಳಿದ ಆದಾಯ ಮತ್ತು ವೆಚ್ಚದ ಲೆಕ್ಕಾಚಾರ ಸೇರಿದಂತೆ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ. ಹೀಗಾಗಿ, ಅವರನ್ನು ಬಂಧಿಸಲಾಗಿದೆ.

ಪಡಿತರ ವಿತರಣೆ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಜ್ಯೋತಿಪ್ರಿಯಾ ಮಲ್ಲಿಕ್ ಅವರನ್ನು ಬಂಧಿಸಿದ ಬಳಿಕ ಅವರನ್ನು ಕೋಲ್ಕತ್ತಾದ ಜಾರಿ ನಿರ್ದೇಶನಾಲಯದ ಕಚೇರಿಗೆ ಕರೆದೊಯ್ಯುತ್ತಿದ್ದಾಗ ಸಚಿವರು ತಮ್ಮ ಬಂಧನಕ್ಕೆ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಕಾರಣ ಎಂದು ಆರೋಪಿಸಿದ್ದಾರೆ. “ನಾನು ರಾಜಕೀಯ ಷಡ್ಯಂತ್ರಕ್ಕೆ ಬಲಿಯಾಗಿದ್ದೇನೆ. ಬಿಜೆಪಿ ಅಧಿಕಾರದಲ್ಲಿರುವವರೆಗೆ ಇಂತಹವುಗಳು ನಡೆಯುತ್ತಲೇ ಇರುತ್ತವೆ” ಎಂದು ಅವರು ದೂಷಿಸಿದ್ದಾರೆ.

ಇದನ್ನೂ ಓದಿ: ಸಚಿವರ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಟಿಎಂಸಿ ಸಂಸದರನ್ನು ಎಳೆದೊಯ್ದು, ಬಂಧನ

ಜ್ಯೋತಿಪ್ರಿಯ ಮಲ್ಲಿಕ್ ಬಂಗಾಳದ ಹಬ್ರಾ ಕ್ಷೇತ್ರದ ಶಾಸಕರಾಗಿದ್ದಾರೆ. ಪ್ರಸ್ತುತ ಪರಿಸರ ಮತ್ತು ಅರಣ್ಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈ ಹಿಂದೆ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಗುರುವಾರ ಬೆಳಗ್ಗೆ ಕೋಲ್ಕತ್ತಾದ ಸಾಲ್ಟ್‌ಲೇಕ್ ಪ್ರದೇಶದಲ್ಲಿರುವ ಜ್ಯೋತಿಪ್ರಿಯ ಮಲ್ಲಿಕ್ ಅವರ ಮನೆಗೆ ಆಗಮಿಸಿ ಇಂದು ಮುಂಜಾನೆ ತೆರಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?