AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
TV9 Web
| Edited By: sandhya thejappa|

Updated on:Aug 12, 2021 | 8:50 AM

Share

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

Follow Us
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ