AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ

ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ
ನ್ಯಾಷನಲ್ ಹೆರಾಲ್ಡ್ ಕಚೇರಿ
TV9 Web
| Edited By: |

Updated on:Aug 03, 2022 | 7:53 PM

Share

ದೆಹಲಿ: ಜಾರಿ ನಿರ್ದೇಶನಾಲಯವು (Enforcement Directorate) ನವದೆಹಲಿಯ ಐಟಿಒನಲ್ಲಿರುವ ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್  (National Herald)ಕಚೇರಿಗೆ ಬುಧವಾರ ಬೀಗ ಮುದ್ರೆ ಹಾಕಿದೆ. ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಸೂಚನೆ ನೀಡಿದೆ.ಅಕ್ರಮ ಹಣ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಮುಖ್ಯ ಕಚೇರಿ ಮತ್ತು ಇತರ 11 ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಬೀಗ ಮುದ್ರೆ ಕ್ರಮಕೈಗೊಂಡಿದೆ.ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ನಿಧಿ ಎಲ್ಲಿಂದ ಬಂತು  ಎಂಬುದರ ಬಗ್ಗೆ ಹೆಚ್ಚುವರಿ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅವರು ನ್ಯಾಷನಲ್ ಹೆರಾಲ್ಡ್-ಸಂಬಂಧಿತ ವಹಿವಾಟುಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ವಿರುದ್ಧ ಇಡಿ ದಾಳಿ ನಡೆಸಿತ್ತು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಗ ರಾಹುಲ್ ಗಾಂಧಿಗೆ ಸೇರಿದ ನ್ಯಾಷನಲ್ ಹೆರಾಲ್ಡ್  ಪತ್ರಿಕೆ ಯಂಗ್ ಇಂಡಿಯನ್ ಲಿಮಿಟೆಡ್ ಒಡೆತನದಲ್ಲಿದೆ. ಸೆಂಟ್ರಲ್ ದೆಹಲಿಯ ಐಟಿಒನಲ್ಲಿರುವ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯು ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಅಕ್ರಮ ಹಣ  ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಇತ್ತೀಚೆಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಂಸದ  ರಾಹುಲ್ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿತ್ತು.

Published On - 6:47 pm, Wed, 3 August 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ