AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ

ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಜಾರಿ ನಿರ್ದೇಶನಾಲಯ ಸೂಚನೆ ನೀಡಿದೆ.

ಕಾಂಗ್ರೆಸ್ ಪಕ್ಷ ಒಡೆತನದ ನ್ಯಾಷನಲ್ ಹೆರಾಲ್ಡ್ ಕಚೇರಿಗೆ ಇಡಿ ಬೀಗ ಮುದ್ರೆ
ನ್ಯಾಷನಲ್ ಹೆರಾಲ್ಡ್ ಕಚೇರಿ
TV9 Web
| Edited By: |

Updated on:Aug 03, 2022 | 7:53 PM

Share

ದೆಹಲಿ: ಜಾರಿ ನಿರ್ದೇಶನಾಲಯವು (Enforcement Directorate) ನವದೆಹಲಿಯ ಐಟಿಒನಲ್ಲಿರುವ ಕಾಂಗ್ರೆಸ್ ಪಕ್ಷದ ಒಡೆತನದ ನ್ಯಾಷನಲ್ ಹೆರಾಲ್ಡ್  (National Herald)ಕಚೇರಿಗೆ ಬುಧವಾರ ಬೀಗ ಮುದ್ರೆ ಹಾಕಿದೆ. ತನಿಖಾ ಸಂಸ್ಥೆಯಿಂದ ಪೂರ್ವಾನುಮತಿ ಪಡೆಯದೆ ಕಚೇರಿ ತೆರೆಯಬಾರದು ಎಂದು ಸೂಚನೆ ನೀಡಿದೆ.ಅಕ್ರಮ ಹಣ ವ್ಯವಹಾರ ಬಗ್ಗೆ ಜಾರಿ ನಿರ್ದೇಶನಾಲಯ ದೆಹಲಿಯಲ್ಲಿರುವ ನ್ಯಾಷನಲ್ ಹೆರಾಲ್ಡ್ ಮುಖ್ಯ ಕಚೇರಿ ಮತ್ತು ಇತರ 11 ಸ್ಥಳಗಳಲ್ಲಿ ದಾಳಿ ನಡೆಸಿದ ನಂತರ ಬೀಗ ಮುದ್ರೆ ಕ್ರಮಕೈಗೊಂಡಿದೆ.ಹಣ ವರ್ಗಾವಣೆ ತಡೆ ಕಾಯ್ದೆ (PMLA)ಯ ಕ್ರಿಮಿನಲ್ ಸೆಕ್ಷನ್‌ಗಳ ಅಡಿಯಲ್ಲಿ ನಿಧಿ ಎಲ್ಲಿಂದ ಬಂತು  ಎಂಬುದರ ಬಗ್ಗೆ ಹೆಚ್ಚುವರಿ ಪುರಾವೆಗಳನ್ನು ಸಂಗ್ರಹಿಸಲು ಮತ್ತು ಅವರು ನ್ಯಾಷನಲ್ ಹೆರಾಲ್ಡ್-ಸಂಬಂಧಿತ ವಹಿವಾಟುಗಳಲ್ಲಿ ತೊಡಗಿಸಿಕೊಂಡಿರುವ ಸಂಸ್ಥೆಗಳ ವಿರುದ್ಧ ಇಡಿ ದಾಳಿ ನಡೆಸಿತ್ತು.

ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಮಗ ರಾಹುಲ್ ಗಾಂಧಿಗೆ ಸೇರಿದ ನ್ಯಾಷನಲ್ ಹೆರಾಲ್ಡ್  ಪತ್ರಿಕೆ ಯಂಗ್ ಇಂಡಿಯನ್ ಲಿಮಿಟೆಡ್ ಒಡೆತನದಲ್ಲಿದೆ. ಸೆಂಟ್ರಲ್ ದೆಹಲಿಯ ಐಟಿಒನಲ್ಲಿರುವ ಬಹದ್ದೂರ್ ಶಾ ಜಾಫರ್ ಮಾರ್ಗದಲ್ಲಿರುವ ನ್ಯಾಷನಲ್ ಹೆರಾಲ್ಡ್ ಕಚೇರಿಯು ಪತ್ರಿಕೆಯನ್ನು ಪ್ರಕಟಿಸುವ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಹೆಸರಿನಲ್ಲಿ ನೋಂದಾಯಿಸಲಾಗಿದೆ.

ಅಕ್ರಮ ಹಣ  ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾ ಸಂಸ್ಥೆ ಇತ್ತೀಚೆಗೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಂಸದ  ರಾಹುಲ್ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿತ್ತು.

Published On - 6:47 pm, Wed, 3 August 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ