AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂಗತ ಲೋಕದ ನಂಟಿನ ಸಂಕಟ; ಎನ್​ಸಿಪಿ ನಾಯಕ ನವಾಬ್​ ಮಲಿಕ್​ ಬಂಧನದ ಬೆನ್ನಲ್ಲೇ ಸೋದರನಿಗೂ ಸಮನ್ಸ್​ ನೀಡಿದ ಇ.ಡಿ.

ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್​ ಇಬ್ರಾಹಿಂ ಆತನ ಸಹೋದರ ಅನೀಸ್​ ಇಕ್ಬಾಲ್​, ಸಹಾಯಕ ಚೋಟಾ ಶಕೀಲ್​ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್ ದಾಖಲಾಗಿದೆ.

ಭೂಗತ ಲೋಕದ ನಂಟಿನ ಸಂಕಟ; ಎನ್​ಸಿಪಿ ನಾಯಕ ನವಾಬ್​ ಮಲಿಕ್​ ಬಂಧನದ ಬೆನ್ನಲ್ಲೇ ಸೋದರನಿಗೂ ಸಮನ್ಸ್​ ನೀಡಿದ ಇ.ಡಿ.
ಜಾರಿ ನಿರ್ದೇಶನಾಲಯ
TV9 Web
| Edited By: |

Updated on: Feb 24, 2022 | 2:56 PM

Share

ಭೂಗತ ಪಾತಕಿಗಳೊಂದಿಗೆ ಆಸ್ತಿ ವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಬಂಧಿಸಲ್ಪಟ್ಟಿರುವ ಮಹಾರಾಷ್ಟ್ರದ ಸಚಿವ ನವಾಬ್​ ಮಲಿಕ್ (Nawab Malik) ಸೋದರ, ಕಪ್ತನ್​ ಮಲಿಕ್​​ಗೂ ಕೂಡ ಜಾರಿ ನಿರ್ದೇಶನಾಲಯ ಸಮನ್ಸ್​ ನೀಡಿದೆ. ದಾವೂದ್​ ಇಬ್ರಾಹಿಂ (Dawood Ibrahim) ಮತ್ತು ಆತನ ಸಹಚರರ ವಿರುದ್ಧ ಅಕ್ರಮ ಹಣ ವರ್ಗಾವಣೆ, ಭ್ರಷ್ಟಾಚಾರ ಪ್ರಕರಣ ದಾಖಲಿಸಿರುವ ಇ.ಡಿ. ಸಂಬಂಧಪಟ್ಟ ಸ್ಥಳಗಳ ಮೇಲೆ ರೇಡ್​ ಮಾಡುತ್ತಿದೆ. ಹಾಗೇ, ಈ ಕೇಸ್​​ನಲ್ಲಿ ಸಂಪರ್ಕ ಹೊಂದಿರುವ ಹಲವರ ಮೇಲೆ ನಿಗಾ ಇಟ್ಟಿದೆ. ನವಾಬ್​ ಮಲಿಕ್​​ ಬಂಧನಕ್ಕೆ ಕಾರಣವಾದ ಪ್ರಕರಣದಡಿಯಲ್ಲೇ ಅವರ ಸೋದರನಿಗೂ ಸಮನ್ಸ್​ ನೀಡಿದ್ದಾಗಿ ಇ.ಡಿ. ಮೂಲಗಳು ತಿಳಿಸಿವೆ.  ಅಷ್ಟೇ ಅಲ್ಲ, ನವಾಬ್​ ಮಲಿಕ್​ ಸೋದರಿಯೂ ಇಂದು ಇ.ಡಿ. ಕಚೇರಿಗೆ ಭೇಟಿ ನೀಡಿದ್ದರು. ಈ ಮಧ್ಯೆ ನವಾಬ್​ ಮಲಿಕ್​​​ರನ್ನು ಮಾರ್ಚ್​ 3ರವರೆಗೂ ಇ.ಡಿ.ಕಸ್ಟಡಿಗೆ ವಹಿಸಲಾಗಿದೆ.

ಭೂಗತ ಪಾತಕಿ, ಭಯೋತ್ಪಾದಕ ಚಟುವಟಿಕೆಗಳಿಗೆ ಹಣಕಾಸು ನೆರವು ನೀಡುತ್ತಿದ್ದ ದಾವೂದ್​ ಇಬ್ರಾಹಿಂ, ಆತನ ಸಹೋದರ ಅನೀಸ್​ ಇಕ್ಬಾಲ್​, ಸಹಾಯಕ ಚೋಟಾ ಶಕೀಲ್​ ಮತ್ತು ಇತರರ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಅಕ್ರಮ ಹಣವರ್ಗಾವಣೆ ಕೇಸ್​ ದಾಖಲಿಸಿರುವ ಇ.ಡಿ. ಕಳೆದ ವಾರ ಮುಂಬೈನಲ್ಲಿ ದಾವೂದ್​ ಇಬ್ರಾಹಿಂ ಮತ್ತು ಆತನ ಸಹಚರರಿಗೆ ಸಂಬಂಧಪಟ್ಟ 10ಕ್ಕೂ ಹೆಚ್ಚು ಪ್ರದೇಶಗಳಲ್ಲಿ ರೇಡ್​ ಮಾಡಿತ್ತು. ರಾಷ್ಟ್ರೀಯ ತನಿಖಾ ದಳ (NIA) ದಾಖಲಿಸಿದ್ದ ಎಫ್​ಐಆರ್​ ಆಧಾರದಲ್ಲಿ ಇ.ಡಿ. ಈ ದಾಳಿ ನಡೆಸಿ, ತನಿಖೆ ಕೈಗೆತ್ತಿಕೊಂಡಿದೆ.

ಮಹಾರಾಷ್ಟ್ರದಲ್ಲಿ ಇ.ಡಿ.ಬಂಧಿಸುತ್ತಿರುವ ಎರಡನೇ ಸಚಿವ ಈ ನವಾಬ್​ ಮಲಿಕ್​. ಈ ಹಿಂದೆ 2021ರ ನವೆಂಬರ್​1ರಂದು ತಡರಾತ್ರಿ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿಯಲ್ಲಿ ಮಹಾರಾಷ್ಟ್ರ ಗೃಹ ಸಚಿವ ಅನಿಲ್​ ದೇಶ್​ಮುಖ್​​ರನ್ನು ಜಾರಿ ನಿರ್ದೇಶನಾಲಯ ಬಂಧಿಸಿದೆ.  ಅವರನ್ನು ಬಂಧಿಸುವುದಕ್ಕೂ ಮೊದಲು ಸತತ 12 ಗಂಟೆ ವಿಚಾರಣೆಗೆ ಒಳಪಡಿಸಲಾಗಿತ್ತು. ಪೊಲೀಸ್‌ ಇಲಾಖೆಯಲ್ಲಿ ₹100 ಕೋಟಿ ರೂಪಾಯಿ ಲಂಚ ವಸೂಲಿ, ಸುಲಿಗೆ ಕುರಿತು ಮುಂಬೈ ಪೊಲೀಸ್‌ ಕಮಿಷನರ್‌ ಪರಮ್‌ಬೀರ್‌ ಸಿಂಗ್‌ ಅವರು ದೇಶ್​ಮುಖ್​ ವಿರುದ್ಧ ಆರೋಪ ಮಾಡಿದ್ದರು.

ಇದನ್ನೂ ಓದಿ: Stock Market Crash: ಸೆನ್ಸೆಕ್ಸ್ 2000ಕ್ಕೂ ಹೆಚ್ಚು ಪಾಯಿಂಟ್ಸ್ ಕುಸಿತ; 1 ಗಂಟೆಗೂ ಕಡಿಮೆ ಸಮಯದಲ್ಲಿ 8 ಲಕ್ಷ ಕೋಟಿ ನಷ್ಟ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ