ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!

ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ.

ತಾಂತ್ರಿಕ ದೋಷದಿಂದ ಇಒಎಸ್-3 ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲ!
ಕಕ್ಷೆಗೆ ತಲುಪುವಲ್ಲಿ ವಿಫಲವಾದ ಇಒಎಸ್-3
Follow us
| Edited By: sandhya thejappa

Updated on:Aug 12, 2021 | 8:50 AM

ದೆಹಲಿ: ಭಾರತೀಯ ಬಾಹ್ಯಕಾಶ ಸಂಶೋಧನಾ ಸಂಸ್ಥೆಯ (ISRO) ಭೂಮಿಯ ಅವಲೋಕನ ಉಪಗ್ರಹ ಇಒಎಸ್​-3 (EOS-3) ಇಂದು (ಆಗಸ್ಟ್ 12) ಬೆಳಿಗ್ಗೆ 5.45ಕ್ಕೆ ಸತೀಶ್ ಧವನ್ ಬಾಹ್ಯಕಾಶ ಕೇಂದ್ರದಿಂದ ಉಡಾವಣೆಯಾಗಿತ್ತು. ಆದರೆ ಉಪಗ್ರಹ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ. ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆ ವಿಫಲವಾಗಿದೆ ಎಂದು ತಿಳಿದುಬಂದಿದೆ. ಉಪಗ್ರಹ 2020ರ ಮಾರ್ಚ್​​ನಲ್ಲಿ ಉಡಾವಣೆಯಾಗಬೇಕಿತ್ತು. ಆದರೆ ತಾಂತ್ರಿಕ ದೋಷ ಹಿನ್ನೆಲೆ ಕೊನೆಯ ಕ್ಷಣದಲ್ಲಿ ರದ್ದಾಗಿತ್ತು.

ಬೆಳಿಗ್ಗೆ 5.45ಕ್ಕೆ ಇಒಎಸ್-3 ಉಪಗ್ರಹ ಉಡಾವಣೆಯಾಗಿತ್ತು. ಆದರೆ ಕಕ್ಷೆಗೆ ತಲುಪುವಲ್ಲಿ ಇಒಎಸ್-3 ವಿಫಲವಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಜಿಎಸ್​ಎಲ್​ವಿ- ಎಫ್ 10 (GSLV-F10) ಮೂಲಕ ಉಪಗ್ರಹ ಉಡಾವಣೆಯಾಗಿತ್ತು.

ಇಒಎಸ್‌-3 ಉಪಗ್ರಹವು ಪ್ರವಾಹ, ಚಂಡಮಾರುತ ಸೇರಿ ಪ್ರಾಕೃತಿಕ ವಿಕೋಪಗಳನ್ನು ಮುಂದಾಗಿ ಗ್ರಹಿಸಲಿತ್ತು. ಇದನ್ನು ಜಿಯೋಸಿಂಕ್ರೋನಸ್‌ ಸೆಟಲೈಟ್‌ ಲಾಂಚ್‌ ವೆಹಿಕಲ್‌-ಎಫ್‌10 ಮೂಲಕ ಎಸ್‌ಡಿಎಸ್‌ಸಿಯ 2ನೇ ಲಾಂಚ್‌ಪ್ಯಾಡ್‌ನಿಂದ ಹೊತ್ತೊಯ್ದಿತ್ತು. ಆದರೆ ಕ್ರಯೋಜನಿಕ್ ಯಂತ್ರದಲ್ಲಿ ತಾಂತ್ರಿಕ ದೋಷದ ಹಿನ್ನೆಲೆ ಕಕ್ಷೆಗೆ ತಲುಪುವಲ್ಲಿ ವಿಫಲವಾಗಿದೆ.

ಇದನ್ನೂ ಓದಿ

EOS-03: ಭೂಚಲನೆ ಅವಲೋಕಿಸುವ ಇಒಎಸ್-03 ಯಶಸ್ವಿ ಉಡಾವಣೆ, ಫೋಟೋ ಹಂಚಿಕೊಂಡ ಇಸ್ರೋ

ಚಂದ್ರಯಾನ -2ರ ನಂತರ ಆಗಸ್ಟ್ 12ರಂದು ಇಒಎಸ್3 ಉಪಗ್ರಹ ಉಡಾವಣೆ ಮಾಡಲಿದೆ ಇಸ್ರೊ

(EOS-3 failed again to reach satellite orbit)

Published On - 8:35 am, Thu, 12 August 21

ತಾಜಾ ಸುದ್ದಿ
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ಬೈಯ್ಯುವ ಬಿಜೆಪಿ ಶಾಸಕ ಹರೀಶ್ ವಿಡಿಯೋ ವೈರಲ್
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ಪ್ರತಾಪ್ ಪರಿಸ್ಥಿತಿ ನೋಡಿ ತಪ್ಪಿತಸ್ಥ ಭಾವನೆ ಕಾಡಿದ್ದು ವರ್ತೂರಿಗೆ ಮಾತ್ರ​
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ತುಕಾಲಿಯ ಡ್ಯಾನ್ಸ್​ ನೋಡಿ ಬೆಚ್ಚಿ ಬಿದ್ದ ಮನೆ ಮಂದಿ
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಕಾಮಸಮುದ್ರ ಅರಣ್ಯದತ್ತ ಆಗಮಿಸಿದ 50ಕ್ಕೂ ಹೆಚ್ಚು ಕಾಡಾನೆಗಳು
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಬಸವಣ್ಣನ ವಚನ ಹೇಳಿ ನೆರೆದವರಿಗೆ ಶಾಕ್ ನೀಡಿದ ಪೂಜಾ ಗಾಂಧಿ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರುಳಿ‌ನ ಕುಡಿ ರಕ್ಷಣೆಗೆ ತಾಯಿ ಆಕಳು ಹೋರಾಟ; ಇಲ್ಲಿದೆ ಮನಕಲುಕುವ ದೃಶ್ಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
ಕರಿಬಸವೇಶ್ವರ ಜಾತ್ರೆಯಲ್ಲಿದೆ ವಿಶೇಷ; ಮಹಿಳೆಯರೇ ರಥ ಎಳೆಯುವ ಸಂಪ್ರದಾಯ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
1 ಆಧಾರ್​ ಕಾರ್ಡ್​ನ 2 ಪ್ರತಿ ತೋರಿಸಿ KSRTCಯಲ್ಲಿ ಇಬ್ಬರು ಮಹಿಳೆಯರ ಪ್ರಯಾಣ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
ಭಾರತ-ಆಫ್ರಿಕಾ ಟಿ20 ಟ್ರೋಫಿ ಫೋಟೋ ಶೂಟ್​ನಲ್ಲಿ ಮಿಂಚಿದ ಸೂರ್ಯ: ವಿಡಿಯೋ
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು
‘ನನಗೆ ಯುವರಾಜ್​ ಅಂತ ಅವರೇ ಹೆಸರು ಇಟ್ಟಿದ್ದು’: ಲೀಲಾವತಿ ಮೊಮ್ಮಗನ ಮಾತು