AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ

ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ
ನ್ಯಾಷನಲ್ ಹೆರಾಲ್ಡ್ ಕಚೇರಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Aug 03, 2022 | 7:53 PM

Share

ದೆಹಲಿ: ಜಾರಿ ನಿರ್ದೇಶನಾಲಯವು (Enforcement Directorate) ನವದೆಹಲಿಯ ಐಟಿಒನಲ್ಲಿರುವ ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್  (National Herald)ಕಚೇರಿಗೆ ಬುಧವಾರ ಬೀಗ ಮುದ್ರೆ ಹಾಕಿದೆ. ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಸೂಚನೆ ನೀಡಿದೆ.ಅಕ್ರಮ ಹಣ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಮುಖ್ಯ ಕಚೇರಿ ಮತ್ತು ಇತರ 11 ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಬೀಗ ಮುದ್ರೆ ಕ್ರಮಕೈಗೊಂಡಿದೆ.ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ನಿಧಿ ಎಲ್ಲಿಂದ ಬಂತು  ಎಂಬುದರ ಬಗ್ಗೆ ಹೆಚ್ಚುವರಿ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅವರು ನ್ಯಾಷನಲ್ ಹೆರಾಲ್ಡ್-ಸಂಬಂಧಿತ ವಹಿವಾಟುಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ವಿರುದ್ಧ ಇಡಿ ದಾಳಿ ನಡೆಸಿತ್ತು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಗ ರಾಹುಲ್ ಗಾಂಧಿಗೆ ಸೇರಿದ ನ್ಯಾಷನಲ್ ಹೆರಾಲ್ಡ್  ಪತ್ರಿಕೆ ಯಂಗ್ ಇಂಡಿಯನ್ ಲಿಮಿಟೆಡ್ ಒಡೆತನದಲ್ಲಿದೆ. ಸೆಂಟ್ರಲ್ ದೆಹಲಿಯ ಐಟಿಒನಲ್ಲಿರುವ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯು ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಅಕ್ರಮ ಹಣ  ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಇತ್ತೀಚೆಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಂಸದ  ರಾಹುಲ್ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿತ್ತು.

Published On - 6:47 pm, Wed, 3 August 22

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ