AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಲೋಕದ ನಂಟಿನ ಸಂಕಟ; ಎನ್​ಸಿಪಿ ನಾಯಕ ನವಾಬ್​ ಮಲಿಕ್​ ಬಂಧನದ ಬೆನ್ನಲ್ಲೇ ಸೋದರನಿಗೂ ಸಮನ್ಸ್​ ನೀಡಿದ ಇ.ಡಿ.

ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್​ ಇಬ್ರಾಹಿಂ ಆತನ ಸಹೋದರ ಅನೀಸ್​ ಇಕ್ಬಾಲ್​, ಸಹಾಯಕ ಚೋಟಾ ಶಕೀಲ್​ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್ ದಾಖಲಾಗಿದೆ.

ಭೂಗತ ಲೋಕದ ನಂಟಿನ ಸಂಕಟ; ಎನ್​ಸಿಪಿ ನಾಯಕ ನವಾಬ್​ ಮಲಿಕ್​ ಬಂಧನದ ಬೆನ್ನಲ್ಲೇ ಸೋದರನಿಗೂ ಸಮನ್ಸ್​ ನೀಡಿದ ಇ.ಡಿ.
ಜಾರಿ ನಿರ್ದೇಶನಾಲಯ
TV9 Web
| Edited By: |

Updated on: Feb 24, 2022 | 2:56 PM

Share

ಭೂಗತ ಪಾತಕಿಗಳೊಂದಿಗೆ ಆಸ್ತಿ ವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಲ್ಪಟ್ಟಿರುವ ಮಹಾರಾಷ್ಟ್ರದ ಸಚಿವ ನವಾಬ್​ ಮಲಿಕ್ (Nawab Malik) ಸೋದರ, ಕಪ್ತನ್​ ಮಲಿಕ್​​ಗೂ ಕೂಡ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ. ದಾವೂದ್​ ಇಬ್ರಾಹಿಂ (Dawood Ibrahim) ಮತ್ತು ಆತನ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣ ದಾಖಲಿಸಿರುವ ಇ.ಡಿ. ಸಂಬಂಧಪಟ್ಟ ಸ್ಥಳಗಳ ಮೇಲೆ ರೇಡ್​ ಮಾಡುತ್ತಿದೆ. ಹಾಗೇ, ಈ ಕೇಸ್​​ನಲ್ಲಿ ಸಂಪರ್ಕ ಹೊಂದಿರುವ ಹಲವರ ಮೇಲೆ ನಿಗಾ ಇಟ್ಟಿದೆ. ನವಾಬ್​ ಮಲಿಕ್​​ ಬಂಧನಕ್ಕೆ ಕಾರಣವಾದ ಪ್ರಕರಣದಡಿಯಲ್ಲೇ ಅವರ ಸೋದರನಿಗೂ ಸಮನ್ಸ್​ ನೀಡಿದ್ದಾಗಿ ಇ.ಡಿ. ಮೂಲಗಳು ತಿಳಿಸಿವೆ.  ಅಷ್ಟೇ ಅಲ್ಲ, ನವಾಬ್​ ಮಲಿಕ್​ ಸೋದರಿಯೂ ಇಂದು ಇ.ಡಿ. ಕಚೇರಿಗೆ ಭೇಟಿ ನೀಡಿದ್ದರು. ಈ ಮಧ್ಯೆ ನವಾಬ್​ ಮಲಿಕ್​​​ರನ್ನು ಮಾರ್ಚ್​ 3ರವರೆಗೂ ಇ.ಡಿ.ಕಸ್ಟಡಿಗೆ ವಹಿಸಲಾಗಿದೆ.

ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್​ ಇಬ್ರಾಹಿಂ, ಆತನ ಸಹೋದರ ಅನೀಸ್​ ಇಕ್ಬಾಲ್​, ಸಹಾಯಕ ಚೋಟಾ ಶಕೀಲ್​ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್​ ದಾಖಲಿಸಿರುವ ಇ.ಡಿ. ಕಳೆದ ವಾರ ಮುಂಬೈನಲ್ಲಿ ದಾವೂದ್​ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಸಂಬಂಧಪಟ್ಟ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ರೇಡ್​ ಮಾಡಿತ್ತು. ರಾಷ್ಟ್ರೀಯ ತನಿಖಾ ದಳ (NIA) ದಾಖಲಿಸಿದ್ದ ಎಫ್​ಐಆರ್​ ಆಧಾರದಲ್ಲಿ ಇ.ಡಿ. ಈ ದಾಳಿ ನಡೆಸಿ, ತನಿಖೆ ಕೈಗೆತ್ತಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಇ.ಡಿ.ಬಂಧಿಸುತ್ತಿರುವ ಎರಡನೇ ಸಚಿವ ಈ ನವಾಬ್​ ಮಲಿಕ್​. ಈ ಹಿಂದೆ 2021ರ ನವೆಂಬರ್​1ರಂದು ತಡರಾತ್ರಿ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.  ಅವರನ್ನು ಬಂಧಿಸುವುದಕ್ಕೂ ಮೊದಲು ಸತತ 12 ಗಂಟೆ ವಿಚಾರಣೆಗೆ ಒಳಪಡಿಸಲಾಗಿತ್ತು. ಪೊಲೀಸ್‌ ಇಲಾಖೆಯಲ್ಲಿ ₹100 ಕೋಟಿ ರೂಪಾಯಿ ಲಂಚ ವಸೂಲಿ, ಸುಲಿಗೆ ಕುರಿತು ಮುಂಬೈ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್​ಮುಖ್​ ವಿರುದ್ಧ ಆರೋಪ ಮಾಡಿದ್ದರು.

ಇದನ್ನೂ ಓದಿ: Stock Market Crash: ಸೆನ್ಸೆಕ್ಸ್ 2000ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿತ; 1 ಗಂಟೆಗೂ ಕಡಿಮೆ ಸಮಯದಲ್ಲಿ 8 ಲಕ್ಷ ಕೋಟಿ ನಷ್ಟ

Follow Us
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್