AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮ್ಯಾಟ್ರಿಮೋನಿ ಪ್ರೊಫೈಲ್​ ನೋಡಿ ಮರುಳಾದ ವ್ಯಕ್ತಿ, 22 ಲಕ್ಷ ಹಣವನ್ನೂ ಕಳೆದುಕೊಂಡ್ರು, ಹುಡುಗೀನೂ ಸಿಗ್ಲಿಲ್ಲ

ಮ್ಯಾಟ್ರಿಮೋನಿಯಲ್ಲಿ ಪ್ರೊಫೈಲ್​ ನೋಡಿ ಮರುಳಾಗಿ ವ್ಯಕ್ತಿಯೊಬ್ಬ 22 ಲಕ್ಷ ರೂ. ಕಳೆದುಕೊಂಡಿರುವ ಘಟನೆ ವಿಶಾಖಪಟ್ಟಣಂನಲ್ಲಿ ನಡೆದಿದೆ.

ಮ್ಯಾಟ್ರಿಮೋನಿ ಪ್ರೊಫೈಲ್​ ನೋಡಿ ಮರುಳಾದ ವ್ಯಕ್ತಿ, 22 ಲಕ್ಷ ಹಣವನ್ನೂ ಕಳೆದುಕೊಂಡ್ರು, ಹುಡುಗೀನೂ ಸಿಗ್ಲಿಲ್ಲ
ಎಐ ಜನರೇಟೆಡ್ ಚಿತ್ರImage Credit source: AI Generated Image
ನಯನಾ ರಾಜೀವ್
|

Updated on: Aug 02, 2024 | 2:15 PM

Share

ಡೇಟಿಂಗ್ ಆ್ಯಪ್​, ವಾಟ್ಸಾಪ್​, ಇನ್​ಸ್ಟಾಗ್ರಾಂ, ಫೇಸ್​ಬುಕ್​ ಹಾಗೂ ಮ್ಯಾಟ್ರಿಮೊನಿ ಸೈಟ್​ಗಳು ತನ್ನ ನಿಜವಾದ ಕಾರ್ಯಗಳಿಗಿಂತ ಇದೀಗ ಮೋಸಗಳಿಂದಲೇ ಹೆಸರುವಾಸಿಯಾಗುತ್ತಿದೆ. ದಿನ ನಿತ್ಯವೂ ಇಂತಹ ಹತ್ತಾರು ಸುದ್ದಿಗಳನ್ನು ಕೇಳಿದ್ದರೂ ಕೂಡ, ಜನರು ನಂಬಿ ಮೋಸ ಹೋಗುತ್ತಲೇ ಇದ್ದಾರೆ.

ಸಾಫ್ಟ್​ವೇರ್​ ಉದ್ಯೋಗಿಯೊಬ್ಬರು ವೈಯಕ್ತಿಕ ಕಾರಣಗಳಿಂದಾಗಿ ಪತ್ನಿಗೆ ವಿಚ್ಛೇದನ ನೀಡಿ ಒಂಟಿಯಾಗಿದ್ದರು. ಸಂಗಾತಿಗಾಗಿ ಅರಸುತ್ತಿದ್ದರು. ಮ್ಯಾಟ್ರಿಪೋನಿ ಸೈಟ್​ಗಳನ್ನು ಹುಡುಕಲಾರಂಭಿಸಿದರು. ಅವರು ಒಂದು ಹೆಜ್ಜೆ ಮುಂದಿಟ್ಟು ಇನ್​ಸ್ಟಾ ಗ್ರಾಂ ಮೂಲಕ ಇಬ್ಬರೂ ಆತ್ಮೀಯರಾದರು.

ಅಂದಿನಿಂದ ಅವರು ಚಾಟ್​ ಮಾಡಲು ಆರಂಭಿಸಿದರು, ವ್ಯಕ್ತಿಯ ವಾಟ್ಸಾಪ್​ ನಂಬರ್ ತೆಗೆದುಕೊಂಡು ಸುಂದರ ಫೋಟೊಗಳನ್ನು ಕಳುಹಿಸಿದ್ದಳು.

ಆಗಷ್ಟೇ ಸಂಗಾತಿಯಿಂದ ಬೇರ್ಪಟ್ಟಿದ್ದ ವ್ಯಕ್ತಿ ಆಕೆಯ ಬಣ್ಣದ ಮಾತುಗಳಿಗೆ ಮರುಳಾಗಿದ್ದರು, ಭಾವನಾತ್ಮಕವಾಗಿಯೂ ಇಬ್ಬರ ನಡುವೆ ಬಾಂಧವ್ಯ ಹೆಚ್ಚಾಗಿತ್ತು. ನೇರ ಕರೆ ಇಲ್ಲ ಆದರೆ ಮೆಸೇಜ್ ಮೂಲಕವೇ ಮಾತನಾಡುತ್ತಿದ್ದರು. ಒಂದೊಮ್ಮೆ ಕರೆ ಮಾಡಿದರೆ ಕುಟುಂಬದ ಸದಸ್ಯರು ಇಲ್ಲಿದ್ದಾರೆ ಎಂದು ಹೇಳಿ ಕರೆ ಕಟ್ ಮಾಡುತ್ತಿದ್ದಳು.

ಮತ್ತಷ್ಟು ಓದಿ: ಶುಲ್ಕ ವಿವಾದ: ಪ್ಲೇಸ್ಟೋರ್‌ನಿಂದ ಮ್ಯಾಟ್ರಿಮೋನಿ ಆ್ಯಪ್ ತೆಗೆದುಹಾಕಿದ ಗೂಗಲ್

ಇಬ್ಬರೂ ಸ್ವಲ್ಪ ಹತ್ತಿರವಾದಾಗ ತನಗೆ ಈ ಮೊದಲು ಒಬ್ಬ ಬಾಯ್​ ಫ್ರೆಂಡ್​ ಇದ್ದಿದ್ದ ಆತ ಬ್ಲ್ಯಾಕ್​ಮೇಲ್ ಮಾಡಿ ಹಣ ಕೇಳಿ ಕಿರುಕುಳ ನೀಡುತ್ತಿದ್ದಾನೆ ಎಂದು ಆಕೆ ಹೇಳಿದ್ದಾಳೆ.

ಆಗ ಆ ವ್ಯಕ್ತಿಯ ಮನಸ್ಸು ಕರಗಿತ್ತು, ಒಂದೇ ಸಮಯಕ್ಕೆ 22 ಲಕ್ಷ ರೂ. ನೀಡಿದ್ದಾರೆ,  ಯಾವಾಗ ಭೇಟಿಯಾಗಲು ಪ್ರಯತ್ನಿಸಿದರೂ ಆಕೆ ನಿರಾಕರಿಸುತ್ತಿದ್ದಳು, ಆಗ ಅನುಮಾನ ಬಂದಿತ್ತು. ಆಗ ವ್ಯಕ್ತಿ ವಿಶಾಖಪಟ್ಟಣಂನಲ್ಲಿರುವ ಸೈಬರ್ ಕ್ರೈಂ ಪೊಲೀಸರನ್ನು ಸಂಪರ್ಕಿಸಿದ್ದಾರೆ.

ಪೊಲೀಸರು ವಾಟ್ಸಾಪ್ ಕರೆಗಳು ಹಾಗೂ ತಾಂತ್ರಿಕ ಸಾಕ್ಷ್ಯಗಳೊಂದಿಗೆ ವಿಶೇಷ ತಂಡವನ್ನು ಹೈದರಾಬಾದ್‌ಗೆ ಕಳುಹಿಸಿದ್ದಾರೆ. ಅಲ್ಲಿ ಒಂದು ವಾರ ಕೆಲಸ ಮಾಡಿದ ವಿಶಾಖ ಸೈಬರ್ ಕ್ರೈಂ ಪೊಲೀಸರು ಕೊನೆಗೂ ಆರೋಪಿಯನ್ನು ಬಂಧಿಸಿದ್ದಾರೆ.

ಆಕೆಯ ಹೆಸರು ಸಾಯಿ ಪ್ರಿಯಾ, ಹೈದರಾಬಾದಿನ ಮಾದಾಪುರದಲ್ಲಿ ವಾಸಿಸುತ್ತಿದ್ದಳು, ನೀಡಿರುವ ಫೋಟೊಗಳೇ ಬೇರೆ ಆಕೆಯೇ ಬೇರೆ. ಪೊಲೀಸರು ವಿಚಾರಣೆ ನಡೆಸಿದಾಗ ನಿಜವಾದ ವಿಷಯ ಹೊರಬಿದ್ದಿದೆ.

ಆಕೆಯ ಸೋಶಿಯಲ್ ಮೀಡಿಯಾ ಖಾತೆಯನ್ನು ಪರಿಶೀಲಿಸಿದಾಗ, ಅವಳು ಇತರ ಕೆಲವು ಜನರೊಂದಿಗೆ ಚಾಟ್ ಮಾಡುತ್ತಿದ್ದಳು ಎಂದು ಕಂಡುಬಂದಿದೆ . ಆಕೆಯನ್ನು ಬಂಧಿಸಿ ರಿಮಾಂಡ್‌ಗೆ ಕಳುಹಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ