Sign In

By signing in or creating an account, you agree with Associated Broadcasting Company's Terms & Conditions and Privacy Policy.

2025 ರ ವೇಳೆಗೆ ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಲಭ್ಯವಾಗಲಿದೆ -ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಾಗಲಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ.

2025 ರ ವೇಳೆಗೆ ದೇಶಾದ್ಯಂತ 20% ಎಥೆನಾಲ್ ಮಿಶ್ರಿತ ಪೆಟ್ರೋಲ್, E20 ಲಭ್ಯವಾಗಲಿದೆ -ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ
ಹರ್ದೀಪ್ ಸಿಂಗ್ ಪುರಿ
Follow us
TV9 Web
| Updated By: ಆಯೇಷಾ ಬಾನು

Updated on:Jul 08, 2023 | 12:19 PM

ಭಾರತವು ಮುಂದಿನ ವರ್ಷದ ಏಪ್ರಿಲ್‌ನಿಂದ ಆಯ್ದ ಪೆಟ್ರೋಲ್ ಪಂಪ್‌ಗಳಲ್ಲಿ ಶೇಕಡಾ 20 ರಷ್ಟು ಎಥೆನಾಲ್‌ನೊಂದಿಗೆ ಪೆಟ್ರೋಲ್ ಪೂರೈಸಲು ಪ್ರಾರಂಭಿಸಲಿದೆ(20 % Ethanol Blended Petrol). ತೈಲ ಆಮದು ಅವಲಂಬನೆಯನ್ನು ಕಡಿತಗೊಳಿಸಲು ಮತ್ತು ಪರಿಸರ ಸಮಸ್ಯೆಗಳನ್ನು ಬಗೆಹರಿಸಲು ಸರಬರಾಜನ್ನು ಮತ್ತಷ್ಟು ಹೆಚ್ಚಿಸಲಾಗುತ್ತೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ(Hardeep Singh Puri) ತಿಳಿಸಿದ್ದಾರೆ.

20 ಪ್ರತಿಶತ ಎಥೆನಾಲ್ ಮಿಶ್ರಿತ ಪೆಟ್ರೋಲ್, E20, 2025 ರ ವೇಳೆಗೆ ಭಾರತದಾದ್ಯಂತ ಲಭ್ಯವಿರುತ್ತದೆ. ನಿನ್ನೆ ನಡೆದ ಭಾರತೀಯ ಮರ್ಚೆಂಟ್ಸ್ ಚೇಂಬರ್‌ಗಳ ವರ್ಚುವಲ್ ಸಭೆಯ ನಂತರ ಮಾತನಾಡಿದ ಸಚಿವ ಹರ್ದೀಪ್ ಸಿಂಗ್ ಪುರಿ ಅವರು, ಮೊದಲ E20 ವಿಶೇಷ ಇಂಧನ ಔಟ್ಲೆಟ್ ಅನ್ನು ಈ ವರ್ಷದ ಫೆಬ್ರವರಿಯಲ್ಲಿ ತೆರೆಯಲಾಗಿತ್ತು, ನಂತರ ಇದರ ಸಂಖ್ಯೆ ಈಗಾಗಲೇ 600 ದಾಟಿದೆ. 2025 ರ ವೇಳೆಗೆ ದೇಶಾದ್ಯಂತ E20 ವಿಶೇಷ ಇಂಧನ ಔಟ್ಲೆಟ್​ಗಳು ಲಭ್ಯವಿರಲಿವೆ ಎಂದರು.

ಇದನ್ನೂ ಓದಿ:DRDO Scientist: ಪಾಕ್ ಮಹಿಳೆಯ ಮೋಹಕ್ಕೆ ಬಿದ್ದು, ಭಾರತ ಕ್ಷಿಪಣಿ ರಹಸ್ಯಗಳನ್ನು ಬಹಿರಂಗಪಡಿಸಿದ DRDO ವಿಜ್ಞಾನಿ: ಎಟಿಎಸ್ ವರದಿ 

2013-14ರಲ್ಲಿ ಪೆಟ್ರೋಲ್‌ನಲ್ಲಿ ಎಥೆನಾಲ್ ಮಿಶ್ರಣ 38 ಕೋಟಿ ಲೀಟರ್‌ನಿಂದ 2021-22ರಲ್ಲಿ 433 ಕೋಟಿ ಲೀಟರ್‌ಗೆ ಏರಿಕೆಯಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. 2016-17ರಲ್ಲಿ ಜೈವಿಕ ಇಂಧನವನ್ನು ಮಾರಾಟ ಮಾಡುವ ಇಂಧನ ಕೇಂದ್ರಗಳ ಸಂಖ್ಯೆ 30 ಸಾವಿರದಿಂದ 67,640 ಕ್ಕೆ ಹೆಚ್ಚಿದೆ.

ಕಳೆದ ಒಂಬತ್ತು ವರ್ಷಗಳಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಬೆಳವಣಿಗೆಯನ್ನು ಕಂಡಿದೆ. ದೇಶವು ಈಗ ವಿಶ್ವದ ಮೂರನೇ ಅತಿದೊಡ್ಡ ಇಂಧನ ಗ್ರಾಹಕ, ಮೂರನೇ ಅತಿದೊಡ್ಡ ತೈಲ ಗ್ರಾಹಕ ಮತ್ತು ಮೂರನೇ ಅತಿದೊಡ್ಡ ಎಲ್‌ಪಿಜಿ ಗ್ರಾಹಕನಾಗಿ ನಿಂತಿರುವುದರಿಂದ ಬೆಳವಣಿಗೆ ಮತ್ತು ಶಕ್ತಿಯ ಪರಸ್ಪರ ಸಂಬಂಧವು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಅವರು ಹೇಳಿದರು. ದೇಶವು ನಾಲ್ಕನೇ ಅತಿದೊಡ್ಡ ಎಲ್‌ಎನ್‌ಜಿ ಆಮದುದಾರ, ನಾಲ್ಕನೇ ಅತಿದೊಡ್ಡ ರಿಫೈನರ್ ಮತ್ತು ವಿಶ್ವದ ನಾಲ್ಕನೇ ಅತಿದೊಡ್ಡ ಆಟೋಮೊಬೈಲ್ ಮಾರುಕಟ್ಟೆಯಲ್ಲಿ ನಿಂತಿದೆ. ಭಾರತದ ಬೆಳವಣಿಗೆಯು ಜಗತ್ತಿನಾದ್ಯಂತ ವಿಸ್ಮಯ ಮತ್ತು ವಿಶ್ವಾಸವನ್ನು ಹುಟ್ಟುಹಾಕಿದೆ. ಮತ್ತು ಪ್ರತಿಯೊಬ್ಬ ಭಾರತೀಯನ ಭರವಸೆ ಮತ್ತು ಹೆಮ್ಮೆಯ ಮೂಲವಾಗಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.

ದೇಶದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 12:17 pm, Sat, 8 July 23

ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ