ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಮಹಿಳೆಯರ ರಕ್ಷಣೆಗಾಗಿ ರಾಷ್ಟ್ರೀಯ ಏಜೆನ್ಸಿ ಸ್ಥಾಪಿಸಿ: ಸದ್ಗುರು

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿದಂತೆ ಸದ್ಗುರು ಸರ್ಕಾರಕ್ಕೆ ಒಂದು ಮಹತ್ವ ಸಲಹೆಯನ್ನು ನೀಡಿದ್ದಾರೆ. ಈ ಮೂಲಕ ಮಹಿಳೆಯರ ರಕ್ಷಣೆಯಾಗಬೇಕಿದೆ. ಸಂತೋಷ, ಶಾಂತಿ ಮತ್ತು ಸಮತೋಲನ, ಮಾನವೀಯತೆ ಉಳಿಯಬೇಕಾದರೆ ಮೊದಲು ಭಾರತ ಮಹಾಭಾರತವಾಗಬೇಕು. ಅದಕ್ಕಾಗಿ ಸರ್ಕಾರ ಮೊದಲು ಮಹಿಳೆಯರ ರಕ್ಷಣೆ ಮಾಡಬೇಕು.

ಕೋಲ್ಕತ್ತಾ ವೈದ್ಯೆಯ ಅತ್ಯಾಚಾರ ಪ್ರಕರಣ: ಮಹಿಳೆಯರ ರಕ್ಷಣೆಗಾಗಿ ರಾಷ್ಟ್ರೀಯ ಏಜೆನ್ಸಿ ಸ್ಥಾಪಿಸಿ: ಸದ್ಗುರು
Follow us
|

Updated on:Aug 17, 2024 | 12:22 PM

ಭಾರತವನ್ನು ಬೆಚ್ಚಿಬೀಳಿಸಿದ ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ 31 ವರ್ಷದ ಸ್ನಾತಕೋತ್ತರ ತರಬೇತಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿದಂತೆ ರಾಷ್ಟ್ರವ್ಯಾಪಿ ಪ್ರತಿಭಟನೆ, ಮುಷ್ಕರ, ಆಕ್ರೋಶ ಎಲ್ಲವು ವ್ಯಕ್ತವಾಗಿದೆ. ಇದರ ನಡುವೆ ಇಶಾ ಫೌಂಡೇಶನ್‌ನ ಸಂಸ್ಥಾಪಕರು ಸದ್ಗುರು ಸರ್ಕಾರಕ್ಕೆ ಒಂದು ಮಹತ್ವ ಸಲಹೆಯನ್ನು ನೀಡಿದ್ದಾರೆ. ಭಾರತದಲ್ಲಿ ಮಹಿಳೆಯರ ವಿರುದ್ಧದ ಅಪರಾಧಗಳು ಹೆಚ್ಚುತ್ತಿದೆ. ಅದನ್ನು ತಡೆಯಲು ರಾಷ್ಟ್ರೀಯ ಏಜೆನ್ಸಿಗಳನ್ನು ಸ್ಥಾಪಿಸುವಂತೆ ತಿಳಿಸಿದ್ದಾರೆ.

ಈ ಬಗ್ಗೆ ಎಕ್ಸ್​ನಲ್ಲಿ ಟ್ವೀಟ್​​​ ಮಾಡಿರುವ ಅವರು ಇಂತಹ ಘೋರ ಅಪರಾಧಗಳನ್ನು ರಾಜ್ಯ ಮಾತ್ರವಲ್ಲ, ರಾಷ್ಟ್ರೀಯ ಏಜೆನ್ಸಿಗಳು ಪರಿಹರಿಸಬೇಕು .ಈ ದೇಶದಲ್ಲಿ ಮಹಿಳೆಯರ ವಿರುದ್ಧದ ಅತ್ಯಂತ ಭೀಕರ ಕೃತ್ಯಗಳು ನಡೆಯುತ್ತಿದೆ. ಇದನ್ನು ಪರಿಹಾರ ಮಾಡಲು ಸರ್ಕಾರ ರಾಜ್ಯದಲ್ಲಿ ಮಾತ್ರವಲ್ಲ ಮಹಿಳೆಯರಿಗಾಗಿ ರಾಷ್ಟ್ರೀಯ ಏಜೆನ್ಸಿಗಳು ಬೇಕು ಎಂದು ಹೇಳಿದ್ದಾರೆ. ಇಂತಹ ಕ್ರೂರ ಕೃತ್ಯಗಳು ನಡೆದಾಗ ಯಾವ ಪ್ರಜೆಯು ಸುಮ್ಮನಿರುವುದಿಲ್ಲ. ಅದಕ್ಕಾಗಿ ಇಂತಹ ಕ್ರೂರತೆಯನ್ನು ತಡೆಯಲು ಮೊದಲು ಸರ್ಕಾರಗಳು ಏಜೆನ್ಸಿಗಳನ್ನು ಸ್ಥಾಪನೆ ಮಾಡಬೇಕು ಎಂದು ಹೇಳಿದ್ದಾರೆ.

ಈ ಘಟನೆಯ ನಂತರ ಅನೇಕರು ಸ್ವಾತಂತ್ರ ದಿನಾಚರಣೆಯಂದು, ಪ್ರತಿಭಟನೆ, ಆ ಹೆಣ್ಣು ಮಗಳ ಫೋಟೋಗಳನ್ನು ಹಾಕಿ ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ತಿಳಿಸಿದ್ದಾರೆ. ಭಾರತ ಪ್ರಜಾಪ್ರಭುತ್ವ ರಾಷ್ಟ್ರ ಅಲ್ಲಿ ಎಲ್ಲರನ್ನೂ ರಕ್ಷಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ, ಅದರಲ್ಲೂ ಮಹಿಳೆಗೆ ಭಾರತದಲ್ಲಿ ಮಾತೃ ಸ್ಥಾನಮಾನ ಇದೆ. ಸ್ವಾತಂತ್ರ್ಯ ಸಿಕ್ಕ ದಿನವೇ ಈ ರೀತಿಯ ಕೃತ್ಯ ನಡೆದಿರುವುದು ತುಂಬಾ ನೋವು ಉಂಟು ಮಾಡಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ವೈದ್ಯೆಯ ಅತ್ಯಾಚಾರ, ಕೊಲೆ ಕೇಸ್; ಮಮತಾ ಬ್ಯಾನರ್ಜಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಎಕ್ಸ್​​​​ನಲ್ಲಿ ಸದ್ಗುರು ಟ್ವೀಟ್​​

ನಾವು ಭಾರತ ಎಂದು ಹೇಳಿದಾಗ, ಇದು ನಿರಂಕುಶವಾದದ ಸಂಸ್ಕೃತಿಯಲ್ಲ, ಭಾರತದ ಸಂಸ್ಕೃತಿ ಇದು ಎಲ್ಲರನ್ನೂ ಒಳಗೊಳ್ಳುವ ಸಂಸ್ಕೃತಿಯಾಗಿದೆ. ಈ ಒಳಗೊಳ್ಳುವಿಕೆ ಈಗಿನ ಕಾಲಕ್ಕೆ ಅಗತ್ಯವಾಗಿದೆ. ವ್ಯಕ್ತಿಯ ಮಟ್ಟದಲ್ಲಿ ಈ ವಿಚಾರಗಳು ಬೆಳೆಯಬೇಕು ಹಾಗೂ ಸಂತೋಷ, ಶಾಂತಿ ಮತ್ತು ಸಮತೋಲನ, ಮಾನವೀಯತೆ ಉಳಿಯಬೇಕಾದರೆ ಮೊದಲು ಭಾರತ ಮಹಾಭಾರತವಾಗಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:21 pm, Sat, 17 August 24

ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಹೃದಯ ವಿದ್ರಾವಕ ಘಟನೆ: ಬೈಕ್‌ನಲ್ಲೇ ತಂದೆಯ ಶವ ಸಾಗಿಸಿದ ಮಕ್ಕಳು
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಭಾರತದ ಷೇರುಪೇಟೆ ಇನ್ನೆಷ್ಟು ಬೇಗ ಡಬಲ್ ಆಗುತ್ತೆ?
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ