AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ

ಅಸ್ಟ್ರಾಜನಿಕ್ ಕಂಪನಿಯ ಲಸಿಕೆ ನೀಡುತ್ತಿರುವ ಇಂಗ್ಲೆಂಡ್ ತನ್ನು ಬಳಿ ಹೆಚ್ಚಿನ ಲಸಿಕೆಯ ದಾಸ್ತಾನು ಇರುವುದರಿಂದ 8 ವಾರದೊಳಗೆ ಎರಡನೇ ಡೋಸ್ ನೀಡಿಕೆ‌ಗೆ ತಿರ್ಮಾನಿಸಿದೆ.

ಎರಡನೇ ಡೋಸ್ ಲಸಿಕೆಯ ಅವಧಿ 12 ವಾರದಿಂದ 8 ವಾರಕ್ಕೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರದಿಂದ ತಿರ್ಮಾನ
ಪ್ರಾತಿನಿಧಿಕ ಚಿತ್ರ
preethi shettigar
|

Updated on: May 15, 2021 | 2:31 PM

Share

ಇಂಗ್ಲೆಂಡ್​ನಲ್ಲಿ ಎರಡನೇ ಡೋಸ್ ಕೊರೊನಾ ಲಸಿಕೆಯ ಅವಧಿಯನ್ನು 12 ವಾರದಿಂದ 8 ವಾರಗಳಿಗೆ ಇಳಿಕೆ‌ ಮಾಡಲು ಇಂಗ್ಲೆಂಡ್ ಸರ್ಕಾರ ನಿರ್ಧಾರ ತೆಗೆದುಕೊಂಡಿದೆ. ಅಸ್ಟ್ರಾಜನಿಕ್ ಕಂಪನಿಯ ಲಸಿಕೆ ನೀಡುತ್ತಿರುವ ಇಂಗ್ಲೆಂಡ್ ತನ್ನು ಬಳಿ ಹೆಚ್ಚಿನ ಲಸಿಕೆಯ ದಾಸ್ತಾನು ಇರುವುದರಿಂದ 8 ವಾರದೊಳಗೆ ಎರಡನೇ ಡೋಸ್ ನೀಡಿಕೆ‌ಗೆ ತಿರ್ಮಾನಿಸಿದೆ. ಈ ಮೊದಲು ಲಸಿಕೆ ಅವಧಿ ಹೆಚ್ಚಿಸಿದರೆ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ ಎನ್ನುವ ತಜ್ಞರ ಸಲಹೆಯಂತೆ ಈ ನಿರ್ಧಾರ ತೆಗೆದುಕೊಳ್ಳಲಾಗಿತ್ತು. ಆದರೆ ಇಂಗ್ಲೆಂಡ್ ಸರ್ಕಾರ ಈಗ ಮತ್ತೆ ತನ್ನ ನಿರ್ಧಾರಲ್ಲಿ ಬದಲಾವಣೆ ತಂದಿದೆ.

ಭಾರತದಲ್ಲಿ ಈಗ ಎರಡನೇ ಡೋಸ್ ಲಸಿಕೆ ನೀಡಿಕೆ ಅವಧಿ 12 ರಿಂದ16 ವಾರಗಳಿಗೆ ಹೆಚ್ಚಳ‌‌ ಕೊವಿಶೀಲ್ಡ್​ ಕೊವಿಡ್19 ಲಸಿಕೆಯ ಒಂದು ಡೋಸ್​ನಿಂದ ಇನ್ನೊಂದು ಡೋಸ್ ತೆಗೆದುಕೊಳ್ಳುವ ಅವಧಿಯನ್ನು 12-16 ವಾರಗಳಿಗೆ ವಿಸ್ತರಿಸುವುದಾಗಿ ಕೇಂದ್ರ ಸರ್ಕಾರ ಹೇಳಿದೆ. ಈ ಮೊದಲು ಕೊವಿಶೀಲ್ಡ್ ಮೊದಲ ಡೋಸ್ ತೆಗೆದುಕೊಂಡ 6 ರಿಂದ 8ವಾರದೊಳಗೆ ಇನ್ನೊಂದು ಡೋಸ್ ಲಸಿಕೆ ಪಡೆಯಬೇಕಿತ್ತು. ಇನ್ನು ಕೊವಿಶೀಲ್ಡ್ ಲಸಿಕೆ ಪಡೆಯುವ ಅವಧಿಯ ಬಗ್ಗೆ ಮಾತ್ರ ಕೇಂದ್ರ ಸರ್ಕಾರ ಸೂಚನೆ ನೀಡಿದ್ದು, ಕೊವ್ಯಾಕ್ಸಿನ್ ಮೊದಲ ಡೋಸ್​ ಹಾಗೂ ಎರಡನೇ ಡೋಸ್​ ಪಡೆಯುವ ಮಧ್ಯಂತರ ಅವಧಿಯಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಹಾಗಾಗಿ ಇದು ಕೊವಿಶೀಲ್ಡ್ ಪಡೆಯುವವರಿಗೆ ಮಾತ್ರ ಅನ್ವಯ ಆಗಲಿದೆ. ಮೊದಲು ಕೊವಿಶೀಲ್ಡ್​ ಲಸಿಕೆ ಮೊದಲ ಡೋಸ್ ಪಡೆದ 4 ರಿಂದ 6ವಾರದೊಳಗೆ ಇನ್ನೊಂದು ಡೋಸ್ ಪಡೆಯಲು ಕೇಂದ್ರ ಸೂಚಿಸಿತ್ತು.

ಅದಾದ ನಂತರ ಅದನ್ನು 6-8ವಾರಗಳಿಗೆ ವಿಸ್ತರಿಸಿ, ಇದೀಗ ಮತ್ತೆ 12-16 ವಾರಗಳಿಗೆ ನಿಗದಿಮಾಡಿದೆ. ಕೆಲವು ಅಧ್ಯಯನಗಳನ್ನು ಅವಲೋಕಿಸಿದಾಗ ಕೊವಿಶೀಲ್ಡ್ ಲಸಿಕೆಯ ಮೊದಲ ಮತ್ತು ಎರಡನೇ ಡೋಸ್ ಮಧ್ಯಂತರ ಅವಧಿಯನ್ನು ಹೆಚ್ಚಿಸಬಹುದು ಎಂಬುದು ಸಾಬೀತಾಗಿದೆ. ಹಾಗಾಗಿ 12-16ವಾರಗಳಿಗೆ ವಿಸ್ತರಿಸಿ ಎಂದು ಕೇಂದ್ರಸರ್ಕಾರಕ್ಕೆ ತಜ್ಞರ ತಂಡ ಶಿಫಾರಸು ಮಾಡಿತ್ತು. ಅದಕ್ಕೀಗ ಸರ್ಕಾರ ಸಮ್ಮತಿ ನೀಡಿದೆ. ಇನ್ನು ಅವಧಿ ಹೆಚ್ಚಿಸುವುದಕ್ಕೂ ಮೊದಲು ವಿಶ್ವ ಆರೋಗ್ಯ ಸಂಸ್ಥೆಯ ಗಮನಕ್ಕೂ ಇದನ್ನು ತರಲಾಗಿದೆ.

ಇದನ್ನೂ ಓದಿ:

ಸೆರಮ್ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಲಸಿಕೆ ಅವಧಿ ಹೆಚ್ಚಳದ ಬಗ್ಗೆ ತಜ್ಞರ ಚರ್ಚೆ

Explainer: ವಿದೇಶಿ ಕೊರೊನಾ ಲಸಿಕೆಗಳಿಗೆ ಅನುಮತಿ ನೀಡಲು ತುದಿಗಾಲಲ್ಲಿ ನಿಂತಿದೆ ಭಾರತ ಸರ್ಕಾರ; ಉಂಟಾ ಏನಾದರೂ ಪ್ರಯೋಜನ?

Follow Us
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
ಲಕ್ನೋದ ಬೆಂಕಿ ಅವಘಡದ ಸ್ಥಳಕ್ಕೆ ಸಿಎಂ ಯೋಗಿ ಭೇಟಿ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ