AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಡಿನೋ ಮೊರಿಯಾ, ಅಹ್ಮದ್ ಪಟೇಲ್​ ಅಳಿಯ ಸೇರಿ ನಾಲ್ವರ ಆಸ್ತಿ ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ

ಬಯೋಟೆಕ್​ ಕಂಪನಿಗೆ ಸಂಬಂಧಿಸಿದಂತೆ ನಾಲ್ವರ ಆಸ್ತಿ ವಶಪಡಿಸಿಕೊಳ್ಳಲು ನಾಲ್ಕು ಪ್ರತ್ಯೇಕ ಪ್ರಾಥಮಿಕ ಆದೇಶವನ್ನೇ ನೀಡಲಾಗಿದೆ. ಒಟ್ಟಾರೆ 8.70 ಕೋಟಿ ರೂ.ಮೌಲ್ಯದ ಆಸ್ತಿ ವಶವಾಗಿದೆ.

ನಟ ಡಿನೋ ಮೊರಿಯಾ, ಅಹ್ಮದ್ ಪಟೇಲ್​ ಅಳಿಯ ಸೇರಿ ನಾಲ್ವರ ಆಸ್ತಿ ವಶಪಡಿಸಿಕೊಂಡ ಜಾರಿ ನಿರ್ದೇಶನಾಲಯ
ಡಿನೋ ಮೊರಿಯಾ
TV9 Web
| Edited By: |

Updated on:Jul 03, 2021 | 11:15 AM

Share

ಈ ಪ್ರಕರಣ ಗುಜರಾತ್ ಮೂಲದ ಔಷಧೀಯ ಕಂಪನಿ ಸ್ಟರ್ಲಿಂಗ್ ಬಯೋಟೆಕ್​​ ಮತ್ತು ಅದರ ಪ್ರವರ್ತಕ ಸಹೋದರರಾದ ನಿತಿನ್​ ಸಂದೇಸರ್​ ಮತ್ತು ಚೇತನ್ ಸಂದೇಸರ್​ ಅವರಿಗೆ ಸಂಬಂಧಪಟ್ಟದ್ದಾಗಿದೆ. ಈ ಸಹೋದರರು ಬ್ಯಾಂಕ್​​ನಿಂದ 14,500 ಕೋಟಿ ರೂಪಾಯಿಯಷ್ಟು ಸಾಲ ಪಡೆದು ವಂಚಿಸಿದ್ದಾರೆ. ಕಾಂಗ್ರೆಸ್​ ನಾಯಕ ದಿವಂಗತ ಅಹ್ಮದ್​ ಪಟೇಲ್​ ಅವರ ಅಳಿಯ, ನಟರಾದ ಡಿನೋ ಮೊರಿಯಾ, ಸಂಜಯ್​ ಖಾನ್​, ಡಿಜೆ ಅಕ್ವೀಲ್​​ ಅವರ ಆಸ್ತಿಯನ್ನು ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಮುಟ್ಟುಗೋಲು ಹಾಕಿಕೊಂಡಿದೆ. ಹಣ ಅಕ್ರಮ ವರ್ಗಾವಣೆ ಮೂಲಕ ಬ್ಯಾಂಕ್​ಗೆ ವಂಚನೆ ಮಾಡಿದ ಪ್ರಕರಣದಡಿ ಇವರ ಆಸ್ತಿಯನ್ನು ಇಡಿ ವಶಪಡಿಸಿಕೊಂಡಿದ್ದು, ತನಿಖಾ ದಳ ವಶಪಡಿಸಿಕೊಂಡಿರುವ ನಾಲ್ಕೂ ಜನರ ಒಟ್ಟು ಆಸ್ತಿ ಮೊಟ್ಟ 8.79 ಕೋಟಿ ರೂಪಾಯಿ ಆಗಿದೆ.

ಈ ಪ್ರಕರಣ ಗುಜರಾತ್ ಮೂಲದ ಔಷಧೀಯ ಕಂಪನಿ ಸ್ಟರ್ಲಿಂಗ್ ಬಯೋಟೆಕ್​​ ಮತ್ತು ಅದರ ಪ್ರವರ್ತಕ ಸಹೋದರರಾದ ನಿತಿನ್​ ಸಂದೇಸರ್​ ಮತ್ತು ಚೇತನ್ ಸಂದೇಸರ್​ ಅವರಿಗೆ ಸಂಬಂಧಪಟ್ಟದ್ದಾಗಿದೆ. ಈ ಸಹೋದರರು ಬ್ಯಾಂಕ್​​ನಿಂದ 14,500 ಕೋಟಿ ರೂಪಾಯಿಯಷ್ಟು ಸಾಲ ಪಡೆದು ವಂಚಿಸಿದ್ದಾರೆ. ಇದು ದೇಶಭ್ರಷ್ಟ ವ್ಯಾಪಾರಿ ನೀರವ್​ ಮೋದಿ ಪಂಜಾಬ್​ ನ್ಯಾಶನಲ್​ ಬ್ಯಾಂಕ್​ಗೆ ವಂಚಿಸಿದ ಮೊತ್ತ (11,400 ರೂ.)ಕ್ಕಿಂತಲೂ ಹೆಚ್ಚು.

ಈ ಬಯೋಟೆಕ್​ ಕಂಪನಿಗೆ ಸಂಬಂಧಿಸಿದಂತೆ ನಾಲ್ವರ ಆಸ್ತಿ ವಶಪಡಿಸಿಕೊಳ್ಳಲು ನಾಲ್ಕು ಪ್ರತ್ಯೇಕ ಪ್ರಾಥಮಿಕ ಆದೇಶವನ್ನೇ ನೀಡಲಾಗಿದೆ. ಒಟ್ಟಾರೆ 8.70 ಕೋಟಿ ರೂ.ಮೌಲ್ಯದ ಆಸ್ತಿ ವಶವಾಗಿದ್ದು, ಅದರಲ್ಲಿ ಸಂಜಯ್ ಖಾನ್​ರದ್ದು 3 ಕೋಟಿ ರೂ.ಮೌಲ್ಯದ ಆಸ್ತಿ, ಡಿನೋ ಮೊರಿಯಾರ 1.4 ಕೋಟಿ ರೂ., ಡಿಜಿ ಅಕ್ವೀಲ್​ರ 1.98 ಕೋಟಿ ರೂ. ಮೌಲ್ಯದ ಆಸ್ತಿ ವಶಪಡಿಸಿಕೊಳ್ಳಲಾಗಿದೆ. ಹಾಗೂ ಮೃತ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್​ ಅಳಿಯ ಇರ್ಫಾನ್​ ಅಹ್ಮದ್ ಸಿದ್ಧಕಿ ಅವರ​ 2.41 ಕೋಟಿ ರೂ.ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಲಾಗಿದೆ ಎಂದು ಇಡಿ ತಿಳಿಸಿದೆ. ಮುಟ್ಟುಗೋಲು ಹಾಕಿದ ಆಸ್ತಿಯಲ್ಲಿ ಮೂರು ವಾಹನಗಳು, ಬ್ಯಾಂಕ್​ ಅಕೌಂಟ್​​ಗಳು, ಶೇರ್​​ಗಳು, ಮ್ಯುಚ್ಯುವಲ್​ ಫಂಡ್​ಗಳೂ ಇವೆ ಎಂದೂ ಇಡಿ ಹೇಳಿದೆ.

ಸಂದೇಸರ್​ ಸಹೋದರರ ವಂಚನೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿದ್ಧಕಿ, ಮೊರಿಯೊ, ಅಕ್ವೀಲ್​ ಅವರನ್ನು ಇಡಿ ವಿಚಾರಣೆಗೆ ಒಳಪಡಿಸಿತ್ತು. ಇವರೆಲ್ಲರೂ ಸಂದೇಸರ್​ ಕುಟುಂಬದೊಂದಿಗೆ ಆಪ್ತರಾಗಿದ್ದರು ಎಂಬ ಮಾಹಿತಿಯನ್ನು, ಅವರ ಮನೆಯ ಉದ್ಯೋಗ ಸುನೀಲ್ ಯಾದವ್​ ಎಂಬಾತ ಹೇಳಿಕೆ ನೀಡಿದ್ದ. ಅದನ್ನು ದಾಖಲಿಸಿದ್ದ ಇಡಿ ಕೂಡಲೇ ವಿಚಾರಣೆ ಶುರು ಮಾಡಿತ್ತು.

ಇದನ್ನೂ ಓದಿ: ದಾಬಸ್‌ಪೇಟೆಯ 3 ಅಂಗಡಿಗಳಲ್ಲಿ ಸರಣಿ ಕಳ್ಳತನ; ಅಂಗಡಿಗಳ ಶೆಟರ್ ಮುರಿದು ನಗದು ದೋಚಿರುವ ಕಳ್ಳರು

Published On - 11:13 am, Sat, 3 July 21

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು