AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ

Anil Deshmukh: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ಮತ್ತು ‘ಅಪರಿಚಿತ ಇತರರು’ ತಮ್ಮ ಅಧಿಕೃತ ಸ್ಥಾನವನ್ನು ಅನಗತ್ಯ ಲಾಭ ಪಡೆಯಲು ಬಳಸಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ.

ಅಕ್ರಮ ಹಣ ವರ್ಗಾವಣೆ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಪ್ರಕರಣ ದಾಖಲಿಸಿದ ಜಾರಿ ನಿರ್ದೇಶನಾಲಯ
ಅನಿಲ್ ದೇಶ್​ಮುಖ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:May 11, 2021 | 12:51 PM

Share

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಆರೋಪ ಕೇಳಿ ಬಂದಿದ್ದು ಜಾರಿ ನಿರ್ದೇಶನಾಲಯ (ಇಡಿ) ಮಂಗಳವಾರ ಕೇಸು ದಾಖಲಿಸಿದೆ. ಸಿಬಿಐ ಸಲ್ಲಿಸಿದ ಎಫ್‌ಐಆರ್ ಆಧಾರದ ಮೇಲೆ ಈ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮೂಲಗಳು ಹೇಳಿರುವುದಾಗಿ ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಮಾಜಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್​​ಮುಖ್ ಮತ್ತು ‘ಅಪರಿಚಿತ ಇತರರು’ ತಮ್ಮ ಅಧಿಕೃತ ಸ್ಥಾನವನ್ನು ಅನಗತ್ಯ ಲಾಭ ಪಡೆಯಲು ಬಳಸಿಕೊಂಡಿದ್ದಾರೆ ಎಂದು ಸಿಬಿಐ ಹೇಳಿದೆ. ಇದರ ಜೊತೆಗೆ ಮುಂಬೈ ಪೊಲೀಸರ ವರ್ಗಾವಣೆ ಮತ್ತು ನೇಮಕಾತಿ ಮೇಲೆ ಪ್ರಭಾವ ಬೀರಿದೆ ಎಂದು ಮಾಜಿ ನಗರ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದಾರೆ. ಸಿಬಿಐ ಪ್ರಕರಣದ ಹಣಕಾಸಿನ ಅಂಶಗಳನ್ನು ಇಡಿ ಪರಿಶೀಲಿಸುತ್ತಿತ್ತು.

ಅನಿಲ್ ದೇಶ್​​ಮುಖ್ ಅವರು ಮಹಾರಾಷ್ಟ್ರ ಗೃಹ ಸಚಿವರಾಗಿದ್ದಾಗ ಆಗಿನ ಸಹಾಯಕ ಪೊಲೀಸ್ ಇನ್ಸ್‌ಪೆಕ್ಟರ್ ಸಚಿನ್ ವಾಜೆ ಅವರನ್ನು ಮುಂಬೈನ ಹೋಟೆಲ್‌, ಬಾರ್‌ಗಳು ಮತ್ತು ರೆಸ್ಟೋರೆಂಟ್‌ಗಳಿಂದ ಪ್ರತಿ ತಿಂಗಳು ₹ 100 ಕೋಟಿ ಸಂಗ್ರಹಿಸುವಂತೆ ಕೇಳಿಕೊಂಡಿದ್ದಾರೆ ಎಂದು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಆರೋಪಿಸಿದ್ದರು. ನಂತರ ಅಮಾನತುಗೊಂಡ ವಾಜೆ ಫೆಬ್ರವರಿ 25 ರಂದು ಮುಕೇಶ್ ಅಂಬಾನಿ ಮನೆ ಮುಂದೆ ಕಾರಿನಲ್ಲಿ  ಸ್ಫೋಟಕ ಇರಿಸಿದ ಪ್ರಕರಣದಲ್ಲಿ ಮತ್ತು ಮಾರ್ಚ್ 5 ರಂದು ಉದ್ಯಮಿ ಮನ್ಸುಖ್ ಹಿರಾನ್ ಅವರ ಹತ್ಯೆಯ ಆರೋಪದಲ್ಲಿ ಜೈಲಿನಲ್ಲಿದ್ದಾರೆ.

ಪ್ರಾಥಮಿಕ ವಿಚಾರಣೆಯ ಭಾಗವಾಗಿ ಅನಿಲ್ ದೇಶ್​​ಮುಖ್ ವಿರುದ್ಧದ ಆರೋಪಗಳನ್ನು ಪರಿಶೀಲಿಸುವಂತೆ ಬಾಂಬೆ ಹೈಕೋರ್ಟ್ ಪ್ರಧಾನ ಭ್ರಷ್ಟಾಚಾರ ವಿರೋಧಿ ಸಂಸ್ಥೆಯನ್ನು ಕೇಳಿದ ನಂತರ ಸಿಬಿಐ ಈ ಆರೋಪಗಳಲ್ಲಿ ಪ್ರೈಮಾ ಫೇಸಿ ಸತ್ಯವನ್ನು ಕಂಡುಹಿಡಿದಿದೆ. ನಂತರ, ಈ ಪ್ರಕರಣವನ್ನು ಪ್ರಾಥಮಿಕ ಮಾಹಿತಿ ವರದಿ (ಎಫ್‌ಐಆರ್) ಆಗಿ ಪರಿವರ್ತಿಸಲಾಯಿತು. ಕಳೆದ ಶನಿವಾರ ಮಹಾರಾಷ್ಟ್ರದ ಮಾಜಿ ಗೃಹ ಸಚಿವರ ನಿವಾಸಗಳ ಮೇಲೆ ಏಜೆನ್ಸಿ ದಾಳಿ ನಡೆಸಿದವು. ಸಿಬಿಐ ಎಫ್‌ಐಆರ್ ಅನ್ನು ಪರಿಶೀಲಿಸುತ್ತಿದೆ ಎಂದು ಜಾರಿ ನಿರ್ದೇಶನಾಲಯ ಹೇಳಿದೆ.

ಪ್ರತಿ ತಿಂಗಳು ₹ 100 ಕೋಟಿ ಮೊತ್ತವನ್ನು ಒಳಗೊಂಡಿರುವ ಆರೋಪಗಳು ದೊಡ್ಡದಾಗಿದೆ ಎಂದು ಇಡಿ ಹೇಳಿದೆ. ಏತನ್ಮಧ್ಯೆ, ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ವಿಕಾಸ್ ಅಘಾಡಿ (ಎಂವಿಎ) ಸಮ್ಮಿಶ್ರ ಸರ್ಕಾರದ ಮೈತ್ರಿ ಪಕ್ಷದ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ) ಸುಲಿಗೆ ದಂಧೆ ಪ್ರಕರಣದಲ್ಲಿ ಮಾಜಿ ರಾಜ್ಯ ಗೃಹ ಸಚಿವ ಅನಿಲ್ ದೇಶ್​​ಮುಖ್ ವಿರುದ್ಧ ಕ್ರಮ ಕೈಗೊಂಡಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿದೆ.

ಇದನ್ನೂ ಓದಿ:  ಭ್ರಷ್ಟಾಚಾರ ಪ್ರಕರಣ: ಮಹಾರಾಷ್ಟ್ರ ಮಾಜಿ ಗೃಹಸಚಿವ ಅನಿಲ್​ ದೇಶಮುಖ್​ ವಿರುದ್ಧ ಎಫ್​ಐಆರ್ ದಾಖಲಿಸಿದ ಸಿಬಿಐ

(Enforcement Directorate registered a case of money laundering against former Maharashtra home minister Anil Deshmukh)

Published On - 12:50 pm, Tue, 11 May 21

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!