Sudha Murty: ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ

ಸಮಾರಂಭಕ್ಕೆ ಸುಧಾ ಮೂರ್ತಿ ಪತಿ ಎನ್‌ಆರ್ ನಾರಾಯಣ ಮೂರ್ತಿ ಕೂಡಾ ಉಪಸ್ಥಿತರಾಗಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಸಂಸತ್ ಭವನದ ತಮ್ಮ ಚೇಂಬರ್‌ನಲ್ಲಿ ಸುಧಾ ಮೂರ್ತಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.73ರ ಹರೆಯದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ,ಲೇಖಕಿ ಕಳೆದ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.

Sudha Murty: ರಾಜ್ಯಸಭಾ ಸಂಸದರಾಗಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಸುಧಾ ಮೂರ್ತಿ
ಸುಧಾ ಮೂರ್ತಿ
Follow us
|

Updated on:Mar 14, 2024 | 3:50 PM

ದೆಹಲಿ ಮಾರ್ಚ್ 14: ಇಂಜಿನಿಯರ್, ಸಮಾಜ ಸೇವಕಿ, ಲೇಖಕಿ ಸುಧಾ ಮೂರ್ತಿ (Sudha Murty) ಅವರು ಇಂದು (ಗುರುವಾರ) ರಾಜ್ಯಸಭಾ ಸಂಸದರಾಗಿ (Rajya Sabha) ಪ್ರಮಾಣ ವಚನ ಸ್ವೀಕರಿಸಿದರು. ಸುಧಾ ಮೂರ್ತಿ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭಕ್ಕೆ ಸುಧಾ ಮೂರ್ತಿ ಪತಿ ಎನ್‌ಆರ್ ನಾರಾಯಣ ಮೂರ್ತಿ (NR Narayana Murthy) ಕೂಡಾ ಉಪಸ್ಥಿತರಾಗಿದ್ದರು. ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಖರ್ ಅವರು ಸಂಸತ್ ಭವನದ ತಮ್ಮ ಚೇಂಬರ್‌ನಲ್ಲಿ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ಸಭಾನಾಯಕ ಪಿಯೂಷ್ ಗೋಯಲ್ ಕೂಡ ಉಪಸ್ಥಿತರಿದ್ದರು.73ರ ಹರೆಯದ ಸುಧಾ ಮೂರ್ತಿ, ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ,ಲೇಖಕಿ ಕಳೆದ ಶುಕ್ರವಾರ ಅಂತಾರಾಷ್ಟ್ರೀಯ ಮಹಿಳಾ ದಿನದಂದು ರಾಜ್ಯಸಭೆಗೆ ನಾಮನಿರ್ದೇಶನಗೊಂಡರು.

ಸುಧಾ ಮೂರ್ತಿ ಕನ್ನಡ ಮತ್ತು ಇಂಗ್ಲಿಷ್ ಸಾಹಿತ್ಯಕ್ಕೆ ನೀಡಿದ ಕೊಡುಗೆಗಾಗಿ ಹೆಸರುವಾಸಿಯಾಗಿದ್ದಾರೆ. ಇವರು ಸಾಹಿತ್ಯ ಅಕಾಡೆಮಿ ಬಾಲ ಸಾಹಿತ್ಯ ಪುರಸ್ಕಾರ, ಪದ್ಮಶ್ರೀ (2006) ಮತ್ತು ಪದ್ಮಭೂಷಣ (2023) ಪುರಸ್ಕೃತರಾಗಿದ್ದಾರೆ.

ಸುಧಾ ಮೂರ್ತಿ ಪ್ರಮಾಣವಚನ

TELCO ನೊಂದಿಗೆ ಕೆಲಸ ಮಾಡಿದ ಮೊದಲ ಮಹಿಳಾ ಇಂಜಿನಿಯರ್ ಆಗಿರುವ ಸುಧಾ ಮೂರ್ತಿ ಅವರು ತಮ್ಮ ತುರ್ತು ನಿಧಿಯಿಂದ ₹ 10,000 ಬಂಡವಾಳವನ್ನು ತಮ್ಮ ಪತಿಗೆ ಇನ್ಫೋಸಿಸ್ ಅನ್ನು ಪ್ರಾರಂಭಿಸಲು ನೀಡಿದ್ದರು. ಅದೇ ಇನ್ಫೋಸಿಸ್ ಈಗ USD 80 ಶತಕೋಟಿಗೂ ಹೆಚ್ಚು ಮಾರುಕಟ್ಟೆಯನ್ನು ಹೊಂದಿದೆ. ಅವರ ಮಗಳು ಅಕ್ಷತಾ ಬ್ರಿಟನ್ ಪ್ರಧಾನಿಯಾಗಿರುವ ರಿಷಿ ಸುನಕ್ ಅವರ ಪತ್ನಿ.

ಸುಧಾ ಮೂರ್ತಿ ಕಿರು ಪರಿಚಯ

ಸುಧಾ ಮೂರ್ತಿ ಅವರು ಆಗಸ್ಟ್ 19, 1950 ರಂದು ಭಾರತದ ಕರ್ನಾಟಕದ ಹಾವೇರಿಯ ಶಿಗ್ಗಾಂವ್‌ನಲ್ಲಿ ಜನಿಸಿದರು, ಅವರ ಪೋಷಕರು ಡಾ. ಆರ್. ಹೆಚ್. ಕುಲಕರ್ಣಿ ಮತ್ತು ವಿಮಲಾ ಕುಲಕರ್ಣಿ. ದೇಶಸ್ಥ ಮಾಧ್ವ ಬ್ರಾಹ್ಮಣ ಕುಟುಂಬದಲ್ಲಿ ಬೆಳೆದ ಸುಧಾ ಅವರ ಪರಿಸರ ,ಶಿಕ್ಷಣ ಮತ್ತು ಶ್ರದ್ಧೆಯ ಮಹತ್ವವನ್ನು ಒತ್ತಿಹೇಳುವಂಥದ್ದಾಗಿತ್ತು.  ಸುಧಾ ಅವರ ಅಪ್ಪ ಸರ್ಜನ್, ತಾಯಿ ಬಾಲ್ಯದಿಂದಲೂ ಆಕೆಯ ಆಕಾಂಕ್ಷೆಗಳನ್ನು ಬೆಂಬಲಿಸಿದರು. ಸಾಮಾಜಿಕ ರೂಢಿಗಳ ಹೊರತಾಗಿಯೂ, ಸುಧಾ ತನ್ನ ಮಹತ್ವಾಕಾಂಕ್ಷೆಗಳನ್ನು ಮುಂದುವರಿಸಲು ಪ್ರೋತ್ಸಾಹ  ಸಿಕ್ಕಿತ್ತು., ಇದು ಆ ಯುಗದಲ್ಲಿ ಹುಡುಗಿಯರಿಗೆ ಅಸಾಮಾನ್ಯವಾದ ವೃತ್ತಿ ಮಾರ್ಗಗಳನ್ನು ಅನ್ವೇಷಿಸಲು ಅವಕಾಶ ಮಾಡಿಕೊಟ್ಟಿತು.

ಸುಧಾ ಅವರ ಹೆಸರಲ್ಲಿ  Murty ಎಂದು  ಬರೆಯಲಾಗುತ್ತದೆ Murthy ಎಂದು ಯಾಕಿಲ್ಲ?

ವಿವಿಧ ಸಂದರ್ಶನಗಳಲ್ಲಿ ಈ ವಿಷಯವನ್ನು ಸುಧಾ ಮೂರ್ತಿ ಹಂಚಿಕೊಂಡಿದ್ದಾರೆ. ಸುಧಾ ಮೂರ್ತಿ ಅವರ ಹೆಸರನ್ನು ಇಂಗ್ಲಿಷಿನಲ್ಲಿ ಬರೆಯುವಾಗ  ‘Murthy’ ಬದಲಿಗೆ ”Murty’ ಎಂದು ಬರೆಯಲಾಗುತ್ತದೆ. ಹೀಗೆ ಬರೆಯುವುದಕ್ಕೆ ಕಾರಣ ಸಂಸ್ಕೃತ ಪ್ರೀತಿ. ಅಪ್ಪನ ಸಲಹೆಯ ಮೇರೆಗೆ ಸುಧಾ ತಮ್ಮ ಹೆಸರಿನೊಂದಿಗೆ ‘ಮೂರ್ತಿ’ ಸರ್ ನೇಮ್ ಸೇರಿಸಿಕೊಂಡಿದ್ದರು. ಸಂಸ್ಕೃತ ಉಚ್ಚಾರಣೆಗೆ ಅನುಸಾರವಾಗಿ Murty  ಎಂದು ಬರೆಯಲಾಗುತ್ತಿದೆ. ಸುಧಾ ಮೂರ್ತಿಯವರು ‘THY’ ಬದಲಿಗೆ ‘TY’ ಅನ್ನು ಒತ್ತಾಯಿಸುವುದು ಸಾಂಸ್ಕೃತಿಕ ಸಮಗ್ರತೆ ಮತ್ತು ಭಾಷಾ ನಿಖರತೆಯನ್ನು ಎತ್ತಿಹಿಡಿಯುವಲ್ಲಿ ಅವರ ಅಚಲ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:35 pm, Thu, 14 March 24

ತಾಜಾ ಸುದ್ದಿ
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ಸುದೀಪ್​ರ ‘ಹುಚ್ಚ’ ಸಿನಿಮಾದಲ್ಲಿ ಗೆಳೆಯನ ಪಾತ್ರ ಕೇಳಿದ್ದರು ದರ್ಶನ್
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ