AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್

ತಮಿಳುನಾಡು ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಉದಯನಿಧಿ ಸ್ಟಾಲಿನ್ ಖ್ಯಾತ ಚಲನಚಿತ್ರ ನಟರೂ ಆಗಿದ್ದಾರೆ. 2023ರ ಸೆಪ್ಟೆಂಬರ್ ತಿಂಗಳಲ್ಲಿ ನಡೆದ ಸಮ್ಮೇಳನದಲ್ಲಿ ಭಾಷಣ ಮಾಡಿ ವಿವಾದಕ್ಕೆ ಸಿಲುಕಿದ್ದರು. ತಮ್ಮ ಭಾಷಣದಲ್ಲಿ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮ ಕೊರೊನಾ ರೋಗವಿದ್ದಂತೆ ಎಂದು ಹೇಳಿದ್ದರು.

ಸನಾತನ ಧರ್ಮ ಕುರಿತ ವಿವಾದಾತ್ಮಕ ಹೇಳಿಕೆ; ಸಚಿವ ಉದಯನಿಧಿ ಸ್ಟಾಲಿನ್ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ಉದಯನಿಧಿ ಸ್ಟಾಲಿನ್
ಸುಷ್ಮಾ ಚಕ್ರೆ
|

Updated on: Nov 22, 2024 | 4:19 PM

Share

ನವದೆಹಲಿ: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಕುರಿತಾದ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದರು. ಅವರ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳನ್ನು ಕ್ರೋಢೀಕರಿಸಲು ಕೋರಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು ಮುಂದೂಡಿದೆ. ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರನ್ನೊಳಗೊಂಡ ಪೀಠ ಅರ್ಜಿ ವಿಚಾರಣೆಯನ್ನು 2025ರ ಫೆಬ್ರವರಿಗೆ ಮರು ನಿಗದಿಪಡಿಸಿದೆ.

ತಮಿಳುನಾಡಿನ ಯುವಜನ ಕಲ್ಯಾಣ ಮತ್ತು ಕ್ರೀಡಾ ಸಚಿವ ಹಾಗೂ ನಟನೂ ಆಗಿರುವ ಉದಯನಿಧಿ ಸ್ಟಾಲಿನ್ ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಅವರ ಪುತ್ರನೂ ಹೌದು. ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ತಮ್ಮ “ಸನಾತನ ಧರ್ಮವನ್ನು ನಿರ್ಮೂಲನೆ ಮಾಡಿ” ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಅನೇಕ ಎಫ್‌ಐಆರ್‌ಗಳನ್ನು ಸಂಯೋಜಿಸುವಂತೆ ಕೋರಿ ಸಲ್ಲಿಸಿದ ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಇಂದು (ಶುಕ್ರವಾರ) ಮುಂದೂಡಿದೆ.

ಇದನ್ನೂ ಓದಿ: ‘ಕಾದು ನೋಡೋಣ’: ‘ಸನಾತನ ಧರ್ಮ’ ಹೇಳಿಕೆ ಬಗ್ಗೆ ಪವನ್ ಕಲ್ಯಾಣ್ ಟೀಕೆಗೆ ಉದಯನಿಧಿ ಸ್ಟಾಲಿನ್ ಪ್ರತಿಕ್ರಿಯೆ

ಸನಾತನ ಧರ್ಮ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ವಿರುದ್ಧವಾದುದು ಎಂದಿದ್ದ ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು “ಕೊರೊನಾವೈರಸ್, ಮಲೇರಿಯಾ ಮತ್ತು ಡೆಂಗ್ಯೂ” ನಂತಹ ಕಾಯಿಲೆಗಳಿಗೆ ಹೋಲಿಸಿದ್ದರು. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ಮಹಾರಾಷ್ಟ್ರ, ರಾಜಸ್ಥಾನ, ಉತ್ತರ ಪ್ರದೇಶ, ಬಿಹಾರ, ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶ, ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಾದ್ಯಂತ ಅನೇಕ ಎಫ್‌ಐಆರ್‌ಗಳು ದಾಖಲಿಸಲಾಗಿತ್ತು.

ವಿಚಾರಣಾ ನ್ಯಾಯಾಲಯಗಳ ಮುಂದೆ ದೈಹಿಕವಾಗಿ ಹಾಜರಾಗುವುದರಿಂದ ರಾಜಕಾರಣಿ ಉದಯನಿಧಿ ಸ್ಟಾಲಿನ್​ಗೆ ವಿನಾಯಿತಿ ನೀಡುವ ಮಧ್ಯಂತರ ಆದೇಶವು ಮುಂದಿನ ಆದೇಶದವರೆಗೆ ಮುಂದುವರಿಯುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಇದನ್ನೂ ಓದಿ: 16 ಮಕ್ಕಳನ್ನು ಹೊಂದುವಂತೆ ಜನತೆಗೆ ಮನವಿ ಮಾಡಿದ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್

ಏನಿದು ಘಟನೆ?:

2023ರ ಸೆಪ್ಟೆಂಬರ್​ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ್ದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಹಾಗೂ ಕೊರೋನಾ ಇದ್ದಂತೆ. ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿರುವ ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು. ಇದನ್ನು ಹಿಂದೂ ಸಂಘಟನೆಗಳು ಖಂಡಿಸಿದ್ದವು. ಈ ಕುರಿತು ಕೇಸ್ ದಾಖಲಾಗಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ಫೈನಲ್​ನಲ್ಲಿ ಸಿಎಸ್​​ಕೆ ದಾಖಲೆ ಮುರಿದ ಆರ್​ಸಿಬಿ
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ