AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಚಾರಣೆಗೆ ಹಾಜರಾಗದ ಶಿವಸೇನೆ ನಾಯಕ ಸಂಜಯ್ ರಾವುತ್: ಇಡಿ ಅಧಿಕಾರಿಗಳಿಂದ ಮನೆ ತಪಾಸಣೆ

ಸಂಜಯ್ ರಾವುತ್​ ಅವರು ಸತತ ಎರಡು ಬಾರಿ ಸಮನ್ಸ್​ ಉಲ್ಲಂಘಿಸಿದ್ದರಿಂದ ಅವರ ಮುಂಬೈ ನಿವಾಸಕ್ಕೆ ಇಡಿ ಅಧಿಕಾರಿಗಳು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು.

ವಿಚಾರಣೆಗೆ ಹಾಜರಾಗದ ಶಿವಸೇನೆ ನಾಯಕ ಸಂಜಯ್ ರಾವುತ್: ಇಡಿ ಅಧಿಕಾರಿಗಳಿಂದ ಮನೆ ತಪಾಸಣೆ
ಸಂಜಯ್ ರಾವುತ್ ಮತ್ತು ಜಾರಿ ನಿರ್ದೇಶನಾಲಯ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 31, 2022 | 8:56 AM

Share

ದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ (Enforcement Directorate – ED) ವಿಚಾರಣೆ ಎದುರಿಸುತ್ತಿರುವ ಸಂಜಯ್ ರಾವುತ್​ ಅವರು ಸತತ ಎರಡು ಬಾರಿ ಸಮನ್ಸ್​ ಉಲ್ಲಂಘಿಸಿದ್ದರಿಂದ ಅವರ ಮುಂಬೈ ನಿವಾಸಕ್ಕೆ ಅಧಿಕಾರಿಗಳು ಭಾನುವಾರ ಭೇಟಿ ನೀಡಿ ಪರಿಶೀಲಿಸಿದರು. ಜುಲೈ 27ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಅಧಿಕಾರಿಗಳು ಸಮನ್ಸ್ ಜಾರಿ ಮಾಡಿದ್ದರು. ಆದರೆ ಸಂಸತ್ ಅಧಿವೇಶನ ನಡೆಯುತ್ತಿರುವ ಕಾರಣ ನೀಡಿದ್ದ ಸಂಜಯ್ ರಾವುತ್ ವಿಚಾರಣೆ ತಪ್ಪಿಸಿಕೊಂಡಿದ್ದರು.

ಕೇಂದ್ರೀಯ ಮೀಸಲು ಪೊಲೀಸ್ ದಳ (Central Reserve Police Force – CRPF) ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ಧಾವಿಸಿದ ಇಡಿ ಅಧಿಕಾರಿಗಳು ಮುಂಬೈ ಉಪನಗರದಲ್ಲಿರುವ ಬಂದೌಪ್​ನ ರಾವುತ್ ನಿವಾಸ ಪ್ರವೇಶಿಸಿದರು. ಪಾಟ್ರಾ ಚಾಲ್ ಮರು ನಿರ್ಮಾಣ ಪ್ರಕರಣದ ವಿಚಾರಣೆಗಾಗಿ ಇಡಿ ಅಧಿಕಾರಿಗಳು ರಾವುತ್ ಅವರ ವಿಚಾರಣೆ ನಡೆಸುತ್ತಿದ್ದಾರೆ. ತಾವು ಏನೂ ತಪ್ಪು ಮಾಡಿಲ್ಲ ಎಂದು ವಾದಿಸುತ್ತಿರುವ ರಾವುತ್, ಇದು ರಾಜಕೀಯಪ್ರೇರಿತ ಕ್ರಮ ಎಂದು ಹರಿಹಾಯ್ದಿದ್ದಾರೆ.

ಜುಲೈ 1ರಂದು ರಾವುತ್ ಅವರನ್ನು ಸತತ 10 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿತ್ತು. ಈ ವೇಳೆ ಅವರ ಹೇಳಿಕೆಯನ್ನು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (Prevention of Money Laundering Act – PMLA) ಕ್ರಿಮಿನಲ್ ಸೆಕ್ಷನ್​ಗಳ ಅಡಿಯಲ್ಲಿ ದಾಖಲಿಸಲಾಗಿತ್ತು.

ಕಳೆದ ಏಪ್ರಿಲ್ ತಿಂಗಳಲ್ಲಿ ಜಾರಿ ನಿರ್ದೇಶನಾಲಯವು ಸಂಜಯ್ ರಾವುತ್ ಪತ್ನಿ ವರ್ಷಾ ರಾವುತ್ ಅವರಿಗೆ ಸೇರಿದ್ದ ₹ 11.15 ಕೋಟಿ ಮೊತ್ತದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಇದರಲ್ಲಿ ದಾದರ್​ನಲ್ಲಿರುವ ಫ್ಲಾಟ್​, ಕಿಹಿಂಮ್ ಬೀಚ್​ನಲ್ಲಿದ್ದ 9 ನಿವೇಶನಗಳು ಸೇರಿದ್ದವು. ವರ್ಷಾ ರಾವುತ್ ಅವರು ಪ್ರವೀಣ್ ರಾವುತ್ ಮತ್ತು ಸುಜಿತ್ ಪಟ್ಕಾರ್ ಅವರೊಂದಿಗೆ ಹೊಂದಿರುವ ವ್ಯಾಪಾರ ಮತ್ತು ಇತರ ಸಂಪರ್ಕಗಳ ಬಗ್ಗೆ ಸಂಜಯ್ ರಾವುತ್ ಅವರನ್ನು ಪ್ರಶ್ನಿಸಲು ತನಿಖಾದಳವು ಪ್ರಯತ್ನಿಸುತ್ತಿದೆ.

Published On - 8:56 am, Sun, 31 July 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ