AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ

ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಕೋರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕಚೇರಿಯು ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ್ದು ನಿಯಮಿತ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿದ್ದಾರೆ.

ಅರವಿಂದ್ ಕೇಜ್ರಿವಾಲ್ ಮಧ್ಯಂತರ ಜಾಮೀನಿಗೆ ಇಡಿ ವಿರೋಧ, ಜೂನ್ 5 ರಂದು ಮುಂದಿನ ವಿಚಾರಣೆ
ಅರವಿಂದ್ ಕೇಜ್ರಿವಾಲ್
ರಶ್ಮಿ ಕಲ್ಲಕಟ್ಟ
|

Updated on: Jun 01, 2024 | 4:42 PM

Share

ದೆಹಲಿ ಜೂನ್ 01: ಆಮ್ ಆದ್ಮಿ ಪಕ್ಷದ (AAP) ಮುಖ್ಯಸ್ಥರು ತಮ್ಮ ಆರೋಗ್ಯದ ಬಗ್ಗೆ ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಕಳೆದ ತಿಂಗಳು ಸುಪ್ರೀಂಕೋರ್ಟ್ (Supreme Court) ನೀಡಿದ್ದ ಮಧ್ಯಂತರ ಜಾಮೀನನ್ನು ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ಅವರ ಅರ್ಜಿಯನ್ನು ಜಾರಿ ನಿರ್ದೇಶನಾಲಯ (ED) ಶನಿವಾರ ವಿರೋಧಿಸಿದೆ. ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಇಡಿ ಬಂಧಿಸಿತ್ತು. ಅದೇ ವೇಳೆ ಜೈಲಿನಲ್ಲಿ  6 ಕಿಲೋಗ್ರಾಂಗಳಷ್ಟು ತೂಕವನ್ನು ಕಳೆದುಕೊಂಡಿದ್ದೇನೆ ಎಂದ ಕೇಜ್ರಿವಾಲ್ ಹೇಳಿಕೆಯನ್ನು ಇಡಿ ತಳ್ಳಿಹಾಕಿದೆ.

ಶುಕ್ರವಾರ ದೇಶದ ಜನರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಹಠಾತ್ ತೂಕ ನಷ್ಟವು ಗಂಭೀರ ಕಾಯಿಲೆಯ ಸೂಚನೆಯಾಗಿರಬಹುದು ಎಂದು ಹೇಳಿದ್ದಾರೆ. ಏತನ್ಮಧ್ಯೆ, ಕೇಜ್ರಿವಾಲ್ ಅವರು ಸುಪ್ರೀಂಕೋರ್ಟ್‌ನಲ್ಲಿ ಮಧ್ಯಂತರ ಜಾಮೀನು ವಿಸ್ತರಿಸಲು ಕೋರಿದ್ದರು. ಆದರೆ, ಸುಪ್ರೀಂ ಕೋರ್ಟ್ ಕಚೇರಿಯು ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿದ್ದು ನಿಯಮಿತ ಜಾಮೀನು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ತೆರಳಲು ಅವರಿಗೆ ಸ್ವಾತಂತ್ರ್ಯವಿದೆ ಎಂದು ಹೇಳಿದೆ. ನಂತರ, ದೆಹಲಿ ಮುಖ್ಯಮಂತ್ರಿ ದೆಹಲಿಯ ರೂಸ್ ಹೌಸ್ ನ್ಯಾಯಾಲಯದಲ್ಲಿ ಸಾಮಾನ್ಯ ಜಾಮೀನಿಗೆ ಅರ್ಜಿ ಸಲ್ಲಿಸಿದರು.

ಅನಾರೋಗ್ಯದ ಸಾಧ್ಯತೆಯನ್ನು ತಳ್ಳಿಹಾಕಲು ವೈದ್ಯಕೀಯ ಪರೀಕ್ಷೆಗಳಿಗೆ ಒಳಗಾಗಲು ಏಳು ದಿನಗಳ ಅಗತ್ಯವಿದೆ ಎಂದು ಕೇಜ್ರಿವಾಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ, ಜಾರಿ ನಿರ್ದೇಶನಾಲಯವು ಈ ಪರೀಕ್ಷೆಗಳು ಏನು ಎಂದು ಪ್ರಶ್ನಿಸಿದೆ.

ಅರವಿಂದ್ ಕೇಜ್ರಿವಾಲ್ ಒಂದು ಕೆಜಿ ತೂಕವನ್ನು ಹೆಚ್ಚಿಸಿಕೊಂಡಿದ್ದಾರೆ ಎಂದು ಸಂಸ್ಥೆ ಹೇಳಿಕೊಂಡಿದೆ. ಅವರ ವೈದ್ಯಕೀಯ ಪರೀಕ್ಷೆಗಳನ್ನು ಮಾಡುವ ಬದಲು ಅವರು ದೇಶಾದ್ಯಂತ ಪ್ರಯಾಣಿಸುತ್ತಿದ್ದರು ಎಂದು  ಹೇಳಿದೆ. ತನ್ನ ಮಧ್ಯಂತರ ಜಾಮೀನು ವಿಸ್ತರಣೆಯನ್ನು ಕೋರಿ ಅರವಿಂದ್ ಕೇಜ್ರಿವಾಲ್ ಮಾಡಿದ ಮನವಿಯ ನಿರ್ವಹಣೆಯನ್ನು ಸಂಸ್ಥೆ ಪ್ರಶ್ನಿಸಿದೆ. ಸಾಮಾನ್ಯ ಜಾಮೀನು ಪಡೆಯಲು ಸುಪ್ರೀಂ ಕೋರ್ಟ್ ಅವರಿಗೆ ಸ್ವಾತಂತ್ರ್ಯ ನೀಡಿದೆ, ಮಧ್ಯಂತರ ಜಾಮೀನಿನ ವಿಸ್ತರಣೆಯಲ್ಲ ಎಂದು ಅದು ವಾದಿಸಿತು.

ಕೇಜ್ರಿವಾಲ್ ಅವರು ಭಾನುವಾರ ಶರಣಾಗುವುದಾಗಿ ನಿನ್ನೆ ಘೋಷಿಸಿದ್ದರು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ತಿಳಿಸಿದರು. “ಅವರು ಶರಣಾಗುವ ಮೊದಲು ಅವಕಾಶವನ್ನು ತೆಗೆದುಕೊಳ್ಳುತ್ತಿದ್ದಾರೆಯೇ? ಅವರು ಸ್ವಯಂಪ್ರೇರಿತವಾಗಿ ಶರಣಾಗುತ್ತಿಲ್ಲ. ನಿನ್ನೆಯ ಪತ್ರಿಕಾಗೋಷ್ಠಿಯಿಂದ ನಮ್ಮ ದಾರಿ ತಪ್ಪಿಸಲಾಗಿದೆ ಎಂದು ಮೆಹ್ತಾ ಹೇಳಿದರು.

ಇದನ್ನೂ ಓದಿ: ಕಾಯಿಲೆಯಿಂದ ಬಳಲುತ್ತಿದ್ದೇನೆ ಎಂದ ಅರವಿಂದ್ ಕೇಜ್ರಿವಾಲ್‌ಗಾಗಿ ಆಂಬುಲೆನ್ಸ್ ಕಳುಹಿಸಿದ ಬಿಜೆಪಿ ನಾಯಕ 

ಕೇಜ್ರಿವಾಲ್ ಹೇಳಿಕೆ ತಪ್ಪುದಾರಿಗೆಳೆಯುವಂತಿದೆ ಎಂದು ಮೆಹ್ತಾ ಹೇಳಿದ್ದಾರೆ. ಶರಣಾಗತಿಯ ದಿನಾಂಕದ ಕುರಿತು ಸುಪ್ರೀಂಕೋರ್ಟ್‌ನ ನಿರ್ದೇಶನವನ್ನು ಮಾರ್ಪಡಿಸಲಾಗುವುದಿಲ್ಲ ಎಂದು ಅವರು ಹೇಳಿದರು. ಇಡಿ ಪರ ವಾದ ಮಂಡಿಸಿದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಜಾಮೀನು ಮಂಜೂರು ಮಾಡಲು ಕೇಜ್ರಿವಾಲ್ ಮೊದಲು ಕಸ್ಟಡಿಯಲ್ಲಿ ಇರಬೇಕಾಗುತ್ತದೆ ಎಂದಿದ್ದಾರೆ.

“ಅವರು ಮೊದಲು ಶರಣಾಗಬೇಕು, ಒಂದೋ ಅವರು ಕಸ್ಟಡಿಯಲ್ಲಿರಬೇಕು ಅಥವಾ ಅವರು ಕಸ್ಟಡಿಯಲ್ಲಿದ್ದಾನೆ ಎಂದು ಪರಿಗಣಿಸಬೇಕು. ಅದಕ್ಕೆ ಯಾವುದೇ ಆದೇಶವಿಲ್ಲ … ಆದ್ದರಿಂದ ಮಧ್ಯಂತರ ಜಾಮೀನು ನೀಡಲಾಗುವುದಿಲ್ಲ ಎಂದು ಅವರು ಹೇಳಿದ್ದಾರೆ. “ಜೂನ್ 2 ರಂದು ನೀವು ಶರಣಾಗಬೇಕು ಎಂದು ಸುಪ್ರೀಂಕೋರ್ಟ್‌ನ ಆದೇಶವಿದೆ. ನನ್ನ ಸಲ್ಲಿಕೆ ಏನೆಂದರೆ, ನ್ಯಾಯಾಲಯವು ಮಾತ್ರ ಈ ನಿರ್ದೇಶನವನ್ನು ಮಾರ್ಪಡಿಸಬಹುದು. ಆದ್ದರಿಂದ ಅವರು ಮೊದಲು ಸುಪ್ರೀಂಕೋರ್ಟ್ ಅನ್ನು ಸಂಪರ್ಕಿಸಿದರು ಎಂದಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!